Bengaluru: ಸ್ನೇಹಿತನಿಂದಲೇ ಕೊಲೆಯಾದ ಯುವತಿ; ಆಂಧ್ರದಿಂದ ಬಿಬಿಎಂ ಓದಲು ಬಂದಿದ್ದ ದೇವಿಶ್ರೀ ದುರಂತ ಸಾವು!

Published : Nov 24, 2025, 01:18 PM IST
Bengaluru: BBM Student Devi Shree Murdered by Friend in Thammenahalli

ಸಾರಾಂಶ

BBM Student Devi Shree Murdered: ಬೆಂಗಳೂರಿನ ತಮ್ಮೇನಹಳ್ಳಿಯಲ್ಲಿ ಆಂಧ್ರ ಮೂಲದ ಬಿಬಿಎಂ ವಿದ್ಯಾರ್ಥಿನಿ ದೇವಿಶ್ರೀಯನ್ನು ಆಕೆಯ ಸ್ನೇಹಿತ ಪ್ರೇಮ್ ವರ್ಧನ್ ಕೊಲೆ ಮಾಡಿದ್ದಾನೆ. ಕೊಲೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದು, ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು (ನ.24): ಬೆಂಗಳೂರು ಉತ್ತರ ವಲಯದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಮ್ಮೇನಹಳ್ಳಿ ಎಂಬಲ್ಲಿ ಆಂಧ್ರ ಮೂಲದ ಬಿಬಿಎಂ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸ್ನೇಹಿತನೇ ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಕೊಲೆಯಾದ ಯುವತಿಯನ್ನು ಆಂಧ್ರ ಮೂಲದ, ದೇವಿಶ್ರೀ(21) ಎಂದು ಗುರುತಿಸಲಾಗಿದೆ. ಈಕೆ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಬಿಬಿಎಂ ವ್ಯಾಸಾಂಗ ಮಾಡುತ್ತಿದ್ದಳು.

ನಿನ್ನೆ ಸ್ನೇಹಿತನ ಹಿಂದೆ ಹೋಗಿದ್ದ ದೇವಿಶ್ರೀ:

​ನಿನ್ನೆ ಬೆಳಿಗ್ಗೆ, ಯುವತಿ ತನ್ನ ಸ್ನೇಹಿತನೆಂದು ಹೇಳಲಾದ ಪ್ರೇಮ್ ವರ್ಧನ್ ಎಂಬಾತನ ಜೊತೆ ಇನ್ನೊಬ್ಬ ಸ್ನೇಹಿತೆಯ ರೂಮಿಗೆ ತೆರಳಿದ್ದಳು. ಅಲ್ಲಿ ಆಕೆಯ ಸ್ನೇಹಿತ ಪ್ರೇಮ್ ವರ್ಧನ್ ಯುವತಿಯನ್ನು ಕೊಲೆ ಮಾಡಿ, ತಾನೊಬ್ಬನೇ ಸ್ಥಳದಿಂದ ವಾಪಸ್ಸಾಗಿದ್ದಾನೆ. ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿರುವ ಮನೆಯವರು. ಬಳಿಕ ಸ್ಥಳಕ್ಕೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ​

ಕೊಲೆ ಬಳಿಕ ತಲೆಮರೆಸಿಕೊಂಡಿರುವ ಆರೋಪಿ

ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸದ್ಯ ಕೊಲೆ ಮಾಡಿ ತಲೆಮರೆಸಿಕೊಂಡಿರುವ ಆರೋಪಿ ಪ್ರೇಮ್ ವರ್ಧನ್‌ಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಕೊಲೆಗೆ ನಿಖರ ಕಾರಣ ಏನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮ೧ಹತ್ಯೆ; ನೇರಳೆ ಮಾರ್ಗದಲ್ಲಿ ರೈಲು ಸಂಚಾರಕ್ಕೆ ವ್ಯತ್ಯಯ!
ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್, ದರ್ಶನ್‌ಗೆ ಜೈಲಲ್ಲೊಂದು ಶಾಕ್, ಕೋರ್ಟ್‌ನಲ್ಲೊಂದು ಆಘಾತ!