
ಬೆಂಗಳೂರು (ಮಾ.7): ಮೂರು ದಿನಗಳ ಹಿಂದೆ ಹೋಟೆಲ್ನಲ್ಲಿ ದೋಸೆ ತಿನ್ನುವ ವೇಳೆ ಆಕಸ್ಮಿಕವಾಗಿ ಕಾಲ್ತುಳಿದ ಕಾರಣಕ್ಕೆ ಸಾಲವಸೂಲಾತಿ ಏಜೆಂಟ್ ಶಶಿಕುಮಾರ್ (31) ಹತ್ಯೆ ಮಾಡಿದ್ದ ಸೋದರರನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಂಜುನಾಥ ನಗರದ ಭಾಗ್ಯರಾಜ್ ಹಾಗೂ ಆತನ ಸೋದರ ಮಂಜುನಾಥ್ ಬಂಧಿತರಾಗಿದ್ದು, ಮೂರು ದಿನಗಳ ಹಿಂದೆ
ಬಸವೇಶ್ವರನಗರದ ಗುರು ರಾಘವೇಂದ್ರ ಹೋಟೆಲ್ ನಲ್ಲಿ ಶಶಿಕುಮಾರ್ ದೋಸೆ ತಿನ್ನುವ ಈ ಕೃತ್ಯ ನಡೆದಿತ್ತು. ಹತ್ಯೆ ಬಳಿಕ ತಲೆಮರೆಸಿಕೊಂಡಿದ್ದ ಸೋದರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಖಾಸಗಿ ಸಾಲ ವಸೂಲಿ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ ಶಶಿ, ತನ್ನ ಕುಟುಂಬದ ಜತೆ ಮಂಜುನಾಥ ನಗರದಲ್ಲಿ ನೆಲೆಸಿದ್ದರು. ಮನೆ ಸಮೀಪದ ಹೋಟೆಲ್ಗೆ ಸೋಮವಾರ ರಾತ್ರಿ ದೋಸೆ ತಿನ್ನಲು ಅವರು ಹೋಗಿದ್ದರು. ಅದೇ ವೇಳೆ ಮಂಜುನಾಥ ಸಹ ಹೋಟೆಲ್ಗೆ ಹೋಗಿದ್ದ. ಆಗ ದೋಸೆ ತಿನ್ನುವಾಗ ಆಕಸ್ಮಿಕವಾಗಿ ಮಂಜುನಾಥ್ ಕಾಲನ್ನು ಶಶಿ ತುಳಿದಿದ್ದಾನೆ. ಈ ವಿಚಾರಕ್ಕೆ ಜಗಳವಾಗಿ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಕೊನೆಗೆ ಈ ಜಗಳವು ಕೊಲೆಯಲ್ಲಿ ಅಂತ್ಯವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ