ಸಂತಾನ ಇಲ್ಲವೆಂದು ಮಕ್ಕಳಕಿಡ್ನಾಪ್‌ ಮಾಡಿದ ದಂಪತಿ!

Published : Dec 14, 2023, 01:09 PM IST
ಸಂತಾನ ಇಲ್ಲವೆಂದು ಮಕ್ಕಳಕಿಡ್ನಾಪ್‌ ಮಾಡಿದ ದಂಪತಿ!

ಸಾರಾಂಶ

ತಮಗೆ ಸಂತಾನವಿಲ್ಲವೆಂದು ಅಪರಿಚಿತರ ಮನೆ ಮುಂದೆ ಆಟವಾಡುತ್ತಿದ್ದ ಎಂಟು ತಿಂಗಳ ಹಸುಗೂಸು ಸೇರಿದಂತೆ ಇಬ್ಬರು ಮಕ್ಕಳನ್ನು ಅಪಹರಿಸಿ ಊರಿಗೆ ಪರಾರಿಯಾಗುತ್ತಿದ್ದ ದಂಪತಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು (ಡಿ.14) :  ತಮಗೆ ಸಂತಾನವಿಲ್ಲವೆಂದು ಅಪರಿಚಿತರ ಮನೆ ಮುಂದೆ ಆಟವಾಡುತ್ತಿದ್ದ ಎಂಟು ತಿಂಗಳ ಹಸುಗೂಸು ಸೇರಿದಂತೆ ಇಬ್ಬರು ಮಕ್ಕಳನ್ನು ಅಪಹರಿಸಿ ಊರಿಗೆ ಪರಾರಿಯಾಗುತ್ತಿದ್ದ ದಂಪತಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬಿಹಾರ ಮೂಲದ ಪ್ರಮೀಳಾ ದೇವಿ ಹಾಗೂ ಬಲರಾಮ್ ಬಂಧಿತರಾಗಿದ್ದು, ಕೊಡಿಗೇಹಳ್ಳಿ ಸಮೀಪ ಮಂಗಳವಾರ ಬೆಳಗ್ಗೆ ಮಕ್ಕಳನ್ನು ಅಪಹರಿಸಿ ರೈಲಿನಲ್ಲಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ ಯಶವಂತಪುರ ರೈಲ್ವೆ ನಿಲ್ದಾಣದ ಮಗುವಿನ ಅಕ್ರಂದನ ಕೇಳಿ ಶಂಕೆಗೊಂಡ ಪೊಲೀಸರು, ತಕ್ಷಣವೇ ದಂಪತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಅಪಹರಣ ಕೃತ್ಯ ಬೆಳಕಿಗೆ ಬಂದಿದೆ. ಬಳಿಕ ಆರೋಪಿಗಳನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರಿಗೆ ರೈಲ್ವೆ ಪೊಲೀಸರು ಒಪ್ಪಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

 

ಮಕ್ಕಳನ್ನು ಕದ್ದು ನಿದ್ದೆ ಮಾತ್ರೆ ನೀಡಿ ಭಿಕ್ಷಾಟನೆಗೆ ಬಳಕೆ: ಬಾಡಿಗೆ ಆಧಾರದಲ್ಲಿ ಮಹಿಳೆಯರ ಭಿಕ್ಷೆ

ಕೂಲಿ ಅರಸಿ ನಗರಕ್ಕೆ ಬಂದಿದ್ದ ದಂಪತಿ:

ಕೆಲ ತಿಂಗಳ ಹಿಂದೆ ಕೂಲಿ ಅರಸಿ ನಗರಕ್ಕೆ ಬಂದಿದ್ದ ಬಲರಾಮ್ ದಂಪತಿ, ಕೊಡಿಗೇಹಳ್ಳಿ ಸಮೀಪ ನೆಲೆಸಿತ್ತು. ನಿರ್ಮಾಣ ಹಂತದ ಕಟ್ಟಡಗಳಲ್ಲಿ ಕೆಲಸ ಮಾಡುತ್ತಿದ್ದ ದಂಪತಿ, ಸಂತಾನವಿಲ್ಲದೆ ನೋವು ಅನುಭವಿಸುತ್ತಿದ್ದರು. ಆಗ ಅಪರಿಚಿತರ ಮಕ್ಕಳನ್ನು ಕಳವು ಮಾಡಿ ತಮ್ಮೂರಿಗೆ ಪರಾರಿಯಾಗಲು ಆರೋಪಿಗಳು ಸಂಚು ರೂಪಿಸಿದ್ದರು.

ಅಂತೆಯೇ ಕೊಡಿಗೇಹಳ್ಳಿ ಸಮೀಪ ಮನೆ ಮುಂದೆ ಆಟವಾಡುತ್ತಿದ್ದ ಆರು ವರ್ಷದ ಹೆಣ್ಣು ಮಗು ಹಾಗೂ 8 ತಿಂಗಳ ಗಂಡು ಮಗವನ್ನು ಮಂಗಳವಾರ ಬೆಳಗ್ಗೆ 11.30ರಲ್ಲಿ ಅಪಹರಿಸಿದ ಆರೋಪಿಗಳು, ರಾತ್ರಿ ರೈಲಿನಲ್ಲಿ ಬಿಹಾರಕ್ಕೆ ಪರಾರಿಯಾಗಲು ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ಆರೋಪಿಗಳು ತೆರಳಿದ್ದರು.

ಆ ವೇಳೆ ಪ್ರಮೀಳಾ ಮಡಿಲಿನಲ್ಲಿದ್ದ 8 ತಿಂಗಳ ಕಂದಮ್ಮ ಹಸಿವಿನಿಂದ ಅಕ್ರಂದನ ಮಾಡಿದೆ. ಮಗುವಿನ ರೋಧನ ಕೇಳಿ ಪ್ರಯಾಣಿಕರು ಜಮಾಯಿಸಿದ್ದಾರೆ. ಅದೇ ವೇಳೆ ಅಲ್ಲಿಗೆ ರೈಲ್ವೆ ಪೊಲೀಸರು ಧಾವಿಸಿದ್ದಾರೆ. ಆಗ ಪ್ರಮೀಳಾಳ ನಡವಳಿಕೆ ಮೇಲೆ ಶಂಕೆಗೊಂಡು ಪೊಲೀಸರು ವಿಚಾರಿಸಿದಾಗ ಅಪಹರಣ ಕೃತ್ಯ ಬೆಳಕಿಗೆ ಬಂದಿದೆ.

ದೋಚುತ್ತಿದ್ದಾಗಲೇ ಮನೆಗೆ ಬಂದು ಕಳ್ಳರನ್ನು ಕೂಡಿ ಹಾಕಿದ ಮಾಲೀಕ!

ಅಷ್ಟರಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳು ನಾಪತ್ತೆಯಾಗಿದ್ದರಿಂದ ಕಂಗಲಾದ ಮಕ್ಕಳ ಪೋಷಕರು, ಕೂಡಲೇ ಕೊಡಿಗೇಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಅದರನ್ವಯ ತಕ್ಷಣವೇ ಕಾರ್ಯಾಚರಣೆಗಿಳಿದ ಪೊಲೀಸರು, ಘಟನಾ ಸ್ಥಳದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ದಂಪತಿ ಚಲನವಲನ ದೃಶ್ಯ ಪತ್ತೆಯಾಗಿದೆ.

ಈ ಸುಳಿವು ಆಧರಿಸಿ ಕೊಡಿಗೇಹಳ್ಳಿ ಪೊಲೀಸರು ತನಿಖೆ ಮುಂದುವರೆಸಿದ್ದರು. ಆ ವೇಳೆಗೆ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಮಕ್ಕಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಕೂಡಲೇ ಅಲ್ಲಿಗೆ ತೆರಳಿ ಮಕ್ಕಳನ್ನು ರಕ್ಷಿಸಿ ಪೋಷಕರ ಮಡಲಿಗೆ ಸುರಕ್ಷಿತವಾಗಿ ಸೇರಿಸಿದ ಪೊಲೀಸರು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ
Actor Dileep Case: ಖ್ಯಾತ ನಟಿ ಮೇಲಿನ ಅ*ತ್ಯಾಚಾರ ಆರೋಪ; 8 ವರ್ಷಗಳ ಹೋರಾಟ, ನಟ ದಿಲೀಪ್‌ಗೆ ನಿರಾಳ!