ಬೆಂಗಳೂರು: ಅನೈತಿಕ ಸಂಬಂಧ ಶಂಕೆ, ಅಕ್ಕಸಾಲಿಗನ ಕೊಲೆ ಮಾಡಿದ್ದ ಷಡ್ಕ ಸೇರಿ ಇಬ್ಬರ ಬಂಧನ

Published : Feb 21, 2024, 09:55 AM IST
ಬೆಂಗಳೂರು: ಅನೈತಿಕ ಸಂಬಂಧ ಶಂಕೆ,  ಅಕ್ಕಸಾಲಿಗನ ಕೊಲೆ ಮಾಡಿದ್ದ ಷಡ್ಕ ಸೇರಿ ಇಬ್ಬರ ಬಂಧನ

ಸಾರಾಂಶ

ತನ್ನ ಪತ್ನಿ ಜತೆ ಅನೈತಿಕ ಸಂಬಂಧ ಶಂಕೆ ಹಿನ್ನಲೆಯಲ್ಲಿ ಅಕ್ಕಸಾಲಿಗನನ್ನು ಕೊಲೆ ಮಾಡಿದ್ದ ಮೃತನ ಷಡ್ಕ (co brother) ಸೇರಿದಂತೆ ಇಬ್ಬರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು (ಫೆ.21): ತನ್ನ ಪತ್ನಿ ಜತೆ ಅನೈತಿಕ ಸಂಬಂಧ ಶಂಕೆ ಹಿನ್ನಲೆಯಲ್ಲಿ ಅಕ್ಕಸಾಲಿಗನನ್ನು ಕೊಲೆ ಮಾಡಿದ್ದ ಮೃತನ ಷಡ್ಕ (co brother) ಸೇರಿದಂತೆ ಇಬ್ಬರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಗರ್ತಪೇಟೆ ನಿವಾಸಿ ಶಹಜಾವಾನ್‌ ಹಾಗೂ ಆತನ ಸಹಚರ ಬಬ್ಲು ಬಂಧಿತನಾಗಿದ್ದು, ಕಡಿಮೆ ಬೆಲೆಗೆ ಚಿನ್ನ ಕೊಡಿಸುವ ನೆಪದಲ್ಲಿ ಸೋಮವಾರ ರಾತ್ರಿ ಮೊಹಮ್ಮದ್‌ ಅತ್ತರ್ ಆಲಿ (49)ನನ್ನು ವರ್ತೂರು ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆರೋಪಿಗಳು ಹತ್ಯೆ ಮಾಡಿದ್ದರು.

ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆಗೈದ ಪತಿ ಬಂಧನ!

ಈ ಬಗ್ಗೆ ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು, ಕೃತ್ಯ ಬೆಳಕಿಗೆ ಬಂದ ಕೆಲವೇ ತಾಸಿನೊಳಗೆ ಆರೋಪಿಗಳನ್ನು ಬಂಧಿಸಿದ್ದಾರೆ. ತನ್ನ ಕುಟುಂಬದ ಜತೆ ನಗರ್ತಪೇಟೆಯಲ್ಲಿ ನೆಲೆಸಿದ್ದ ಮೊಹಮ್ಮದ್ ಅತ್ತರ್ ಆಲಿ, ಮನೆ ಸಮೀಪದಲ್ಲೇ ಚಿನ್ನಾಭರಣ ಮಳಿಗೆ ಇಟ್ಟುಕೊಂಡಿದ್ದರು. ಇತ್ತೀಚಿಗೆ ವ್ಯವಹಾರಿಕವಾಗಿ ಆಲಿ ಜತೆ ಮುನಿಸಿಕೊಂಡಿದ್ದ ಆತನ ಷಡ್ಕ ಶಹಜಾವಾನ್‌, ತನ್ನ ಪತ್ನಿ ಜತೆ ಆಲಿ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಶಂಕೆಗೊಂಡಿದ್ದ. ಇದೇ ವಿಷಯವಾಗಿ ಇಬ್ಬರ ನಡುವೆ ಮನಸ್ತಾಪ ಬೆಳೆದಿತ್ತು.

ಬೆಟ್ಟಿಂಗ್‌ ಜತೆ ಹೆಣ್ಣಿನ ಚಟ, ಹಗಲು ದರೋಡೆಗಿಳಿದ ಬೆಂಗಳೂರು ರಿಯಲ್‌ ಎಸ್ಟೇಟ್‌ ಉದ್ಯಮಿ ಉದ್ಯೋಗಸ್ಥರೇ ಟಾರ್ಗೆಟ್‌!

ಈ ಹಿನ್ನಲೆಯಲ್ಲಿ ಆಲಿ ಕೊಲೆಗೆ ತನ್ನ ಸಹಚರ ಬಬ್ಲು ಜತೆ ಸೇರಿ ಶಹಜಾವಾನ್‌ ಸಂಚು ರೂಪಿಸಿದ್ದ. ಅಂತೆಯೇ ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ನಂಬಿಸಿ ವರ್ತೂರು ಸಮೀಪದ ನಿರ್ಜನ ಅರಣ್ಯ ಪ್ರದೇಶಕ್ಕೆ ಸೋಮವಾರ ರಾತ್ರಿ ಆಲಿಯನ್ನು ಬೈಕ್‌ನಲ್ಲಿ ಆರೋಪಿಗಳು, ಹತ್ಯೆಗೈದು ಬಳಿಕ ಮೃತದೇಹವನ್ನು ಬಿಸಾಡಿದ್ದರು. ತನ್ನ ಪತಿ ತಡರಾತ್ರಿಯಾದರೂ ಮನೆಗೆ ಬಾರದೆ ಹೋದಾಗ ಭೀತಿಗೊಂಡ ಮೃತನ ಪತ್ನಿ, ಹಲಸೂರು ಗೇಟ್ ಠಾಣೆಗೆ ಮಧ್ಯರಾತ್ರಿ 2 ಗಂಟೆಗೆ ತೆರಳಿ ದೂರು ನೀಡಿದ್ದಳು. ಅಲ್ಲದೆ ತನ್ನ ಕಣ್ಮರೆ ಹಿಂದೆ ಸಂಬಂಧಿ ಶಹಜಾವಾನ್‌ ಪಾತ್ರವಿರಬಹುದು ಎಂದು ಆಕೆ ಆರೋಪಿಸಿದ್ದಳು. ಕೂಡಲೇ ಶಹಜಾವಾನ್‌ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ರಹಸ್ಯ ಬಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಪರಿಚಿತ ಯುವತಿ ಮೃತದೇಹ ಪತ್ತೆ:
ಶಾಂತಿನಗರದ ಡಬಲ್‌ ರೋಡ್ ಸಮೀಪದ ನಿರ್ಮಾಣ ಹಂತದ ಕಟ್ಟಡದಲ್ಲಿ ಅಪರಿಚಿತ ಯುವತಿಯೊಬ್ಬಳ ಮೃತದೇಹ ಮಂಗಳವಾರ ಪತ್ತೆಯಾಗಿದೆ. ಮೃತಳ ವಯಸ್ಸು 25 ರಿಂದ 28 ವರ್ಷವಾಗಿದ್ದು, ಪರಿಚಿತರೇ ಆಕೆಯನ್ನು ಹತ್ಯೆಗೈದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಎಸ್‌.ಆರ್‌.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಹವಾಸ, ಒತ್ತಾಯಕ್ಕೆ ಗಾಂಜಾ ಜಾಲಕ್ಕೆ ವಿದ್ಯಾರ್ಥಿಗಳು!
ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!