
ಬಳ್ಳಾರಿ, (ಜೂನ್07) : ಮದುವೆಯಾಗುವುದಾಗಿ ನಂಬಿಸಿ ಪ್ರೀತಿಸಿದ ಯುವತಿಯ ಜೊತೆ ದೈಹಿಕ ಸಂಪರ್ಕ ನಡೆಸಿ ಬಳಿಕ ಆಕೆಗೆ ವಂಚಿಸಿದ ಇಂಜಿನಿಯರ್ನನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿ ಜತೆ ದೈಹಿಕ ಸಂಪರ್ಕ ನಡೆಸಿ ಬಳಿಕ ಆಕೆಗೆ ವಂಚಿಸಿದ ಆರೋಪದಡಿ ಬಳ್ಳಾರಿ ಕೆಎಂಎಫ್ನ ಅಸಿಸ್ಟೆಂಟ್ ಟೆಕ್ನಿಕಲ್ ಇಂಜಿನಿಯರ್ವೊಬ್ಬರನ್ನು ಮಹಿಳಾ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪಿ.ವೆಂಕಟೇಶ್ ಎಂಬುವರೆ ಬಂಧಿತ ಇಂಜಿನಿಯರ್. ರಾಯಚೂರು ಮೂಲದ ವೆಂಕಟೇಶ್ ಬಳ್ಳಾರಿಯ ಯುವತಿಯೊಬ್ಬಳನ್ನು ಪ್ರೀತಿಸಿದ್ದ. ಬಳಿಕ ಮದುವೆಯಾಗುವುದಾಗಿ ನಂಬಿಸಿನಿರಂತರ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ತದನಂತರ ಯುವತಿ ಮದುವೆಯಾಗೋಣ ಎಂದಾಗ ಅದೆಲ್ಲ ಸದ್ಯ ಬೇಡ, ಹೀಗೆಯೇ ಸ್ನೇಹಿತರಾಗಿ ಇರೋಣ ಎಂದು ಹೇಳಿದ್ದಾನೆ.
Ballari; ಆಪ್ತಾಪ್ತೆಯನ್ನು ಪ್ರೀತಿಸಿದ ಯುವಕನ ದುರಂತ ಅಂತ್ಯ!
ಯುವಕನ ಮಾತಿನಿಂದ ಯುವತಿಗೆ ಪ್ರೀತಿಯ ನಾಟಕವಾಡಿ ವಂಚನೆ ಆಗಿರುವುದು ಗೊತ್ತಾಗಿದೆ. ಹೀಗಾಗಿ, ಪ್ರೇಮದ ವಿಚಾರವನ್ನು ಮನೆಯವರಲ್ಲಿ ತಿಳಿಸಿದ್ದಾಳೆ. ವಿಷಯ ತಿಳಿದ ಪೋಷಕರು ವೆಂಕಟೇಶ್ ಬಳಿ ತಮ್ಮ ಮಗಳನ್ನು ಮದುವೆ ಆಗುವಂತೆ ಕೇಳಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಮದುವೆಯಾಗುವುದಿಲ್ಲ ಎಂದು ವೆಂಕಟೇಶ್ ಗಲಾಟೆ ಮಾಡಿದ್ದಾನೆ ಎನ್ನಲಾಗಿದೆ.
ಕೊನೆಗೆ ಯುವತಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ದೂರು ನೀಡಿದ್ದಾಳೆ. ಯುವತಿಯ ದೂರಿನ ಮೇರೆಗೆ ಬಳ್ಳಾರಿ ಮಹಿಳಾ ಪೊಲೀಸರು ಆರೋಪಿ ವೆಂಕಟೇಶ್ ಹಾಗೂ ಆತನಿಗೆ ಸಹಕಾರ ನೀಡಿದ ಹಿನ್ನೆಲೆಯಲ್ಲಿ ಸಹೋದರರಾದ ರಾಮಕೃಷ್ಣ, ತಾಯಣ್ಣ ಅವರನ್ನ ಬಂಧಿಸಿದ್ದು, ಸದ್ಯ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ