ಚಿಕ್ಕೋಡಿ ಶಿಕ್ಷಕಿಯ ಕಣ್ಣೀರು: ಎಸ್‌ಡಿಎಂಸಿ ಅಕ್ರಮ ತಡೆದಿದ್ದಕ್ಕೆ ಅಮಾನತು ಶಿಕ್ಷೆ? ನ್ಯಾಯಕ್ಕಾಗಿ ಕಣ್ಣೀರಿಟ್ಟ ಟೀಚರ್!

Published : Dec 20, 2025, 12:19 PM IST
Belagavi Teacher Alleges Political Harassment Threatens death Over Unjust Suspension

ಸಾರಾಂಶ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮುಖ್ಯ ಶಿಕ್ಷಕಿಯೊಬ್ಬರು, ಶಾಲಾ ಆಡಳಿತ ಮಂಡಳಿ ಚುನಾವಣೆಯ ರಾಜಕೀಯ ದ್ವೇಷದಿಂದ ತಮ್ಮನ್ನು ಅನ್ಯಾಯವಾಗಿ ಅಮಾನತು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ತಮಗೆ ನ್ಯಾಯ ಸಿಗದಿದ್ದರೆ ಆತ್ಮ೧ಹತ್ಯೆ ಮಾಡಿಕೊಳ್ಳುವುದಾಗಿ ಸೆಲ್ಫಿ ವಿಡಿಯೋ ಮೂಲಕ ಕಣ್ಣೀರು.

ಚಿಕ್ಕೋಡಿ(ಡಿ.20): ಶಾಲಾ ಆಡಳಿತ ಮಂಡಳಿ ಚುನಾವಣೆಯ ವಿಚಾರದಲ್ಲಿ ಉಂಟಾದ ರಾಜಕೀಯ ದ್ವೇಷಕ್ಕೆ ತನ್ನನ್ನು ಬಲಿಪಶು ಮಾಡಲಾಗಿದೆ ಎಂದು ಆರೋಪಿಸಿರುವ ಮುಖ್ಯ ಶಿಕ್ಷಕಿಯೊಬ್ಬರು, ತಮಗೆ ನ್ಯಾಯ ಸಿಗದಿದ್ದರೆ ಆತ್ಮ೧ಹತ್ಯೆ ಮಾಡಿಕೊಳ್ಳುವುದಾಗಿ ಸೆಲ್ಫಿ ವಿಡಿಯೋ ಮೂಲಕ ಕಣ್ಣೀರು ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಎಸ್‌ಡಿಎಂಸಿ ಚುನಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪ

ಹರಗಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುರೇಖಾ ಬಾಯಣ್ಣವರ್ ಈ ಸಂಕಷ್ಟಕ್ಕೆ ಸಿಲುಕಿದವರು. ಶಾಲೆಯ ಎಸ್‌ಡಿಎಂಸಿ (SDMC) ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದ ವೇಳೆ, ಪವನ್ ಪಾಟೀಲ್ ಎಂಬುವವರು ಕಾನೂನುಬಾಹಿರವಾಗಿ ಚುನಾವಣೆ ನಡೆಸಲು ಮುಂದಾಗಿದ್ದರು ಎನ್ನಲಾಗಿದೆ. ಇದನ್ನು ಗಮನಿಸಿದ ಮುಖ್ಯ ಶಿಕ್ಷಕಿ ಸುರೇಖಾ ಅವರು ಅಂದು ಚುನಾವಣೆ ಪ್ರಕ್ರಿಯೆಯನ್ನು ಮುಂದೂಡಿದ್ದರು. ತಮ್ಮವರೇ ಅಧ್ಯಕ್ಷರಾಗಲಿಲ್ಲ ಎಂಬ ಕಾರಣಕ್ಕೆ ಪವನ್ ಪಾಟೀಲ್ ಶಿಕ್ಷಕಿಯ ಮೇಲೆ ದ್ವೇಷ ಸಾಧಿಸಲು ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಸಚಿವರ ಹೆಸರು ಬಳಸಿ ಶಿಕ್ಷಕಿಯ ಅಮಾನತು

ಆರೋಪಿ ಪವನ್ ಪಾಟೀಲ್ ಸ್ಥಳೀಯ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೆಸರು ಹೇಳಿಕೊಂಡು ಕ್ಷೇತ್ರ ಶಿಕ್ಷಣಾಧಿಕಾರಿಗಳ (BEO) ಮೇಲೆ ಒತ್ತಡ ಹೇರಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸುರೇಖಾ ಅವರ ಮೇಲೆ ಸುಳ್ಳು ದೂರುಗಳನ್ನು ಹೊರಿಸಿ ಅವರನ್ನು ಅಮಾನತು ಮಾಡುವಂತೆ ಪ್ರಭಾವ ಬೀರಲಾಗಿದೆ. ಈ ರಾಜಕೀಯ ಒತ್ತಡಕ್ಕೆ ಮಣಿದ ಬಿಇಒ ಪ್ರಭಾವತಿ ಪಾಟೀಲ್ ಅವರು ಯಾವುದೇ ತಪ್ಪು ಮಾಡದಿದ್ದರೂ ಮುಖ್ಯ ಶಿಕ್ಷಕಿ ಸುರೇಖಾ ಅವರನ್ನು ಅಮಾನತು ಮಾಡಿದ್ದಾರೆ ಎನ್ನಲಾಗಿದೆ.

ಸೆಲ್ಫಿ ವಿಡಿಯೋ ಮೂಲಕ ನ್ಯಾಯಕ್ಕಾಗಿ ಮನವಿ

ತಮ್ಮ ಅಮಾನತು ಆದೇಶದಿಂದ ತೀವ್ರ ಮನನೊಂದಿರುವ ಸುರೇಖಾ ಅವರು ಸೆಲ್ಫಿ ವಿಡಿಯೋ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. 'ನಾನು ಯಾವುದೇ ತಪ್ಪು ಮಾಡಿಲ್ಲ, ಕೇವಲ ರಾಜಕೀಯ ಒತ್ತಡದಿಂದ ನನ್ನ ಮೇಲೆ ಕ್ರಮ ಕೈಗೊಳ್ಳಲಾಗಿದೆ. ನನಗೆ ಅನ್ಯಾಯವಾಗಿದೆ, ದಯವಿಟ್ಟು ನ್ಯಾಯ ಕೊಡಿಸಿ. ಒಂದು ವೇಳೆ ನ್ಯಾಯ ಸಿಗದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ' ಎಂದು ಕಣ್ಣೀರಿಡುತ್ತಾ ಎಚ್ಚರಿಕೆ ನೀಡಿದ್ದಾರೆ. ಶಾಲಾ ಆವರಣದಲ್ಲೂ ರಾಜಕೀಯ ತಂದು ಶಿಕ್ಷಕರಿಗೆ ಕಿರುಕುಳ ನೀಡುತ್ತಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಕ್ಷೇತ್ರದಲ್ಲೇ ಇಂತಹ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ ನಾಯಕರ ಬೆಂಬಲಿಗರು ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಶಿಕ್ಷಕಿಯ ಆತ್ಮ೧ಹತ್ಯೆ ಬೆದರಿಕೆಯಿಂದಾಗಿ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ತಕ್ಷಣ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ ತನಿಖೆ ನಡೆಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಂಡ್ಯ: 'ರಾಮ-ಲಕ್ಷಣ' ನಾಣ್ಯದ ಹೆಸರಲ್ಲಿ ವಂಚನೆಗೆ ಯತ್ನ; ಇಬ್ಬರು ವಂಚಕರಿಗೆ ಬಿತ್ತು ಗೂಸಾ!
ಶಾಸಕ ಬೈರತಿಗೆ ಕಂಟಕವಾದ ಕುಂಭಮೇಳ ಯಾತ್ರೆ!