ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡಲು ಯತ್ನ. ಓರ್ವ ಯುವಕ ಅರೆಸ್ಟ್

Published : Jul 15, 2023, 10:40 AM ISTUpdated : Jul 15, 2023, 10:43 AM IST
ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡಲು ಯತ್ನ. ಓರ್ವ ಯುವಕ ಅರೆಸ್ಟ್

ಸಾರಾಂಶ

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಸಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಸೋಗಾನೆ ಗ್ರಾಮದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ಶಿವಮೊಗ್ಗ (ಜು.15) : ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಸಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಸೋಗಾನೆ ಗ್ರಾಮದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ಕಾರಾಗೃಹದಲ್ಲಿರುವವನಿಗೆ ಬೇಕರಿ ಪದಾರ್ಥಗಳನ್ನು ನೀಡುವ ನೆಪದಲ್ಲಿ ಗಾಂಜಾ ಪೂರೈಕೆ ಮಾಡಲು ಯತ್ನಿಸಿದ ಯುವಕರು. ಈ ಪೈಕಿ ಒಬ್ಬ ಸಿಕ್ಕಿಬಿದ್ದಿದ್ದು ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ.  ಎರಡು ವಾರದ ಹಿಂದೆ ಸಾಗರದಲ್ಲಿ ಗಾಂಜಾದೊಂದಿಗೆ ಸಿಕ್ಕಿಬಿದ್ದು ಜೈಲು ಸೇರಿದ್ದ ಅಲ್ತಾಫ್ ಎಂಬುವನಿಗೆ ಗಾಂಜಾ ನೀಡಲು ಬಂದಿದ್ದ ಯುವಕರು. ಕೈದಿಯ ಸ್ನೇಹಿತರೇ ಆಗಿರುವ ಶಿವಮೊಗ್ಗ ಗೋಪಾಳದ ಮುಸ್ತಫಾ ಮತ್ತು ಕಾಶೀಪುರದ ದಿಲೀಪ ಕೆಲವು ಬೇಕರಿ ಪದಾರ್ಥಗಳೊಂದಿಗೆ ಜೈಲಿಗೆ ತೆರಳಿದ್ದರು.

 

ಪೊಲೀಸರ ಸೋಗಿನಲ್ಲಿ ಕಿಡಿಗೇಡಿಗಳಿಂದ ದರೋಡೆ: ಇಬ್ಬರ ಬಂಧನ

 ಅಲ್ತಾಫ್‌ಗೆ ಗಾಂಜಾ ಪೂರೈಕೆ ಮಾಡುವ ಸಲುವಾಗಿ ಬೇಕರಿ ಪದಾರ್ಥಗಳ ಪೂರೈಕೆಯ ಪೊಟ್ಟಣದಲ್ಲಿ ಗಾಂಜಾ ಸೇರಿಸಿದ್ದರು. ಜೈಲಿನ ಮುಖ್ಯ ದ್ವಾರದಲ್ಲಿ ಇವರಿಬ್ಬರ ಬಳಿಯಿದ್ದ ಚೀಲವನ್ನು ಜೈಲಿನ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ ವೇಳೆ ಗಾಂಜಾ ಪ್ಯಾಕ್‌ಗಳು ಪತ್ತೆಯಾಗಿವೆ.  ಕೂಡಲೇ ಮುಸ್ತಫಾನನ್ನು ಜೈಲು ಸಿಬ್ಬಂದಿ ಬಂಧಿಸಿದ್ದಾರೆ. ಆದರೆ ಆತನ ಜತೆಗಿದ್ದ ದಿಲೀಪ ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ.  ಬೆಂಗಳೂರಿನ ಸೂಪರ್ ಮಾರ್ಕೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮುಸ್ತಫಾ, ಗೆಳೆಯನಿಗೆ ಗಾಂಜಾ ನೀಡಲು ಪ್ರಯತ್ನಿಸಿ ತನ್ನ ಭವಿಷ್ಯಕ್ಕೂ ಕಲ್ಲು ಹಾಕಿಕೊಂಡಿದ್ದಾನೆ.  ಕಾರಾಗೃಹದ ಅಧೀಕ್ಷಿಕಿ ಡಾ. ಅನಿತಾ - ತುಂಗಾ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಧರ್ಮನಿಂದನೆ ಪೋಸ್ಟ್ ಹಾಕೋ ಮುನ್ನ ಇರಲಿ ಎಚ್ಚರ, ಸೈಬರ್ ಕ್ರೈಂನಿಂದ ಕ್ಷಿಪ್ರ ಕಾರ್ಯಾಚರಣೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!