ಮಗುವಿಗೆ ವಿಷ ನೀಡಿ ತಾನೂ ಸೇವಿಸಿ ಆತ್ಮಹತ್ಯೆಗೆ ಮುಂದಾದ ತಾಯಿ! ಕಂದ ಸಾವು, ಹೆತ್ತವಳು ಆಸ್ಪತ್ರೆಗೆ ದಾಖಲು!

Published : Jul 31, 2025, 07:03 AM IST
Police jeep

ಸಾರಾಂಶ

ಬ್ಯಾಡರಹಳ್ಳಿಯಲ್ಲಿ ಹಣಕಾಸಿನ ಸಮಸ್ಯೆ ಮತ್ತು ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿಯೊಬ್ಬಳು ತನ್ನ ಮಗುವಿಗೆ ವಿಷ ನೀಡಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ದುರದೃಷ್ಟವಶಾತ್ ಮಗು ಮೃತಪಟ್ಟಿದ್ದು, ತಾಯಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಬೆಂಗಳೂರು (ಜು.31): ಬೆಂಗಳೂರಿನ ಬ್ಯಾಡರಹಳ್ಳಿ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ನಿನ್ನೆ ಸಂಜೆ ನಡೆದ ಹೃದಯವಿದ್ರಾವಕ ಘಟನೆಯೊಂದರಲ್ಲಿ 24 ವರ್ಷದ ಚಂದ್ರಿಕಾ ಎಂಬ ತಾಯಿ ತನ್ನ ಒಂದು ವರ್ಷ ಎಂಟು ತಿಂಗಳ ಮಗು ಚಾರ್ವಿಗೆ ಟೀಗೆ ಇಲಿಪಾಷಾಣ ಬೆರೆಸಿ ಕುಡಿಸಿ, ತಾನೂ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಈ ಘಟನೆಯಲ್ಲಿ ಮಗು ಚಾರ್ವಿ ಮೃತಪಟ್ಟಿದ್ದು, ಚಂದ್ರಿಕಾ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಹಣಕಾಸಿನ ಸಮಸ್ಯೆ ಮತ್ತು ಕುಟುಂಬದ ಜಗಳದಿಂದ ಬೇಸತ್ತ ಚಂದ್ರಿಕಾ, ಈ ಕೃತ್ಯಕ್ಕೆ ಮುಂದಾಗಿದ್ದಾಳೆ ಎಂದು ಶಂಕಿಸಲಾಗಿದೆ.

ಚಂದ್ರಿಕಾ ತನ್ನ ಗಂಡ ಯೋಗೇಶ್‌ನೊಂದಿಗೆ ಹಣಕಾಸಿನ ವಿಚಾರಕ್ಕೆ ದಿನನಿತ್ಯ ಜಗಳದಿಂದ ಬೇಸತ್ತ ಹಿನ್ನೆಲೆಯಲ್ಲಿ ಈ ದಾರುಣ ನಿರ್ಧಾರ ಕೈಗೊಂಡಿದ್ದಾಳೆ ಎನ್ನಲಾಗಿದೆ. ಘಟನೆಯ ಸಂದರ್ಭದಲ್ಲಿ ಯೋಗೇಶ್ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗಿದ್ದಾಗ ಚಂದ್ರಿಕಾ ಈ ಕೃತ್ಯಕ್ಕೆ ಮುಂದಾಗಿದ್ದಾಳೆ. ನಂತರ ಚಂದ್ರಿಕಾ ತನ್ನ ಗಂಡನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ. ಕೂಡಲೇ ಮನೆಗೆ ಧಾವಿಸಿದ ಯೋಗೇಶ್, ಪತ್ನಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಚಾರ್ವಿ ಮೃತಪಟ್ಟಿದ್ದಾಳೆ.

ಸದ್ಯ ಚಂದ್ರಿಕಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು: ಬ್ಯಾನರ್ ಗಲಾಟೆ, ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ, ಬಜರಂಗದಳ ಕಾರ್ಯಕರ್ತರ ಮೇಲೆ ಶಂಕೆ!
ಮಿರ್ಜಾ ಇಸ್ಮಾಯಿಲ್ ಮೊಮ್ಮಗಳ ಹಂತಕನಿಗೆ ಜೈಲೇ ಗತಿ, ಏನಿದು ಪ್ರಕರಣ?