Bengaluru: ಸ್ನೇಹಿತೆ ವಿಚಾರವಾಗಿ ಗೆಳೆಯರ ನಡುವೆ ಕಿತ್ತಾಟ: ಕಲ್ಲು ಎತ್ತಿ ಹಾಕಿ ಒಬ್ಬ ಹತ್ಯೆ

Published : Apr 26, 2026, 06:43 AM IST
A fight between two friends over a girlfriend ended in murder

ಸಾರಾಂಶ

ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ನೇಹಿತೆ ವಿಚಾರವಾಗಿ ಇಬ್ಬರು ಗೆಳೆಯರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ತನ್ನ ಗೆಳತಿಯ ಮನೆಗೆ ಬಂದು ಹೋಗುತ್ತಿದ್ದ ಸ್ನೇಹಿತ ರಾಮಚಂದ್ರನ ಮೇಲೆ ಸಿಟ್ಟಿಗೆದ್ದ ಹರೀಶ್, ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾನೆ.

ಬೆಂಗಳೂರು: ತಮ್ಮ ಸ್ನೇಹಿತೆ ವಿಚಾರವಾಗಿ ಇಬ್ಬರು ಗೆಳೆಯರ ನಡುವಿನ ಕಿತ್ತಾಟವು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಟಾಲಮ್ಮ ಲೇಔಟ್ ನಿವಾಸಿ ರಾಮಚಂದ್ರ (46) ಕೊಲೆಯಾದ ದುರ್ದೈವಿ. ಈ ಹತ್ಯೆ ಸಂಬಂಧ ಕೂಲಿ ಕಾರ್ಮಿಕ ಹರೀಶ್‌ನನ್ನು ಬಂಧಿಸಲಾಗಿದೆ. ತಮ್ಮ ಮನೆ ಹತ್ತಿರದಲ್ಲಿರುವ ಸ್ನೇಹಿತೆ ಮನೆಗೆ ಶುಕ್ರವಾರ ರಾತ್ರಿ ರಾಮಚಂದ್ರ ತೆರಳಿದ್ದಾಗ ಈ ಹತ್ಯೆ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತಿಯಿಂದ ದೂರವಾಗಿದ್ದ ಮಹಿಳೆ

ಮೃತ ರಾಮಚಂದ್ರ ಮೂಲತಃ ತಮಿಳುನಾಡು ರಾಜ್ಯದವನಾಗಿದ್ದು, ಹಲವು ವರ್ಷಗಳಿಂದ ಕಾಡುಗೋಡಿ ಹತ್ತಿರದ ಪಟಾಲಮ್ಮ ಲೇಔಟ್‌ನಲ್ಲಿ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳ ಜತೆ ವಾಸವಾಗಿದ್ದ. ಈರುಳ್ಳಿ ಮಾರಾಟ ಮಳಿಗೆಯಲ್ಲಿ ಲಾರಿ ಚಾಲಕನಾಗಿದ್ದ ಆತನಿಗೆ ಅದೇ ಮಳಿಗೆಯ ಕೆಲಸ ಮಾಡುತ್ತಿದ್ದ ಮಹಿಳೆ ಪರಿಚಯವಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ತೊರೆದು ಆಕೆ ಏಕಾಂಗಿಯಾಗಿ ವಾಸವಾಗಿದ್ದಳು.

ಕಲ್ಲು ಎತ್ತಿ ಹಾಕಿ ಹರೀಶ್ ಹತ್ಯೆ

ಈ ಸ್ನೇಹವು ಅಕ್ರಮ ಸಂಬಂಧಕ್ಕೆ ತಿರುಗಿದೆ. ಇನ್ನು ಹೊಸಕೋಟೆ ತಾಲೂಕಿನ ಹರೀಶ್ ಕೂಡ ಅದೇ ಏರಿಯಾದಲ್ಲಿ ವಾಸವಾಗಿದ್ದ. ಆತ ಸಹ ಪತ್ನಿಯಿಂದ ಪ್ರತ್ಯೇಕವಾಗಿದ್ದ. ಹಲವು ದಿನಗಳಿಂದ ಹರೀಶ್ ಜತೆ ಸಹ ಕೂಲಿ ಕಾರ್ಮಿಕ ಮಹಿಳೆಗೆ ಸ್ನೇಹವಾಗಿತ್ತು. ಈ ಗೆಳತಿ ವಿಚಾರವಾಗಿ ರಾಮಚಂದ್ರ ಹಾಗೂ ಹರೀಶ್ ಮಧ್ಯೆ ಮನಸ್ತಾಪವಾಗಿತ್ತು. ತನ್ನ ಗೆಳತಿ ಮನೆಗೆ ರಾಮಚಂದ್ರ ಬಂದು ಹೋಗುತ್ತಿದ್ದದ್ದು ಆತನಿಗೆ ಸಿಟ್ಟು ತರಿಸಿತ್ತು. ಇದೇ ವಿಷಯವಾಗಿ ಪರಸ್ಪರ ಜಗಳವಾಡಿದ್ದರು. ಅಂತೆಯೇ ಸ್ನೇಹಿತೆ ಮನೆಗೆ ಶುಕ್ರವಾರ ರಾತ್ರಿ ಭೇಟಿ ನೀಡಿ ಮರಳಿ ಬಂದು ದೇವಾಲಯದ ಬಳಿ ರಾಮಚಂದ್ರ ಮರಳಿದ್ದ. ಆಗ ಆತನ ಮೇಲೆ ಕಲ್ಲು ಎತ್ತಿ ಹಾಕಿ ಹರೀಶ್ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ವರ್ಗ ತೋರಿಸ್ತೇವೆಂದು ಹನಿಟ್ರ್ಯಾಪ್​: ವಿವಸ್ತ್ರಗೊಳಿಸಿ ವಿಡಿಯೋ- ಜಾಸ್ಮಿನ್​ ಬಲೆಯಲ್ಲಿ ಪುರುಷರು
ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು