Bengaluru: ಬಾರ್‌ನಲ್ಲಿ ಗ್ರಾಹಕರಿಗೆ ಜಾಗ ಬಿಟ್ಟಿಲ್ಲ ಎಂದು ಕಿರಿಕ್: ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಬಾರ್ ಸಿಬ್ಬಂದಿಗಳು

Published : Jan 22, 2023, 12:15 PM IST
Bengaluru: ಬಾರ್‌ನಲ್ಲಿ ಗ್ರಾಹಕರಿಗೆ ಜಾಗ ಬಿಟ್ಟಿಲ್ಲ ಎಂದು ಕಿರಿಕ್: ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಬಾರ್ ಸಿಬ್ಬಂದಿಗಳು

ಸಾರಾಂಶ

ಬಾರ್‌ನಲ್ಲಿ ಗ್ರಾಹಕರಿಗೆ ಜಾಗ ಬಿಟ್ಟಿಲ್ಲ ಎಂದು ಬಾರ್ ಸಿಬ್ಬಂದಿಗಳು ಸಣ್ಣ ಕಿರಿಕ್ ತೆಗೆದಿದ್ದು, ವ್ಯಕ್ತಿಯು ಬಾರ್‌ನಿಂದ ಹೊರ ಬರುತ್ತಿದ್ದಂತೆ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆ ನಿನ್ನೆ (ಶನಿವಾರ) ರಾತ್ರಿ 1 ಗಂಟೆ ಸುಮಾರಿಗೆ ಮಂಜುನಾಥ್ ನಗರದ ವೆಂಕಟಗಿರಿ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ನಡೆದಿದೆ. 

ಬೆಂಗಳೂರು (ಜ.22): ಬಾರ್‌ನಲ್ಲಿ ಗ್ರಾಹಕರಿಗೆ ಜಾಗ ಬಿಟ್ಟಿಲ್ಲ ಎಂದು ಬಾರ್ ಸಿಬ್ಬಂದಿಗಳು ಸಣ್ಣ ಕಿರಿಕ್ ತೆಗೆದಿದ್ದು, ವ್ಯಕ್ತಿಯು ಬಾರ್‌ನಿಂದ ಹೊರ ಬರುತ್ತಿದ್ದಂತೆ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆ ನಿನ್ನೆ (ಶನಿವಾರ) ರಾತ್ರಿ 1 ಗಂಟೆ ಸುಮಾರಿಗೆ ಮಂಜುನಾಥ್ ನಗರದ ವೆಂಕಟಗಿರಿ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ನಡೆದಿದೆ. ಪೆರುಮಾಳ್ (25) ಎಂಬಾತನ ಮೇಲೆ ಬಾರ್ ಸಿಬ್ಬಂದಿಗಳು ಹಲ್ಲೆ ಮಾಡಿದ್ದು, ಪೊಲೀಸರು  ದೂರು ತೆಗೆದುಕೊಳ್ಳಲು ನಿರ್ಲಕ್ಷ್ಯ ಮಾಡಿದ್ದಾರೆ. ಪೀಣ್ಯದಲ್ಲಿ ಕಬ್ಬಿಣದ ಕೆಲಸ ಮಾಡ್ತಿದ್ದ ಪೆರುಮಾಳ್, ಮದ್ಯ ತೆಗೆದುಕೊಂಡು ಕೌಂಟರ್ ಬಳಿಯೇ ಕುಡಿಯುತ್ತ ನಿಂತಿದ್ದ. 

ಈ ಹಿನ್ನಲೆ ಬಾರ್ ಸಿಬ್ಬಂದಿಗಳು ಹಾಗು ಪೆರುಮಾಳ್ ನಡುವೆ ಸಣ್ಣ ಕಿರಿಕ್ ಆಗಿದೆ. ಕಿರಿಕ್ ಆದ ಬಳಿಕ ಬಾರ್ ಸಿಬ್ಬಂದಿ‌ ಸುಮ್ಮನಿದ್ದು, ಪೆರುಮಾಳ್ ಮದ್ಯ ಸೇವನೆ ಬಳಿಕ ಹೊರಗೆ ಕಾಲಿಡುತ್ತಿದ್ದಂತೆ ಬಾರ್ ಸಿಬ್ಬಂದಿಗಳು ಮುಖ ಮೂತಿ ನೋಡದೆ ಹಲ್ಲೆ ಮಾಡಿದ್ದಾರೆ. ಇನ್ನು ಸ್ಥಳಕ್ಕೆ ಪೊಲೀಸರು ಬಂದರೂ ಗಾಯಾಳುವನ್ನ ಆಸ್ಪತ್ರೆಗೆ ಸೇರಿಸೋ ಸೌಜನ್ಯ ತೋರಿಸಿಲ್ಲ. ಗಾಯಳು ಸತ್ತರೇ ಸಾಯಲಿ ಬಿಡು ಎಂದು ಹೇಳಿದ್ದಾರೆ ಎಂದು ಪೊಲೀಸರ ಮೇಲೆ ಪೆರುಮಾಳ್ ಆರೋಪ ಮಾಡಿದ್ದು, ಘಟನೆ ನಡೆದ ಬಳಿಕ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. 

ಸಿಎಂ ಬೊಮ್ಮಾಯಿ ಮನೆ ಹಾಳಾಗ ಎಂದ ಸಿದ್ದುಗೆ ತಿರುಗೇಟು ನೀಡಿದ ಸಚಿವ ಸೋಮಣ್ಣ

ನಂತರ ಪೆರುಮಾಳ್‌ನನ್ನು ಆತನ ಸ್ನೇಹಿತ ಸುರೇಶ್ ಎಂಬಾತ ಆಸ್ಪತ್ರೆಗೆ ಸೇರಿಸಿದ್ದ. ಇನ್ನು ಘಟನೆ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೆರುಮಾಳ್‌ ಅಳಲು ತೊಡಿಕೊಂಡಿದ್ದು, ಬೆಳಗಿನ ಜಾವ 4 ಗಂಟೆಗಳವರೆಗೂ ಬಾರ್ ಅಂಡ್ ರೆಸ್ಟೋರೆಂಟ್‌ ಓಪನ್ ಆಗಿದೆ ಎಂದು ಆರೋಪಿಸಿದ್ದಾನೆ. ಜೊತೆಗೆ ಬಾರ್ ಓಪನ್ ಆಗಿದ್ರೆ, ಪೊಲೀಸರು ಯಾಕೆ ಕ್ರಮ ಕೈಗೊಂಡಿಲ್ಲ ಎಂದು ದೂರುದಾರನು ಪ್ರಶ್ನೆ ಮಾಡಿದ್ದಾನೆ. ಸದ್ಯ ಗಾಯಾಳು ಪೆರುಮಾಳರಿಂದ  ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್