
ಬೆಂಗಳೂರು (ಜೂ.7): ಜೈಲಿಗೆ ಹೋಗಿಬಂದರೂ ಪದೇ ಪದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಕುಖ್ಯಾತ ರೌಡಿಶೀಟರ್ ನನ್ನು ಬಾಗಲಗುಂಟೆ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಸೋಲದೇವನಹಳ್ಳಿ ಹಾಗೂ ಬಾಗಲಗುಂಟೆ ಪೊಲೀಸ್ ಠಾಣೆಗಳ ರೌಡಿಶೀಟರ್ ಆಗಿರುವ ಚೇತನ್ ಕುಮಾರ್ ಆಲಿಯಾಸ್ ಚಿಕ್ಕ ಚೇತು ವಿರುದ್ಧ ಗೂಂಡಾ ಕಾಯ್ದೆಯಡಿ ಜೈಲಿಗಟ್ಟಿದ್ದಾರೆ. ಅನ್ನಪೂರ್ಣೆಶ್ವರಿ ನಗರ, ಮಾದನಾಯಕಹಳ್ಳಿ, ಸೋಲದೇವನಹಳ್ಳಿ ಹಾಗೂ ಚಂದ್ರಾಲೇಔಟ್ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ ಕೊಲೆ ಕೊಲೆಯತ್ನ, ಸುಲಿಗೆ ಹಾಗೂ ದರೋಡೆ ಸೇರಿದಂತೆ ಸುಮಾರು 10ಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ.
2012ರಿಂದ 2022ರವರೆಗೆ 10ಕ್ಕೂ ಹೆಚ್ಚು ಕೇಸ್ ದಾಖಲಾಗಿದೆ. ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿಗೆ ಹೋಗಿಬಂದು ಮತ್ತೆ ಕ್ರೈಂ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದ. ಹಲವು ಬಾರಿ ನ್ಯಾಯಾಲಯ ವಿಚಾರಣೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದರೂ ಕೋರ್ಟ್ ಗೆ ಗೈರು ಹಾಜರಾಗಿದ್ದ. ರೌಡಿ ಆ್ಯಕ್ಟಿವಿಟಿಯಲ್ಲಿ ಸಕ್ರಿಯನಾಗಿದ್ದ ಚೇತು ಇತ್ತೀಚೆಗೆ ಸೋಲದೇವನಹಳ್ಳಿ ಪೊಲೀಸರು ಕೊಲೆಯತ್ನ ಪ್ರಕರಣ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
Bengaluru Flyoverಗಳು ಎಷ್ಟು ಸುರಕ್ಷಿತ? ಪರಿಶೀಲನೆಗೆ ಮುಂದಾಯ್ತು ಬಿಬಿಎಂಪಿ
ಇಲ್ಲಿ ಡ್ರಿಂಕ್ಸ್ ಮಾಡ್ಬೇಡಿ ಎಂದವನ ಮೇಲೆ ಹಲ್ಲೆ: ಪಾನ್ ಶಾಪ್ನಲ್ಲಿ ದಾಂಧಲೆ ನಡೆಸಿ ಮಾಲೀಕ ಸೇರಿಂದತೆ ಮೂವರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮೂವರು ನೌಕಾಪಡೆ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಮುಂಬೈನಲ್ಲಿ ಘಟನೆ ನಡೆದಿದ್ದು, ಎಂಎಆರ್ ಮಾರ್ಗ್ (MRA Marg) ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೋಟೆಯ ಚಾಹಾ ಹೌಸ್ ಬಳಿಯ (Chaha House in Fort) ಕಟ್ಟಡದ ನಿವಾಸಿಯೊಬ್ಬರು ತಮ್ಮ ವಸತಿ ಪ್ರದೇಶದ ಬಳಿ ಮದ್ಯಪಾನ ಮಾಡುವುದನ್ನು ನಿಲ್ಲಿಸುವಂತೆ ಮನವಿ ಮಾಡಿದಾಗ ಸಿಟ್ಟಿಗೆದ್ದ ನೌಕಾಪಡೆದ ಉದ್ಯೋಗಿಗಳು ಆತನ ಮೇಲೆ ಹಲ್ಲೆ ಮಾಡಿದ್ದಾರೆ.
(ಜೂನ್1)ಬುಧವಾರ ರಾತ್ರಿ 9.30 ರಿಂದ 10 ಗಂಟೆಯ ನಡುವೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರುದಾರ ರಾಜೇಂದ್ರ ಪಾಟೀಲ್ ಸಿಗರೇಟ್ ಎಳೆಯುವ ಸಲುವಾಗಿ ತಮ್ಮ ಕಟ್ಟಡದಿಂದ ಕೆಳಗಿಳಿದು ಬಂದು ಸಿಗರೇಟು ಸೇವಿಸುತ್ತಿದ್ದರು. ಈ ವೇಳೆ ತಮ್ಮ ಕಟ್ಟಡದ ಬಳಿ ಆರು ಭಾರತೀಯ ನೌಕಾಪಡೆಯ ಸಿಬ್ಬಂದಿ ಕುಳಿತು ಮದ್ಯ ಸೇವಿಸುತ್ತಿರುವುದನ್ನು ಅವರು ಗಮನಿಸಿದ್ದಾರೆ.
Ballari; ಆಪ್ತಾಪ್ತೆಯನ್ನು ಪ್ರೀತಿಸಿದ ಯುವಕನ ದುರಂತ ಅಂತ್ಯ!
ಬಳಿಕ ತಮ್ಮ ಇಬ್ಬರು ಗೆಳೆಯರಾದ ಶಾಮ್ ಶಿಂಧೆ (Sham Shinde) ಮತ್ತು ದೀಪಕ್ ಸುಲಾರೆ (Deepak Sulare) ಅರೊಂದಿಗೆ ನೌಕಾಪಡೆ ಸಿಬ್ಬಂದಿ ಬಳಿ ತೆರಳಿ ಇಲ್ಲಿ ಮದ್ಯಪಾನ ಮಾಡುವುದನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದಾರೆ. ಆದರೆ ಇದರಿಂದ ಕೋಪಗೊಂಡ ಅವರು ಜಗಳವಾಡಿದ್ದಾರೆ. ಇವರ ಜಗಳ ನೋಡಿ ಸುತ್ತಮುತ್ತಲಿನ ಜನ ದಾರಿಹೋಕರು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದು, ಈ ವೇಳೆ ನೌಕಾಪಡೆ ಉದ್ಯೋಗಿಗಳು ಅಲ್ಲಿಂದ ತೆರಳಿದ್ದಾರೆ.
ಆದರೆ 30 ನಿಮಿಷಗಳ ನಂತರ ವಾಪಸ್ ಬಂದ ಅವರು ಪಾನ್ ಅಂಗಡಿಯ ಮಾಲೀಕನೂ ಆಗಿರುವ ರಾಜೇಂದ್ರ ಪಾಟೀಲ್ ಸೇರಿದಂತೆ ಇತರ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಜಗಳವನ್ನು ನಿಲ್ಲಿಸಲು ರಾಜೇಂದ್ರ ಪಾಟೀಲ್ ಗೆಳೆಯನಾದ ಶಾಮ್ ಶಿಂಧೆ ಮಧ್ಯಪ್ರವೇಶಿಸಿದಾಗ, ಆತನ ಮೇಲೆ ನಾಲ್ಕರಿಂದ ಐದು ಜನರು ಹಲ್ಲೆ ಮಾಡಿದ್ದಾರೆ. ಅಲ್ಲದೇ ನನ್ನನ್ನು ನೆಲದ ಮೇಲೆ ತಳ್ಳಿ ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ್ದಾರೆ ಎಂದು ಪಾಟೀಲ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ