ಬೆಂಗಳೂರು: ಹೋಟೆಲ್‌ನ ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ, ಇನ್ಸ್‌ಕ್ಟರ್ ಸಸ್ಪೆಂಡ್

Published : Aug 28, 2022, 06:40 PM ISTUpdated : Aug 28, 2022, 08:54 PM IST
ಬೆಂಗಳೂರು: ಹೋಟೆಲ್‌ನ ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ, ಇನ್ಸ್‌ಕ್ಟರ್ ಸಸ್ಪೆಂಡ್

ಸಾರಾಂಶ

ಹೋಟೆಲ್ ಮಹಿಳಾ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತುಗೊಂಡಿದ್ದಾರೆ.

ಬೆಂಗಳೂರು, (ಆಗಸ್ಟ್.28): ಯುವತಿಯೊಬ್ಬಳ ಜತೆ ಅನುಚಿತವಾಗಿ ವರ್ತಸಿದ್ದ ಬೆಂಗಳೂರಿನ ಕೆ.ಪಿ. ಅಗ್ರಹಾರದ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ನನ್ನು ಅಮಾನತು ಮಾಡಲಾಗಿದೆ.

 ಪಾನಮತ್ತರಾಗಿ ಹೋಟೆಲ್‌ಗೆ ​ಹೋಗಿ ಮಹಿಳೆಯೊಮದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪದ ಮೇರೆಗೆ ಬೆಂಗಳೂರಿನ ಕೆ.ಪಿ. ಅಗ್ರಹಾರದ ಪೊಲೀಸ್ ಇನ್​ಸ್ಪೆಕ್ಟರ್​ ಗೋಪಾಲಕೃಷ್ಣ ಗೌಡ ಅವರನ್ನ ಅಮಾನತುಗೊಳಿಸಲಾಗಿದೆ

ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಅವರು ಗೋಪಾಲಕೃಷ್ಣ ಗೌಡ ಅವರನ್ನ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಅಪರಾಧ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಳೆದ 5 ದಿನದ ಹಿಂದೆ ಪಿಐ ಗೋಪಾಲಕೃಷ್ಣಗೌಡ ಜೀವನ್ ಭೀಮಾನಗರ ಠಾಣಾ ವ್ಯಾಪ್ತಿಯ ಹೋಟೆಲ್‌ವೊಂದಕ್ಕೆ ತೆರಳಿದ್ದರು. ಈ ವೇಳೆ ರೂಮ್ ನೀಡುವಂತೆ ಮಹಿಳಾ ಸಿಬ್ಬಂದಿ ಜೊತೆ ಪಿಐ ಗಲಾಟೆ ಮಾಡಿದ್ದಾರೆ. ಗಲಾಟೆ ಮಾಡಿದ್ದಲ್ಲದೇ ಅನುಚಿತವಾಗಿ ವರ್ತಿಸಿದ್ದಾರೆ. ಈ ಬಗ್ಗೆ ಹೋಟೆಲ್‌ನ ಮಹಿಳಾ ಸಿಬ್ಬಂದಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಜೀವನ್ ಭೀಮಾನಗರ ಠಾಣೆ ಪೊಲೀಸರು ಎನ್ಸಿಆರ್ ದಾಖಲಿಸಿದ್ದರು.

ಈ ಬಗ್ಗೆ ತನಿಖೆ ನಡೆಸಿದಾಗ ತಪ್ಪು ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಅವರು ಗೋಪಾಲಕೃಷ್ಣ ಗೌಡರನ್ನ ಸಸ್ಪೆಂಡ್ ಮಾಡಿದ್ದಾರೆ.

ಠಾಣೆಗೆ ಕುಡಿದು ಕೂಡ ಸ್ಟೇಷನ್ ಗೆ ಬರ್ತಿದ್ರು ಎಂಬ ಆರೋಪದ ಬಗ್ಗೆ ಮಾಹಿತಿ ಇದೆ.ಅಲ್ಲದೇ ಈ ಹಿಂದೆ ಪೋಕ್ಸೋ ಪ್ರಕರಣದಲ್ಲಿ ಸರಿಯಾದ ತನಿಖೆ ನಡೆಸದ ಹಿನ್ನಲೆ ಡಿಸಿಪಿ ಇನ್ಸ್ ಪೆಕ್ಟರ್ ಗೆ ಎಚ್ಚರಿಕೆ ಜತೆಗೆ ಬುದ್ದಿವಾದ ಕೂಡ ಹೇಳಲಾಗಿತ್ತು, ಆದರೂ ತಮ್ಮ ಚಾಳಿ ಮುಂದುವರಿಸಿದ್ದರು ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್