
ಚಿಕ್ಕಬಳ್ಳಾಪುರ, (ಸೆಪ್ಟೆಂಬರ್.16): ಸ್ನೇಹಿತನ ಜತೆ ಬೈಕ್ನಲ್ಲಿ ಪಿಕ್ನಿಕ್ಗೆ ತೆರಳುತ್ತಿದ್ದ ಬೆಂಗಳೂರಿನ ಯುವತಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ವಾಪಸಂದ್ರ ಬ್ರಿಡ್ಜ್ ಬಳಿ ನಡೆದಿದೆ.
ಬೆಂಗಳೂರು ಮೂಲದ ಯುವತಿ ಚೈತ್ರಾ (19) ಮೃತಪಟ್ಟ ವಿದ್ಯಾರ್ಥಿನಿ. ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿ ಚೈತ್ರಾ ತನ್ನ ಸ್ನೇಹಿತ ಲಿಖಿತ್ ಗೌಡನೊಂದಿಗೆ ಶ್ರೀನಿವಾಸ ಸಾಗರ ಜಲಾಶಯ ನೋಡಲು ತೆರಳಿದ್ದಾಳೆ. ಆದ್ರೆ, ಜಲಾಶಯ ನೋಡಿ ಬೆಂಗಳೂರಿನತ್ತ ವಾಪಾಸ್ಸಾಗುವಾಗ ಚೈತ್ರಾ ಹೋಗುತ್ತಿದ್ದ ಬೈಕ್ಗೆ ಟಿಪ್ಪರ್ ಡಿಕ್ಕಿ ಗುದ್ದಿದೆ.
Udupi; 14 ಚಕ್ರದ ಗೂಡ್ಸ್ ಲಾರಿ ಚಲಾಯಿಸಿ ಇಬ್ಬರನ್ನುಕೊಂದ ಹದಿನಾರರ ಬಾಲಕ!
ಸ್ಕೂಟಿಯಲ್ಲಿ ತೆರಳುತ್ತಿದ್ದ ಚೈತ್ರಾ ಹಾಗೂ ಲಿಖಿತ್ ಗೌಡ ಹೈವೇಗೆ ಎಂಟ್ರೀ ಕೊಡುತ್ತಿದ್ದಂತೆಯೇ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾತಮ ಚೈತ್ರಾ ಸಾವನ್ನಪ್ಪಿದ್ದು, ಗೆಳೆಯ ಲಿಖಿತ್ ಗೌಡ ಗಂಭೀರವಾಗಿ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆಯಲ್ಲಿ ಸರಣಿ ಅಪಘಾತ
ದಾವಣಗೆರೆ: ದಾವಣಗೆರೆ ಹೊರವಲಯದ ಕಲ್ಪನಹಳ್ಳಿ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ಗೆ ಆ್ಯಂಬುಲೆನ್ಸ್ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಶಿಕ್ಷಕಿ ಜ್ಯೋತಿ (43) ಮತ್ತು ಬೈಕ್ ಸವಾರ ಮಂಜುನಾಥ್ (68) ಸಾವಿಗೀಡಾಗಿದ್ದಾರೆ. ಆ್ಯಂಬುಲೆನ್ಸ್ ಚಾಲಕ ಮೊಹಮ್ಮದ್ ಮೀರನ್ಗೆ ತೀವ್ರ ಗಾಯಗಳಾಗಿವೆ.
ಶಿಕ್ಷಕಿ ಜ್ಯೋತಿ ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸದಲ್ಲಿ ಇರುವಾಗಲೇ ಜ್ಯೋತಿ ಪತಿಗೆ ಹೃದಯಾಘಾತವಾಗಿದೆ. ದಾವಣಗೆರೆ ಆಸ್ಪತ್ರೆಗೆ ಆ್ಯಂಬುಲೆನ್ಸ್ನಲ್ಲಿ ಕರೆತರುವಾಗ ಈ ಅವಘಡ ನಡೆದಿದೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ