
ಕುಣಿಗಲ್(ತುಮಕೂರು)(ಆ.16): ಸ್ವಾತಂತ್ರ್ಯ ದಿನಾಚರಣೆ ವೇದಿಕೆ ಹತ್ತಿರವೇ ಅನ್ಯ ಕೋಮಿನ ಯುವಕರ ಗುಪೊಂದು ಪ್ಯಾಲೆಸ್ತೀನ್ ಬಾವುಟ ಹಾರಿಸಲು ಯತ್ನಿಸಿದ್ದು, 6 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಟ್ಟಣದ ಜಿಕೆಬಿಎಂಎಸ್ ಮೈದಾನದಲ್ಲಿ ತಾಲೂಕು ಆಡಳಿತದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸ್ವಾತಂತ್ರೋತ್ಸವ ಮುಂಭಾಗದಲ್ಲಿ ದೇಶಭಕ್ತಿ ಕಾರ್ಯಕ್ರಮಗಳು ನಡೆಯುವಾಗ ವೇದಿಕೆ ಹಿಂಭಾಗ ಅನ್ಯ ಕೋಮಿನ ಯುವಕರು ಪ್ಯಾಲೆಸ್ತೀನ್ ಪರ ಬಾವುಟ ಹಾರಿಸಲು ಯತ್ನಿಸಿದ್ದರು. ಇದನ್ನು ಗಮನಿಸಿದ ಮತ್ತೊಂದು ಕೋಮಿನ ಯುವಕರು ತಡೆದಿದ್ದಾರೆ.
3 ವರ್ಷದಲ್ಲಿ 4 ಮದುವೆ: ಇಬ್ಬರು ಮಕ್ಕಳಿರುವ ಈಕೆಗೆ ಅವಿವಾಹಿತ ಯುವಕರೇ ಟಾರ್ಗೆಟ್..!
ಈ ಸಂಬಂಧ 6 ಜನರನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ ತವರು ಜಿಲ್ಲೆಯಲ್ಲಿಯೇ ಸ್ವಾತಂತ್ರ್ಯ ದಿನದಂದು ದೇಶದ್ರೋಹಿ ಕೃತ್ಯ ನಡೆದಿರುವುದು ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ