ಪ್ರೀತಿಸಿ, ಮದುವೆಯಾಗಿ ಅಪ್ರಾಪ್ತೆಯನ್ನು ಕೊಲೆ ಮಾಡಿದ್ನಾ ಪ್ರಿಯಕರ?

Published : Jan 01, 2020, 02:47 PM IST
ಪ್ರೀತಿಸಿ, ಮದುವೆಯಾಗಿ ಅಪ್ರಾಪ್ತೆಯನ್ನು ಕೊಲೆ ಮಾಡಿದ್ನಾ ಪ್ರಿಯಕರ?

ಸಾರಾಂಶ

ಅಪ್ರಾಪ್ತೆ ಬಾಲಕಿಯೊಂದಿಗೆ ಪ್ರೀತಿ, ಪ್ರಿಯಕರನ  ವಿರುದ್ಧ ಕೊಲೆ ಆರೋಪ| ಅಪ್ರಾಪ್ತೆ ಬಾಲಕಿಯನ್ನು ಮದುವೆಯಾಗುತ್ತೇನೆಂದು ನಂಬಿಸಿ ಪ್ರೀತಿಸಿ ಕೊಲೆ ಮಾಡಿರೋ ಆರೋಪ| ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಹುಲ್ಲಿಕೇರಿ ಎಸ್ಪಿ ಗ್ರಾಮದಲ್ಲಿ ಘಟನೆ..  

ಬಾಗಲಕೋಟೆ[ಜ.01]: ಪ್ರಿಯಕರನೊಬ್ಬ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ, ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಹುಲ್ಲಿಕೇರಿ ಎಸ್ಪಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 22 ವರ್ಷದ ಕುಮಾರ ಎಂಬಾತ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಪ್ರೀತಿಸಿದ್ದಾನೆ. ಬಳಿಕ ಆಕೆಗೆ ಅರಿಶಿನ ಕೊಂಬು ಕಟ್ಟಿ ಮದುವೆಯೂ ಆಗಿದ್ದಾನೆ. ಅಲ್ಲದೇ ಈ ವಿಚಾರ ಮನೆಯವರಿಗೆ ಹೇಳಿದ್ರೆ ಕೊಲೆ ಮಾಡುತ್ತಾರೆಂದು ನಂಬಿಸಿದ್ದಾನೆ.

ಆದರೆ ಅಪ್ರಾಪ್ತೆ ಬಾಲಕಿ ಮನೆಯವರಿಗೆ ಮಗಳ ಪ್ರೀತಿ ಹಾಗೂ ಮದುವೆ ವಿಚಾರ ತಿಳಿದಿದೆ. ಇದರ ಬೆನ್ನಲ್ಲೇ ಕುಮಾರ್ ಅಪ್ರಾಪ್ತೆ ಬಾಲಕಿಗೆ ವಿಷ ಕುಡಿಸಿ, ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಅಪ್ರಾಪ್ತೆ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಗುಳೇದಗುಡ್ಡ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಕುಮಾರ್ ನನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಸದ್ಯ ಈ ಸಂಬಂಧ ಕುಮಾರ್ ವಿರುದ್ಧ ಅಪ್ರಾಪ್ತೆ ಬಾಲಕಿ ತಂದೆ ಬಾಳಪ್ಪ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆತ ತನ್ನ ಮಗಳನ್ನು ಕೊಲೆಗೈದಿರುವುದಗಿ ದೂರಿನಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ