ಮುಂಬೈ ಸೈಬರ್‌ ಪೊಲೀಸ್‌ ಸೋಗಲ್ಲಿ ಮಹಿಳಾ ಟೆಕ್ಕಿಗೆ ₹3.46 ಲಕ್ಷ ವಂಚನೆ!

Published : Dec 04, 2023, 05:20 AM IST
ಮುಂಬೈ ಸೈಬರ್‌ ಪೊಲೀಸ್‌ ಸೋಗಲ್ಲಿ ಮಹಿಳಾ ಟೆಕ್ಕಿಗೆ ₹3.46 ಲಕ್ಷ ವಂಚನೆ!

ಸಾರಾಂಶ

ಮುಂಬೈ ಸೈಬರ್‌ ಪೊಲೀಸರ ಸೋಗಿನಲ್ಲಿ ಮಹಿಳಾ ಸಾಫ್ಟ್‌ವೇರ್‌ ಎಂಜಿನಿಯರ್‌ಗೆ ದುಷ್ಕರ್ಮಿಗಳು ಕರೆ ಮಾಡಿ ಹೆದರಿಸಿ ₹3.46 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ ಆರೋಪದಡಿ ವೈಟ್‌ಫಿಲ್ಡ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. 3.46 lakh fraud to a female techie under the guise of Mumbai Cyber ​​Police

ಬೆಂಗಳೂರು: ಮುಂಬೈ ಸೈಬರ್‌ ಪೊಲೀಸರ ಸೋಗಿನಲ್ಲಿ ಮಹಿಳಾ ಸಾಫ್ಟ್‌ವೇರ್‌ ಎಂಜಿನಿಯರ್‌ಗೆ ದುಷ್ಕರ್ಮಿಗಳು ಕರೆ ಮಾಡಿ ಹೆದರಿಸಿ ₹3.46 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ ಆರೋಪದಡಿ ವೈಟ್‌ಫಿಲ್ಡ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ವೈಟ್‌ಫಿಲ್ಡ್‌ನ ಬಿಇಎಂಎಲ್‌ ಲೇಔಟ್‌ ನಿವಾಸಿ ಮೇಘನಾ ದುಬೆ(25) ಸೈಬರ್‌ ವಂಚಕರ ಬಲೆಗೆ ಬಿದ್ದು ಹಣ ಕಳೆದುಕೊಂಡವರು. ಇವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಮನೆ ಬಿಟ್ಟು ಓಡಿ ಬಂದು ಮದುವೆಯಾಗಿದ್ದ ಯುವತಿ ಆತ್ಮಹತ್ಯೆ, ಕಾರಣ ನಿಗೂಢ?

ಏನಿದು ಪ್ರಕರಣ?:

ವೃತ್ತಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿರುವ ಮೇಘನಾ ದುಬೆಗೆ ನ.28ರಂದು ಬೆಳಗ್ಗೆ ಅಪರಿಚಿತ ಮೊಬೈಲ್‌ ಸಂಖ್ಯೆಯಿಂದ ಕರೆ ಬಂದಿದ್ದು, ಕರೆ ಮಾಡಿದ್ದ ವ್ಯಕ್ತಿ ತಾನು ಮುಂಬೈ ಸೈಬರ್‌ ಪೊಲೀಸ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಬಳಿಕ ನಿಮ್ಮ ಹೆಸರಿನಲ್ಲಿ ಮುಂಬೈನಿಂದ ತೈವಾನ್‌ಗೆ ಇಂಟರ್‌ ನ್ಯಾಷನಲ್‌ ಎಂಡಿಎಂಎ ಡ್ರಗ್ಸ್‌ ಡೆಲಿವರಿಗೆ ಬಂದಿದೆ. ಇದನ್ನು ಮುಂಬೈನ ಫೆಡೆಕ್ಸ್‌ ಕೊರಿಯರ್‌ ಏಜೆನ್ಸಿಯಲ್ಲಿ ಮುಂಬೈ ಕಸ್ಟಮ್ಸ್‌ ಅಧಿಕಾರಿಗಳು ಬ್ಲಾಕ್‌ ಮಾಡಿದ್ದಾರೆ ಎಂದು ಹೇಳಿದ್ದಾನೆ. ಇದರಿಂದ ಭಯಗೊಂಡ ಮೇಘನಾ, ನನಗೂ ಆ ಪಾರ್ಸೆಲ್‌ಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಸ್ಕೈಪ್‌ ಆ್ಯಪ್‌ ಇನ್ಸ್‌ಸ್ಟಾಲ್‌ ಮಾಡಿಸಿ ವಂಚನೆ:

ಈ ವೇಳೆ ದುಷ್ಕರ್ಮಿಗಳು ಸ್ಕೈಪ್‌ ಆ್ಯಪ್‌ ಮುಖಾಂತರ ಸೈಬರ್‌ ದೂರು ನೀಡುವಂತೆ ಹೇಳಿದ್ದಾರೆ. ಅದರಂತೆ ಮೇಘನಾ ಸ್ಕೈಪ್‌ ಆ್ಯಪ್‌ ಇನ್ಸ್‌ಸ್ಟಾಲ್‌ ಮಾಡಿಕೊಂಡಿದ್ದಾರೆ. ಬಳಿಕ ದುಷ್ಕರ್ಮಿಗಳು, ತನಿಖೆಗಾಗಿ ಆರ್‌ಬಿಐ ವೆರಿಫಿಕೇಶನ್‌ಗಾಗಿ ಹಣ ಹಾಕಬೇಕು. ಪರಿಶೀಲನೆ ಬಳಿಕ ಆ ಹಣವನ್ನು ವಾಪಾಸ್‌ ನೀಡುವುದಾಗಿ ಹೇಳಿದ್ದಾರೆ. ದುಷ್ಕರ್ಮಿಗಳ ಮಾತು ನಂಬಿದ ಮೇಘನಾ, ದುಷ್ಕರ್ಮಿಗಳು ನೀಡಿದ ಬ್ಯಾಂಕ್‌ ಖಾತೆಗೆ ಹಂತ ಹಂತವಾಗಿ ಒಟ್ಟು ₹3.46 ಲಕ್ಷ ವರ್ಗಾಯಿಸಿದ್ದಾರೆ.

 

ತಾಯಿಯನ್ನು ನಿಂದಿಸಿದನೆಂದು ಅಜ್ಜನನ್ನೇ ಕೊಂದ ಮೊಮ್ಮಗ!

ಬಳಿಕ ದುಷ್ಕರ್ಮಿಗಳು ಸಂಪರ್ಕಕ್ಕೆ ಸಿಗದೆ ಮೊಬೈಲ್‌ ಸ್ವಿಚ್ಡ್‌ ಆಫ್‌ ಮಾಡಿಕೊಂಡಿದ್ದಾರೆ. ಬಳಿಕ ತಾನು ಸೈಬರ್‌ ವಂಚನೆಗೆ ಒಳಗಾಗಿರುವುದು ಮೇಘನಾಗೆ ಅರಿವಾಗಿದೆ. ನಂತರ ಅವರು ವೈಟ್‌ಫಿಲ್ಡ್‌ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಈ ದೂರು ಆಧರಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ