
ಬಳ್ಳಾರಿ (ಜೂ.08): ತಾಲೂಕು ವ್ಯಾಪ್ತಿಯ ಎಲ್ಎಲ್ಸಿ ಕಾಲುವೆಯ ಬಳಿ ಯುವಕನನ್ನು ಹ*ತ್ಯೆಗೈದು ದುಷ್ಕರ್ಮಿಗಳು ಸಾಕ್ಷ್ಯನಾಶ ಮಾಡುವ ಉದ್ದೇಶದಿಂದ ಮೃತ ದೇಹವನ್ನು ಬರೋಬ್ಬರಿ 13 ಕಿಲೋಮೀಟರ್ ದೂರದವರೆಗೆ ಕೊಂಡೊಯ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.
ಮೃತಪಟ್ಟ ಯುವಕ ಅನಂತಪುರ ಜಿಲ್ಲೆಯ ವ್ಯಾಪ್ತಿಯ ಬೊಲ್ಲನಗುಡ್ಡಂ ಪ್ರದೇಶದ ನಿವಾಸಿ ಬಸವನಗೌಡ (27) ಎಂದು ಗುರುತಿಸಿಲಾಗಿದೆ. ಪಕ್ಕಾ ಪ್ಲಾನ್ ಮಾಡಿ ಮೃತದೇಹಕ್ಕೆ ಬೆಂಕಿ ಹಚ್ಚಿದ್ದರೂ ಶನಿವಾರ ಸುರಿದ ಮಳೆಯಿಂದಾಗಿ ಬೆಂಕಿ ನಂದಿಹೋಗಿದ್ದು, ಶವವು ಅರ್ಧಂಬರ್ಧ ಸುಟ್ಟುಹೋಗಿ ಘಟನೆ ಬೆಳಕಿಗೆ ಬಂದಿದೆ.
ಘಟನಾ ಸ್ಥಳದಲ್ಲಿ ದೊರೆತ ಸುಳಿವು ಹಾಗೂ ಹ*ತ್ಯೆ ನಡೆದ ರೀತಿಯನ್ನು ಗಮನಿಸಿದರೆ ಇದು ಪ್ರೀತಿ ಪ್ರೇಮ ವಿಷಯಕ್ಕೆ ಸಂಬಂಧಿಸಿದ್ದು ಎನ್ನಲಾಗ್ತಿದೆ. ಎಲ್ಎಲ್ಸಿ ಕಾಲುವೆ ಬಳಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ, ಅರ್ಧ ಸುಟ್ಟು ಕರಕಲಾದ ಮೃತದೇಹದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಧ ನಡೆಸಿದಾಗ, ಮೃತದೇಹ ದೊರೆತ ಸ್ಥಳದಿಂದ 13 ಕಿಲೋಮೀಟರ್ ದೂರದಲ್ಲಿ ಮೃತ ಯುವಕನಿಗೆ ಸೇರಿದ ಪಲ್ಸರ್ ಬೈಕ್, ಚಪ್ಪಲಿಗಳು ದೊರಕಿವೆ. ಮೃತ ಯುವಕ ಬಳ್ಳಾರಿಯ ಖಾಸಹಿ ಡಯಾಗ್ನೋಸ್ಟಿಕ್ ಸೆಂಟರ್ನಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಬಸವನಗೌಡ ಅವರದ್ದು ಎಂದು ದೃಢಪಡಿಸಿದ್ದಾರೆ. ಈ ಕುರಿತು ಮೋಕಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ