ಲಾಡ್ಜ್‌ನಲ್ಲಿ ಇಬ್ಬರು ಯುವಕರು ಆತ್ಮಹತ್ಯೆ!

Published : Sep 26, 2021, 09:50 PM IST
ಲಾಡ್ಜ್‌ನಲ್ಲಿ ಇಬ್ಬರು ಯುವಕರು ಆತ್ಮಹತ್ಯೆ!

ಸಾರಾಂಶ

* ಲಾಡ್ಜ್‌ನಲ್ಲಿ ಇಬ್ಬರು ಯುವಕರು ಆತ್ಮಹತ್ಯೆ * ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಹಟ್ಟಿ ಗ್ರಾಮದ ಯುವಕರು  * ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಲಾಡ್ಜ್‌ನಲ್ಲಿ ಆತ್ಮಹತ್ಯೆ

ಶಿವಮೊಗ್ಗ, (ಸೆ.26): ಲಾಡ್ಜ್‌ನಲ್ಲಿ ಇಬ್ಬರು ಯುವಕರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ (Shivanogga) ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ.

ಮೃತಪಟ್ಟವರನ್ನು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಹಟ್ಟಿ ಗ್ರಾಮದ ಸಂತೋಷ್ (23) ಮತ್ತು ಹನುಮಂತ (28) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ (suicide) ಶರಣಾದ ಸಂತೋಷ್ ಮತ್ತು ಹನುಮಂತ ಇಬ್ಬರು ಶುಕ್ರವಾರ ತಡರಾತ್ರಿ ಲಾಡ್ಜ್‌ಗೆ ಬಂದು ಡಬ್ಬಲ್ ಬೆಡ್ ರೂಂ  ಪಡೆದಿದ್ದರು. 

ಬೆಟ್ಟದಿಂದ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆ : 3 ದಿನದ ಬಳಿಕ ಪತ್ತೆ

ಶನಿವಾರ ಮಧ್ಯಾಹ್ನ ಇಬ್ಬರೂ ಹೊರಗೆ ಬಂದು ಊಟ ತೆಗೆದುಕೊಂಡು ರೂಮ್ ಸೇರಿಕೊಂಡಿದ್ದರು. ಇಂದು (ಸೆ.26) ಬೆಳಗ್ಗೆ ಸಹ ರೂಮಿನ ಬಾಗಿಲು ಸಾಕಷ್ಟು ಬಾರಿ ಬಡಿದಾಗಲೂ ತೆರೆಯಲಿಲ್ಲ. ಇದರಿಂದ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. 

ಪೊಲೀಸರ ಸಮ್ಮುಖದಲ್ಲಿ ರೂಮಿನ ಬಾಗಿಲು ಒಡೆದು ನೋಡಿದಾಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಆದರೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಂಗಳೂರು: ತಂದೆ ತಾಯಿ ಬದುಕಿದ್ದರೂ ಪ್ರೀತಿ ಸಿಗದೆ ಆತ್ಮ*ಹತ್ಯೆ, ನಾನು ಒಂಟಿಯೆಂದು ಪತ್ರ ಬರೆದಿಟ್ಟ ಬಾಲಕಿ
ಅಪ್ಪನ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬರುತ್ತಿದ್ದ ಮಗ, ಅರ್ಧದಾರಿ ಮಧ್ಯದಲ್ಲೇ ದುರ್ಮರಣ!