ಕಲಬುರಗಿ: ಸೆಂಟ್ರಲ್‌ ಜೈಲಿನಲ್ಲಿ ಗಾಂಜಾ ಸರಬರಾಜಿಗೆ ಯತ್ನ

Published : Nov 17, 2023, 11:30 PM IST
ಕಲಬುರಗಿ: ಸೆಂಟ್ರಲ್‌ ಜೈಲಿನಲ್ಲಿ ಗಾಂಜಾ ಸರಬರಾಜಿಗೆ ಯತ್ನ

ಸಾರಾಂಶ

ಕೇಂದ್ರ ಕಾರಾಗೃಹದ ಆರಕ್ಷಕ ನಿರೀಕ್ಷಕ ವೆಂಕಟೇಶ ಎಂಬುವವರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮುಖ್ಯರಸ್ತೆಯಿಂದ ಓಡೋಡಿ ಬಂದು ಕಾರಾಗೃಹದ ಮುಂದೆ ಒಂದು ಜಾಡು ಹಾಗೂ ಮನೆಯೊರೆಸುವ ಕಸಬರಿಗೆ ಇಟ್ಟು ಓಡಿ ಹೋಗಿದ್ದಾನೆ. 

ಕಲಬುರಗಿ(ನ.17):  ನಗರ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದೊಳಗೆ ಅಪರಿಚಿತ ವ್ಯಕ್ತಿಯೊಬ್ಬ ಗಾಂಜಾ ಸರಬರಾಜು ಮಾಡಲು ಯತ್ನಿಸಿರುವ ಘಟನೆ ನಡೆದಿದೆ.

ಕೇಂದ್ರ ಕಾರಾಗೃಹದ ಆರಕ್ಷಕ ನಿರೀಕ್ಷಕ ವೆಂಕಟೇಶ ಎಂಬುವವರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮುಖ್ಯರಸ್ತೆಯಿಂದ ಓಡೋಡಿ ಬಂದು ಕಾರಾಗೃಹದ ಮುಂದೆ ಒಂದು ಜಾಡು ಹಾಗೂ ಮನೆಯೊರೆಸುವ ಕಸಬರಿಗೆ (ಮಾಪ್‌) ಇಟ್ಟು ಓಡಿ ಹೋಗಿದ್ದಾನೆ. 

ಬೀದರ್‌: ಯನಗುಂದಾ ಗ್ರಾಮದಲ್ಲಿ ಹಸಿ ಗಾಂಜಾ ಜಪ್ತಿ, ಇಬ್ಬರ ಬಂಧನ

ಈ ವಿಷಯವನ್ನು ವೆಂಕಟೇಶ ಅವರು ಉಸ್ತುವಾರಿ ಅಧಿಕಾರಿ ವಿಶ್ವನಾಥ ಪಾಟೀಲರ ಗಮನಕ್ಕೆ ತಂದಿದ್ದಾರೆ. ಬಳಿಕ ಆ ಜಾಡು ಮತ್ತು ಮನೆಯೊರೆಸುವ ಕಸಬರಿಗೆಯನ್ನು ಪರಿಶೀಲನೆ ನಡೆಸಿದಾಗ ಮಾಪ್‌ನ ಪೈಪ್‌ನೊಳಗೆ ಗಾಂಜಾ ತುಂಬಿರುವುದು ಕಂಡು ಬಂದಿದೆ. ಆ ಮೂಲಕ ಅಪರಿಚಿತ ವ್ಯಕ್ತಿ ಕಾರಾಗೃಹದೊಳಗೆ ಗಾಂಜಾ ಸರಬರಾಜು ಮಾಡಲು ಯತ್ನಿಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಕಾರಾಗೃಹದ ವಾರ್ಡನ್‌ ಅಮೋಘ ಸಿದ್ದ ಚಿತ್ತಾಪೂರ ಅವರು ಫರಹತಾಬಾದ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು: ಬ್ಯಾನರ್ ಗಲಾಟೆ, ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ, ಬಜರಂಗದಳ ಕಾರ್ಯಕರ್ತರ ಮೇಲೆ ಶಂಕೆ!
ಮಿರ್ಜಾ ಇಸ್ಮಾಯಿಲ್ ಮೊಮ್ಮಗಳ ಹಂತಕನಿಗೆ ಜೈಲೇ ಗತಿ, ಏನಿದು ಪ್ರಕರಣ?