ಬೆಂಗಳೂರು: ಮುದ್ದಾದ ಹೆಂಡತಿ ಕೊಂದು, ಸೂಟ್‌ಕೇಸ್‌ಗೆ ತುಂಬಿದ ಪತಿರಾಯ!

Published : Mar 27, 2025, 08:23 PM ISTUpdated : Mar 27, 2025, 08:53 PM IST
ಬೆಂಗಳೂರು: ಮುದ್ದಾದ ಹೆಂಡತಿ ಕೊಂದು, ಸೂಟ್‌ಕೇಸ್‌ಗೆ ತುಂಬಿದ ಪತಿರಾಯ!

ಸಾರಾಂಶ

ಮಹಾರಾಷ್ಟ್ರ ಮೂಲದ ದಂಪತಿ ಬೆಂಗಳೂರಿನಲ್ಲಿ ವಾಸವಾಗಿದ್ದರು. ಗಂಡ ಹೆಂಡತಿಯನ್ನು ಕೊಲೆ ಮಾಡಿ, ದೇಹವನ್ನು ತುಂಡರಿಸಿ ಸೂಟ್‌ಕೇಸ್‌ನಲ್ಲಿ ತುಂಬಿದ್ದಾನೆ. ಬಳಿಕ ಹೆಂಡತಿಯ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದಾನೆ. ಮುಂಬೈ ಪೊಲೀಸರ ಮೂಲಕ ಬೆಂಗಳೂರು ಪೊಲೀಸರಿಗೆ ಮಾಹಿತಿ ತಲುಪಿದೆ. ಪೊಲೀಸರು ಮೃತದೇಹ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಆರೋಪಿ ರಾಕೇಶ್‌ನನ್ನು ಬಂಧಿಸಲು ಶೋಧ ಕಾರ್ಯ ನಡೆಯುತ್ತಿದೆ.

ಬೆಂಗಳೂರು/ ಆನೇಕಲ್ (ಮಾ.27): ಮಹರಾಷ್ಟ್ರದಿಂದ ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದು ವಾಸವಾಗಿದ್ದ ದಂಪತಿ ಹಲವು ವರ್ಷಗಳಿಂದ ಇಲ್ಲಿ ಅನ್ಯೋನ್ಯವಾಗಿದ್ದರು. ಆದರೆ, ಇದ್ದಕ್ಕಿದ್ದಂತೆ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಗಂಡನೇ ತನ್ನ ಹೆಂಡತಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ್ದಾನೆ. ನಂತರ, ಹೆಂಡತಿ ಮನೆಯವರಿಗೆ ಕರೆ ಮಾಡಿ ಮಾಹಿತಿ ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರ ಮೂಲದ ಜೋಡಿಯೊಂದ ಉದ್ಯೋಗ ನಿಮಿತ್ತ ಬೆಂಗಳೂರಿನ ಹೊರವಲಯ ಹುಳಿಮಾವು ಸಮೀಪದ ದೊಡ್ಡ ಕಮ್ಮನಹಳ್ಳಿಯ ಮನೆಯೊಂದರಲ್ಲಿ ವಾಸವಾಗಿದ್ದರು. ರಾಕೇಶ್ ರಾಜೇಂದ್ರ ಹಾಗೂ ಗೌರಿ ಅನಿಲ್ ಸಾಂಬೆಕರ್ ಕೆಲ ವರ್ಷಗಳಿಂದ ಇಲ್ಲಿ ಅನ್ಯೋನ್ಯವಾಗಿದ್ದರು. ಆಗಾಗ್ಗೆ ಮಹಾರಾಷ್ಟ್ರಕ್ಕೂ ಹೋಗಿ ಬರುತ್ತಿದ್ದರು. ಆದರೆ, ಕೆಲ ದಿನಗಳಿಂದ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ತಡರಾತ್ರಿ ವೇಳೆಯೂ ಇಬ್ಬರ ಜಗಳ ಪಕ್ಕದ ಮನೆಯವರಿಗೂ ಕೇಳಿಸುತ್ತಿತ್ತು.

ಆದರೆ, ಇದೀಗ ಗಂಡ ರಾಕೇಶ್‌ನೇ ತನ್ನ ಹೆಂಡತಿ ಗೌರಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿದ್ದಾನೆ. ಈ ಮೃತದೇಹವನ್ನು ಬೀಸಾಡಬೇಕು ಎಂದುಕೊಂಡಾಗ ಕೊಲೆ ಮಾಡಿದ ನಂತರ ಪಶ್ಚಾತ್ತಾಪ ಉಂಟಾಗಿದ್ದು, ಹೆಂಡತಿ ಮನೆಯವರಿಗೆ ಕೊಲೆ ಮಾಡಿ, ಸೂಟ್‌ಕೇಸ್‌ಗೆ ತುಂಬಿದ್ದಾಗಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಮಹಾರಾಷ್ಟ್ರದಲ್ಲಿರುವ ಯುವತಿ ಗೌರಿ ಮನೆಯವರು ಮುಂಬೈ ಪೊಲೀಸರನ್ನು ಸಂಪರ್ಕ ಮಾಡಿದ್ದಾರೆ. ಆಗ ಮುಂಬೈ ಪೊಲೀಸರು ಬೆಂಗಳೂರು ಪೊಲೀಸರಿಗೆ ಮಾಹಿತಿ ರವಾನಿದ್ದಾರೆ.

ಇದನ್ನೂ ಓದಿ: ಪತಿಯಂದಿರೇ ಹುಷಾರ್​! ಗಂಡ ಹೆಂಡಿರ ಜಗಳ ನಾಲಿಗೆ ಕಚ್ಚಿ ತುಂಡು ಮಾಡುವ ತನಕ...

ಇದೀಗ ಮುಂಬೈ ಪೊಲೀಸರ ಮಾಹಿತಿ ಮೇರೆಗೆ ಹುಳಿಮಾವು ಪೊಲೀಸರು ರಾಕೇಶ್‌ನ ಮನೆಗೆ ಹೋಗಿದ್ದು, ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ. ನಂತರ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿದ್ದಾರೆ. ಇದೀಗ ಘಟನೆಯ ಹಿನ್ನೆಲೆಯನ್ನು ತನಿಖೆ ಮಾಡುತ್ತಿದ್ದು, ರಾಕೇಶ್‌ನನ್ನು ವಶಕ್ಕೆ ಪಡೆಯಲು ಶೋಧ ಕಾರ್ಯ ಮುಂದುವರೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?