ಇನ್ನೊಬ್ಬ ಬೆಳಗಾವಿ ಕಂಟ್ರಾಕ್ಟರ್‌ ಲಾಡ್ಜ್‌ನಲ್ಲಿ ಆತ್ಮಹತ್ಯೆ: ಕಾರಣ ಮಾತ್ರ ನಿಗೂಢ..?

Published : Apr 28, 2022, 04:43 AM ISTUpdated : Apr 28, 2022, 09:11 AM IST
ಇನ್ನೊಬ್ಬ ಬೆಳಗಾವಿ ಕಂಟ್ರಾಕ್ಟರ್‌ ಲಾಡ್ಜ್‌ನಲ್ಲಿ ಆತ್ಮಹತ್ಯೆ: ಕಾರಣ ಮಾತ್ರ ನಿಗೂಢ..?

ಸಾರಾಂಶ

*  ಬೆಳಗಾವಿ ಗುತ್ತಿಗೆದಾರ ಬಸವರಾಜ್‌ ಬಾಳೆಹೊನ್ನೂರು ಲಾಡ್ಜ್‌ನಲ್ಲಿ ಆತ್ಮಹತ್ಯೆ *  ಪೊಲೀಸರಿಗೆ ಮಾಹಿತಿ ನೀಡಿದ್ದ ಲಾಡ್ಜ್‌ ಸಿಬ್ಬಂದಿ *  ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ

ಬಾಳೆಹೊನ್ನೂರು(ಏ.28): ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌(Santosh Patil) ಉಡುಪಿ ಲಾಡ್ಜ್‌ನಲ್ಲಿ ಆತ್ಮಹತ್ಯೆ(Suicide) ಮಾಡಿಕೊಂಡ ಘಟನೆ ಮಾಸುವ ಮುನ್ನವೇ ಅದೇ ಜಿಲ್ಲೆಯ ಮತ್ತೋರ್ವ ಗುತ್ತಿಗೆದಾರ ಬಾಳೆಹೊನ್ನೂರಿನ ಖಾಸಗಿ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಬುಧವಾರ ನಡೆದಿದೆ.

ಬೆಳಗಾವಿ(Belagavi) ಮೂಲದ ಬಸವರಾಜ್‌ (47) ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ. ಪಟ್ಟಣದ ಖಾಸಗಿ ಲಾಡ್ಜ್‌ನಲ್ಲಿ ಕಳೆದ ಮೂರು ದಿನಗಳ ಹಿಂದೆ ಕೊಠಡಿ ಪಡೆದಿದ್ದ ಬಸವರಾಜ್‌(Basavaraj) ಬುಧವಾರ ಬೆಳಗ್ಗೆ ವೇಳೆಗೆ ಕೊಠಡಿಯಿಂದ ಹೊರಬಂದಿದ್ದ ಎನ್ನಲಾಗಿದೆ. ಆ ಬಳಿಕ ಕೊಠಡಿ ಒಳಗೆ ತೆರಳಿದವರು ಪುನಃ ವಾಪಸ್‌ ಬಂದಿಲ್ಲ ಎಂದು ತಿಳಿದುಬಂದಿದೆ.

Chamarajanagara ಶೀಲಶಂಕಿಸಿ ಪತಿಯ ಕಿರುಕುಳ, ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬುಧವಾರ ಮಧ್ಯಾಹ್ನದ ವೇಳೆಗೆ ಕೊಠಡಿ ಬಾಗಿಲು ತೆರೆಯದ್ದನ್ನು ಕಂಡ ಲಾಡ್ಜ್‌(Lodge) ಸಿಬ್ಬಂದಿ ಅನುಮಾನಗೊಂಡು ಪೊಲೀಸರಿಗೆ(Police) ಮಾಹಿತಿ ನೀಡಿದರು. ಪೊಲೀಸರು ಬಂದು ಪರಿಶೀಲಿಸಿದಾಗ ಈತ ಲಾಡ್ಜ್‌ ಕೊಠಡಿಯ ಫ್ಯಾನ್‌ಗೆ ನೇಣಿಗೆ ಶರಣಾಗಿರುವುದು ಕಂಡುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಬಸವರಾಜ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ತಿಳಿಸಿದ್ದಾರೆ.

ಬೆಳಗಾವಿಯಿಂದ ಕುಟುಂಬಸ್ಥರು ಬಂದ ಬಳಿಕ ಆತ್ಮಹತ್ಯೆ ಕುರಿತು ತಿಳಿಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ. ಕುಟುಂಬಸ್ಥರು ಬಂದ ಬಳಿಕ ದೂರು ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು