
ಬೆಂಗಳೂರು (ಜು. 08): ಗ್ರಾಹಕರ ಸೋಗಿನಲ್ಲಿ ನಗರದ ಜ್ಯೂವೆಲ್ಲರಿ ಶಾಪ್ವೊಂದಕ್ಕೆ ( Jewellery Shop) ನುಗ್ಗಿ ಪಿಸ್ತೂಲ್ ತೋರಿಸಿ ಸಿಬ್ಬಂದಿ ಕೈ-ಕಾಲು ಕಟ್ಟಿ 1.58 ಲಕ್ಷ ಚಿನ್ನಾಭರಣ ದರೋಡೆ (Robbery) ಮಾಡಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರು (Bengaluru) ಹಾಗೂ ರಾಜಸ್ತಾನ ಪೊಲೀಸರು (Rajasthan Police) ಜಂಟಿ ಕಾರ್ಯಾಚರಣೆ ನಡೆಸಿ 72 ಗಂಟೆಗಳ ಅಂತರದಲ್ಲಿ ಸಿನಿಮೀಯ ಶೈಲಿಯಲ್ಲಿ ಹೆಡೆಮುರಿಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ರಾಜಸ್ತಾನ ಮೂಲದ ದೇವರಾಮ್, ರಾಹುಲ್, ರಾಮ್ ಸಿಂಗ್ ಹಾಗೂ ಅನಿಲ್ ಎಂಬುವವರನ್ನು ಬಂಧಿಸಲಾಗಿದ್ದು ತಲೆಮರೆಸಿಕೊಂಡಿರುವ ಮತ್ತೋರ್ವ ಆರೋಪಿ ವಿಷ್ಣುಪ್ರಸಾದ್ ಗಾಗಿ ಶೋಧ ನಡೆಸುತ್ತಿರುವುದಾಗಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.
ಪ್ರಮುಖ ಆರೋಪಿ ದೇವರಾಮ್ ನಗರದ ಹುಳಿಮಾವಿನಲ್ಲಿ ಹಾರ್ಡ್ವೇರ್ ಹಾಗೂ ಎಲೆಕ್ಟ್ರಿಕಲ್ ಶಾಪ್ ಇಟ್ಟುಕೊಂಡು ವ್ಯವಹಾರದಲ್ಲಿ ಕೈ ಸುಟ್ಟುಕೊಂಡಿದ್ದ. ಸುಲಭವಾಗಿ ಹಣ ಸಂಪಾದನೆ ಮಾಡಲು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲು ಸೇರಿ ಬಂದಿದ್ದ.
ಈತನ ಸಹಚರರು ಕರ್ನಾಟಕ ಹಾಗೂ ರಾಜಸ್ತಾನದಲ್ಲಿ ಕ್ರೈಂ (Crime) ಚಟುವಟಿಕೆಯಲ್ಲಿ ಭಾಗಿಯಾಗಿದ್ದರು. ಪರಸ್ಪರ ಪರಿಚಿತರಾಗಿದ್ದ ಆರೋಪಿಗಳು ಒಗ್ಗೂಡಿ ನಗರದ ಜ್ಯೂವೆಲ್ಲರಿ ಶಾಪ್ನಲ್ಲಿ ದರೋಡೆ ಮಾಡಲು 20 ದಿನಗಳ ಹಿಂದೆ ಸಂಚು ರೂಪಿಸಿದ್ದರು. ತಮ್ಮ ಬಳಿಯಿದ್ದ ಪಿಸ್ತೂಲ್ ಹಾಗೂ ಗುಂಡುಗಳ ಸಮೇತ ನಗರಕ್ಕೆ ಎಂಟ್ರಿ ಕೊಟ್ಟಿದ್ದರು.
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic city) ರಾಮ್ದೇವ್ ಜ್ಯೂವೆಲ್ಲರ್ ಶಾಪ್ ಟಾರ್ಗೆಟ್ ಮಾಡಿಕೊಂಡಿದ್ದರು. ಇದರಂತೆ ಜುಲೈ 4 ರಂದು ಬೆಳಗ್ಗೆ ಓಪನ್ ಮಾಡಿದ್ದ ಜ್ಯೂವೆಲ್ಲರಿ ಶಾಪ್ ಗೆ ಗ್ರಾಹಕರ ರೂಪದಲ್ಲಿ ತೆರಳಿದ್ದಾರೆ. ಪಿಸ್ತೂಲ್ ತೋರಿಸಿ ಬೆದರಿಸಿದ್ದಾರೆ. ಸಿಬ್ಬಂದಿಯನ್ನ ಲಾಕರ್ ರೂಮ್ ಗೆ ಕರೆದೊಯ್ದು ಕೈಕಾಲು ಕಟ್ಟಿ ಅಂಗಡಿಯಲ್ಲಿದ್ದ 1.58 ಕೋಟಿ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದರು.
ಮೂರು ಕೀಲೊಮೀಟರ್ ಚೇಸ್ ಮಾಡಿ ಹೆಡೆಮುರಿ ಕಟ್ಟಿದ ಪೊಲೀಸ್: ವಿಷಯ ತಿಳಿದು ಪ್ರಕರಣ ದಾಖಲಿಸಿಕೊಂಡು ಕಾರ್ಯಪ್ರವೃತ್ತರಾದ ಆಗ್ನೇಯ ವಿಭಾಗದ ಪೊಲೀಸರು ಆರೋಪಿಗಳ ಬೆನ್ನುಬಿದ್ದಿದ್ದರು. ರಾಜಸ್ಥಾನದಲ್ಲಿ ಆರೋಪಿಗಳ ಸುಳಿವು ಪಡೆದಿದ್ದ ಇನ್ಸ್ಕೆಪ್ಟರ್ ನಂಜೇಗೌಡ ಸಬ್ ಇನ್ಸ್ಪೆಕ್ಟರ್ ಈಶ್ವರ್ ನೇತೃತ್ವದ ತಂಡ ರಾಜಸ್ತಾನದಲ್ಲಿ ಅಡಗಿಕೊಂಡಿದ್ದ ಆರೋಪಿಗಳನ್ನ ಪತ್ತೆ ಮಾಡಿ ಬಂಧಿಸಲು ಮುಂದಾದಾಗ ಆಕ್ಷನ್ ಸಿನಿಮಾದಂತೆ ಪೊಲೀಸರ ಮೇಲೆ ಆರೋಪಿಗಳಾದ ರಾಮ್ ಸಿಂಗ್ ಮತ್ತು ರಾಹುಲ್ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಏರ್ ಫೈರ್ ಮಾಡಿದರೂ ಬಗ್ಗದ ಆರೋಪಿಗಳನ್ನು ಮೂರು ಕೀಲೊಮೀಟರ್ ಚೇಸ್ ಮಾಡಿ ಕೊನೆಗೂ ಹೆಡೆಮುರಿ ಕಟ್ಟಿದ್ದಾರೆ.
ಇದನ್ನೂ ಓದಿ: ಸಿನಿಮೀಯ ಸ್ಟೈಲಲ್ಲಿ ಮೊಬೈಲ್ ಕಳ್ಳರ ಬೆನ್ನಟ್ಟಿ ಹಿಡಿದ ಯುವಕರು
ಇನ್ನೂ ಆರೋಪಿಗಳ ಪೈಕಿ ಓರ್ವ ಆರೋಪಿ ತಲೆ ಮರೆಸಿಕೊಂಡಿದ್ದು, ಎಲೆಕ್ಟ್ರಾನಿಕ್ ಸಿಟಿ ಪೊಲೀಸರ ಈ ಕಾರ್ಯಕ್ಕೆ ಖುದ್ದು ಕಮಿಷನರ್ ಪ್ರತಾಪ್ ರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಪ್ರಕರಣ ಪ್ರಮುಖ ಆರೋಪಿಯಾದ ದೇವರಾಮ್ ಈ ಹಿಂದೆ ಕೂಡ ನಗರದಲ್ಲಿ ಹಲವು ರಾಬರಿ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿದ್ದ. ಜೈಲಿನಿಂದ ಬಂದು ಮತ್ತೆ ದೊಡ್ಡ ಮಟ್ಟದಲ್ಲಿ ದೊಡ್ಡಮಟ್ಟದಲ್ಲಿ ಡಕಾಯಿತಿ ಮಾಡಲು ಪ್ಲಾನ್ ಮಾಡಿದ್ದ. ಅದೇ ರೀತಿ ಬಂಧಿತರಾದ ಉಳಿದ ಆರೋಪಿಗಳ ಮೇಲೆಯೂ ಪ್ರಕರಣ ದಾಖಲಾಗಿದ್ದು ಈ ಸಂಬಂಧ ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಅಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ