Bengaluru Crime News: ಬಿಬಿಎಂಪಿ ಗುತ್ತಿಗೆ ಲಾರಿಗೆ ದಂಪತಿ ಬಲಿ

Published : Jul 14, 2022, 04:11 PM ISTUpdated : Jul 14, 2022, 05:07 PM IST
Bengaluru Crime News: ಬಿಬಿಎಂಪಿ ಗುತ್ತಿಗೆ ಲಾರಿಗೆ ದಂಪತಿ ಬಲಿ

ಸಾರಾಂಶ

Bengaluru Crime News: ಜುಲೈ 9 ರಂದು ದ್ವಿಚಕ್ರ ವಾಹನದಲ್ಲಿ ಪತ್ನಿ ವಿಜಕಲಾ ಜೊತೆ ಪತಿ ಯೋಗೇಂದ್ರ ಹೋಗುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿತ್ತು

ಬೆಂಗಳೂರು (ಜು. 14): ಬೆಂಗಳೂರಿನಲ್ಲಿ ಬಿಬಿಎಂಪಿ (BBMP) ಟಿಪ್ಪರ್ ಲಾರಿಗೆ  ದಂಪತಿ ಬಲಿಯಾಗಿದ್ದಾರೆ. ಜುಲೈ 9 ರಂದು ದ್ವಿಚಕ್ರ ವಾಹನದಲ್ಲಿ ಪತ್ನಿ ವಿಜಕಲಾ ಜೊತೆ ಪತಿ ಯೋಗೇಂದ್ರ ಹೋಗುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ  ಬೈಕ್ ಹಿಂಬದಿ ಕುಳಿತಿದ್ದ ವಿಜಯಕಲಾಗೆ ಗಂಭೀರ ಗಾಯಗಳಾಗಿದ್ದು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜುಲೈ 9ರಂದ ಮಧ್ಯಾಹ್ನ‌12.30ರ ಸುಮಾರಿಗೆ ಮಹಿಳೆ ಸಾವನಪ್ಪಿದ್ದರು. 

ಬೈಕ್ ಸವಾರ ಯೋಗೆಂದ್ರ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಯೋಗೇಂದ್ರ ಸಾವನ್ನಪಿದ್ದಾರೆ.  ನಾಗರಭಾವಿ ರಸ್ತೆಯಲಿ (Nagarabavi) ದ್ವಿಚಕ್ರ ವಾಹನದಲ್ಲಿ ಪತ್ನಿ ವಿಜಕಲಾ ಜೊತೆ ಪತಿ ಯೋಗೇಂದ್ರ ಹೋಗುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬೈಕ್‌ಗೆ ಬಿಬಿಎಂಪಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದತ್ತು. 

ಬಿಬಿಎಂಪಿ ಕಸದ ಲಾರಿಗೆ  ಫುಡ್‌ ಡೆಲಿವರಿ ಬಾಯ್‌ ಬಲಿ: ಇನ್ನು ಇತ್ತೀಚೆಗೆ  ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ನಾಗವಾರ-ಥಣಿಸಂದ್ರ ಮುಖ್ಯರಸ್ತೆಯಲ್ಲಿ ನಡೆದಿತ್ತು. ಕೊತ್ತನೂರು ನಿವಾಸಿ ದೇವಣ್ಣ (25) ಮೃತ ಸವಾರ. ಗ್ರಾಹಕರಿಗೆ ಫುಡ್‌ ಡೆಲಿವರಿ(Food Delivery) ನೀಡಲು ದ್ವಿಚಕ್ರ ವಾಹನದಲ್ಲಿ ಸಂಜೆ 4.30ರ ಸುಮಾರಿಗೆ  ಹೋಗುವಾಗ ಈ ದುರ್ಘಟನೆ ಸಂಭವಿಸಿತ್ತು. 

ಇದನ್ನೂ ಓದಿ: ಬೊಲೆರೊ ವಾಹನ ಡಿಕ್ಕಿ: ಬೈಕ್ ಮೇಲೆ ತೆರಳುತ್ತಿದ್ದ ಸರ್ಕಾರಿ ನೌಕರರಿಬ್ಬರ ಸಾವು!

ದಾವಣಗೆರೆ ಮೂಲದ ದಿನೇಶ್‌ ಕೊತ್ತನೂರಿನಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಫುಡ್‌ ಡೆಲಿವರಿ ಕೆಲಸ ಮಾಡಿಕೊಂಡು ಜೀವನ ದೂಡುತ್ತಿದ್ದರು. ಶನಿವಾರ ಸಂಜೆ ಫುಡ್‌ ಡೆಲಿವರಿ ನೀಡಲು ಹೋಗುವಾಗ ಹಿಂದಿನಿಂದ ವೇಗವಾಗಿ ಬಂದಿರುವ ಬಿಬಿಎಂಪಿ ಕಸದ ಲಾರಿ, ಏಕಾಏಕಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ದಿನೇಶ್‌ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಕಸದ ಲಾರಿ ಚಕ್ರ ತಲೆಯ ಮೇಲೆಯೇ ಹರಿದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಕಳೆದ ಕೆಲವು ತಿಂಗಳುಗಳಲ್ಲಿ ಬಿಬಿಎಂಪಿ ಕಸದ ಲಾರಿಗೆ ಹಲವು ಜೀವಗಳು ಬಲಿಯಾಗಿವೆ. 

  • ಏ.18ರಂದು ನಾಯಂಡಹಳ್ಳಿ ರಿಂಗ್‌ ರಸ್ತೆಯಲ್ಲಿ ನಾಗರಬಾವಿ ಕಡೆಯಿಂದ ನಾಯಂಡಹಳ್ಳಿ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಎಸ್‌ಬಿಐ ಬ್ಯಾಂಕ್‌ ಅಧಿಕಾರಿ ಪದ್ಮಿನಿ(40) ಸ್ಥಳದಲ್ಲೇ ಮೃತಪಟ್ಟಿದ್ದರು.
  • ಮಾ.31ರಂದು ಥಣಿಸಂದ್ರ ಮುಖ್ಯರಸ್ತೆಯಲ್ಲಿ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಯಲಹಂಕ ನಿವಾಸಿ ರಾಮಯ್ಯ(60) ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದರು.
  • ಮಾ.21ರಂದು ಹೆಬ್ಬಾಳ ಬಳಿ ರಸ್ತೆ ದಾಟುವಾಗ 15 ವರ್ಷದ ಅಕ್ಷಯಾಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಸೊಂಟದ ಮೇಲೆ ಲಾರಿ ಚಕ್ರ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಳು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಫೇಸ್‌ಬುಕ್ ಚಿಟ್ಟೆಯ ಮುಖ ನೋಡಿ ಹನಿಹೀರಲು ಬಂದವನೇ ಟ್ರ್ಯಾಪ್ , ಯುವಕನ ಮೇಲೆ ಹಲ್ಲೆ, ಹಣಕ್ಕೆ ಬೇಡಿಕೆ ಇಟ್ಟವರು ಎಸ್ಕೇಪ್!
10 ವರ್ಷ ಪ್ರೀತಿಸಿದವಳಿಗೆ ಮೋಸ, ₹4.5 ಲಕ್ಷ ವಂಚನೆ, ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ!