ಕೃತಿ ಕುಮಾರಿ ಮರ್ಡರ್: ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ರೂ ಸಹಾಯಕ್ಕೆ ಬಾರದ ಯುವತಿಯರು..!

Published : Jul 25, 2024, 11:43 PM ISTUpdated : Jul 26, 2024, 09:02 AM IST
ಕೃತಿ ಕುಮಾರಿ ಮರ್ಡರ್: ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ರೂ ಸಹಾಯಕ್ಕೆ ಬಾರದ ಯುವತಿಯರು..!

ಸಾರಾಂಶ

ಆರೋಪಿ ಅಭಿಷೇಕ್ ಕೃತಿ ಕುಮಾರಿಯನ್ನ ಎರಡೇ ನಿಮಿಷದಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಕತ್ತು, ಎದೆ ಹೊಟ್ಟೆ ಭಾಗ ಸೇರಿ ಹಲವು ಕಡೆ ಇರಿದಿದ್ದಾನೆ. ಪ್ರಾಣ ಉಳಿಸಿಕೊಳ್ಳಲು ಕೃತಿ ಕುಮಾರಿ ಒದ್ದಾಡಿದ್ದಾಳೆ. ರಕ್ತದ ಮಡುವಿನಲ್ಲಿದ್ದ ಕೃತಿ ಕುಮಾರಿ ಸಹಾಯಹಸ್ತ ಚಾಚಿದ್ರೂ ಪಿಜಿಯಲ್ಲಿದ್ದ ಮೂರು ಯುವತಿಯರು ಮಾತ್ರ ಹತ್ತಿರ ಬಂದಿಲ್ಲ.  ಪೀಜಿಯಲ್ಲಿದ್ದ ಯುವತಿಯರು ಮಾತ್ರ ಅಕ್ಷರಶಃ ಮಾನವೀಯತೆಯನ್ನೇ ಮರೆತಿದ್ದಾರೆ. 

ಬೆಂಗಳೂರು(ಜು.25): ಕೋರಮಂಗಲದ ಕೃತಿ ಕುಮಾರಿ ಲೈವ್ ಮರ್ಡರ್ ವಿಡಿಯೋ ವೈರಲ್ ಆಗಿದೆ. ಹೌದು, ಆರೋಪಿ ಅಭಿಷೇಕ್ ಕೃತಿ ಕುಮಾರಿಯನ್ನ ಕೊಲೆ ಮಾಡುವ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. 

ಘಟನೆ ಹಿನ್ನೆಲೆ: 

ಜು.23 ರಂದು ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಕೊಲೆ ನಡೆದಿತ್ತು. ರಾತ್ರಿ 11.13 ನಿಮಿಷಕ್ಕೆ ಆರೋಪಿ ಅಭಿಷೇಕ್ ಪಿಜಿಗೆ ಬಂದು ಕೃತಿ ಕುಮಾರಿ ಇದ್ದ ರೂಮ್ ಬಾಗಿಲು ಬಡಿದಿದ್ದಾನೆ. ಈ ವೇಳೆ ಡೋರ್ ಓಪನ್ ಮಾಡುತ್ತಿದ್ದಂತೆ ಚಾಕುವಿನಿಂದ ಇರಿಯಲು ಪ್ರಯತ್ನಿಸಿದ್ದಾನೆ. ಈ ವೇಳೆ ಕೃತಿ ಕುಮಾರಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ರೂ, ಬಿಡದೇ ಹಲವು ಬಾರಿ ಇರಿದು ಭೀಕರವಾಗಿ ಕೊಲೆ ಮಾಡಿದ್ದಾನೆ. 

ಬೆಂಗಳೂರು: ಕೋರಮಂಗಲ ಪಿಜಿಯಲ್ಲಿದ್ದ ಬಿಹಾರ ಯುವತಿ ಕೃತಿ ಕುಮಾರಿ ಕೊಲೆ ಕೇಸ್‌ಗೆ ಮೇಜರ್ ಟ್ವಿಸ್ಟ್!

ಸದ್ಯ ಕೋರಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಅಭಿಷೇಕ್ ಗಾಗಿ ಹುಡುಕಾಟ ಆರಂಭಿಸಿದ್ದಾರೆ. ಕೊಲೆ ಮಾಡಿದ ಬಳಿಕ ಆರೋಪಿ ಅಭಿಷೇಕ್ ಬಟ್ಟೆ ಬದಲಿಸಿಕೊಂಡು ಪರಾರಿಯಾಗಿದ್ದಾನೆ. ಅಭಿಷೇಕ್ ಭೂಪಾಲ್ ಗೆ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಕೋರಮಂಗಲ ಪೊಲೀಸರು ಭೂಪಾಲ್ ಗೆ ಆರೋಪಿಯನ್ನ ಅರೆಸ್ಟ್ ಮಾಡಲು ತೆರಳಿದ್ದಾರೆ. 

ಎರಡೇ ನಿಮಿಷದಲ್ಲಿ ಕೊಲೆ: 

ಆರೋಪಿ ಅಭಿಷೇಕ್ ಕೃತಿ ಕುಮಾರಿಯನ್ನ ಎರಡೇ ನಿಮಿಷದಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಕತ್ತು, ಎದೆ ಹೊಟ್ಟೆ ಭಾಗ ಸೇರಿ ಹಲವು ಕಡೆ ಇರಿದಿದ್ದಾನೆ. ಪ್ರಾಣ ಉಳಿಸಿಕೊಳ್ಳಲು ಕೃತಿ ಕುಮಾರಿ ಒದ್ದಾಡಿದ್ದಾಳೆ. ರಕ್ತದ ಮಡುವಿನಲ್ಲಿದ್ದ ಕೃತಿ ಕುಮಾರಿ ಸಹಾಯಹಸ್ತ ಚಾಚಿದ್ರೂ ಪಿಜಿಯಲ್ಲಿದ್ದ ಮೂರು ಯುವತಿಯರು ಮಾತ್ರ ಹತ್ತಿರ ಬಂದಿಲ್ಲ.  ಪೀಜಿಯಲ್ಲಿದ್ದ ಯುವತಿಯರು ಮಾತ್ರ ಅಕ್ಷರಶಃ ಮಾನವೀಯತೆಯನ್ನೇ ಮರೆತಿದ್ದಾರೆ. 

ರಕ್ತ ಸೋರುತ್ತಿದಾಗ ಕೈ ಚಾಚಿ ಕೃತಿ ಕುಮಾರಿ ಕಾಪಾಡಿ ಅಂತ ಕರೆಯುತ್ತಿದ್ರೂ ಯುವತಿಯರು ಮಾತ್ರ ಹತ್ತಿರ ಕೂಡ ಹೋಗಿಲ್ಲ.  ಕೈಯಲ್ಲಿ ಮೊಬೈಲ್ ಫೋನ್ ನೋಡ್ತಾ ಮೆಟ್ಟಿಲ ಮೇಲಿಂದ ಯುವತಿಯರು ಹೋಗಿದ್ದಾರೆ. ಕರುಣೆಯೇ ಇಲ್ಲದಂತೆ ಪಿಜಿ ಯುವತಿಯರು ವರ್ತಿಸಿದ್ದಾರೆ. ಗಾಬರಿಯಲ್ಲಿ ಏನು ಮಾಡದೇ ಕೃತಿ ಕುಮಾರಿ ಬಳಿಯು ಹೋಗದೇ ಯುವತಿಯರು ನೋಡ್ತಾ ನಿಂತಿದ್ದರು. ಈ ಎಲ್ಲಾ ದೃಶ್ಯಗಳು ಪಿಜಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ