ಕೊನೆಗೂ ಸಂಪತ್‌ರಾಜ್ ಅರೆಸ್ಟ್, ಎಲ್ಲಿ ಅಡಗಿ ಕುಳಿತಿದ್ದರು?

Published : Nov 16, 2020, 11:32 PM ISTUpdated : Nov 16, 2020, 11:33 PM IST
ಕೊನೆಗೂ ಸಂಪತ್‌ರಾಜ್ ಅರೆಸ್ಟ್, ಎಲ್ಲಿ ಅಡಗಿ ಕುಳಿತಿದ್ದರು?

ಸಾರಾಂಶ

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ/ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಇಟ್ಟಿದ್ದ ದುರುಳರು/ ನಾಪತ್ತೆಯಾಗಿದ್ದ ಸಂಪತ್ ರಾಜ್ ಅರೆಸ್ಟ್/ ಬೆಂಗಳೂರಿನಲ್ಲಿಯೇ ಬಂಧನ/ ಹೈಕೋರ್ಟ್ ಚಾಟಿ ನಂತರ ಎಚ್ಚೆತ್ತ ಸಿಸಿಬಿ

ಬೆಂಗಳೂರು(ನ.  16) ಡಿ.ಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿ, ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ಬಂಧನವಾಗಿದೆ.  ಬೆಂಗಳೂರಿನಲ್ಲಿಯೇ ಸಂಪತ್ ರಾಜ್ ಬಲೆಗೆ ಬಿದ್ದಿದ್ದಾರೆ.

ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಇಡಲು ಪ್ರಚೋದನೆಯ ಆರೋಪಿಯಾಗಿರುವ ಸಂಪತ್  ರಾಜ್ ತಲೆಮರೆಸಿಕೊಂಡಿದ್ದರು. ಕೋವಿಡ್ ತಗುಲಿದೆ ಎಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿ  ಅಲ್ಲಿಂದ ಪರಾರಿಯಾಗಿದ್ದರು. ಸಂಪತ್ ರಾಜ್ ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ ಎಂದು  ಹೇಳಲಾಗಿತ್ತು. 

ಸಂಪತ್ ರಾಜ್ ಹಿಡಿಯಲು ಸೋನಿಯಾಗೆ ಮನವಿ ಮಾಡುವ ಪರಿಸ್ಥಿತಿ ಬಂತು

ಡಿಜೆ ಹಳ್ಳಿ ಗಲಭೆ ಪ್ರಕರಣ, ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ನಾಪತ್ತೆಯಾಗಿರುವ ಆರೋಪಿ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಬೆನ್ನು ಹತ್ತಿತ್ತು.ಸಂಪತ್ ರಾಜ್ ಗೆ ನಾಗರಹೊಳೆಯಲ್ಲಿ ಆಶ್ರಯ ಕೊಟ್ಟಿದ್ದ ಎನ್ನಲಾದ ರಿಯಾಜುದ್ದೀನ್ ಎಂಬಾತನನ್ನು ಬಂಧಿಸಿ ಮಾಹಿತಿ   ಕಲೆಹಾಕಲಾಗುತ್ತಿತ್ತು. ಈಗ ಸಂಪತ್ ರಾಜ್ ಬಂಧನವಾಗಿದ್ದು ಮುಂದೆ ಯಾವ ತಿರುವು ಪಡೆದುಕೊಳ್ಳುತ್ತದೆ ಎಂಬುದನ್ನು ನೋಡಬೇಕು. ಹೈಕೋರ್ಟ್ ಸಹ ಯಾಕೆ ಇಷ್ಟು ವಿಳಂಬವಾಗುತ್ತಿದೆ ಎಂದು ಸಿಸಿಬಿ ಅಧಿಕಾರಿಗಳಿಗೆ ಪ್ರಶ್ನೆ ಮಾಡಿತ್ತು. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ