
ಕಾರವಾರ, ಉತ್ತರಕನ್ನಡ (ಜೂ.16): ಅಕ್ರಮವಾಗಿ ಜಾನುವಾರು ಸಾಗಾಟ ಮಾಡಲು ಯತ್ನಿಸಿದ ಘಟನೆ ಹಳಿಯಾಳ ರಸ್ತೆಯ 3 ನಂಬರ್ ಗೇಟ್ ಬಳಿ ನಡೆದಿದೆ. ಘಟನೆ ಸಂಬಂಧ ಓರ್ವ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಅಡಿಕೆ ಹೊಸೂರು ಗ್ರಾಮದ ಶರೀಫ್ ಸಿದ್ಧಿ, ಬಂಧಿತ ಆರೋಪಿ.ಕೆಎ-31- 3994 ಸಂಖ್ಯೆಯ ಟಾಟಾ ಎಸಿ ವಾಹನದಲ್ಲಿ ಹಳಿಯಾಳ ತಾಲೂಕಿನ ಹೊಸೂರು ಗ್ರಾಮದಿಂದ ಅಕ್ರಮವಾಗಿ ಎರಡು ಜಾನುವಾರುಗಳನ್ನು ದಾಂಡೇಲಿಗೆ ಸಾಗಾಟ ಮಾಡಲು ಯತ್ನಿಸಿದ್ದ ಆರೋಪಿ. ಈ ವೇಳೆ 3 ನಂ ಗೇಟ್ ಹತ್ತಿರ ಬರುತ್ತಿದ್ದಂತೆ ವಾಹನವನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅಕ್ರಮ ಜಾನುವಾರು ಸಾಗಾಟ ಬೆಳಕಿಗೆ ಬಂದಿದೆ.
ಚಕ್ಕಡಿ ಸಮೇತ ಕಟ್ಟಗಿ ದ್ಯಾಮವ್ವನ ಮೂರ್ತಿ ತಂದಿಟ್ಟ ಕಿಡಿಗೇಡಿಗಳು; ಬೆಚ್ಚಿಬಿದ್ದ ಗ್ರಾಮಸ್ಥರು!
ಘಟನೆ ಸಂಬಂಧ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ