
ಪೀಣ್ಯ ದಾಸರಹಳ್ಳಿ (ಮೇ.13) ಮಹಿಳೆಯೊಬ್ಬಳು ಬಾಡಿಗೆಗೆ ಕಾರು ಬೇಕೆಂದು ಹೇಳಿ, ಕಾರು ಸಹಿತ ಚಾಲಕನ ದುಬಾರಿ ಮೊಬೈಲ್ ಕಳವು ಮಾಡಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಯವಂಚಕಿ ಮಹಿಳೆಯಿಂದ ಕಾರು ಹಾಗೂ ದುಬಾರಿ ಮೊಬೈಲ್ ಕಳೆದುಕೊಂಡ ಕಾರು ಚಾಲಕ ಅನಂತಕುಮಾರ್ ನಾಗಸಂದ್ರದ ನಿವಾಸಿ. ಪ್ರಕರಣದಲ್ಲಿ ವಂಚಿಸಿರುವ ಮಹಿಳೆ ಮೇನಕಾ ಎಂಬ ಹೆಸರಿನಲ್ಲಿ ಪರಿಚಯವಾಗಿ, 15 ದಿನಗಳ ಹಿಂದೆ ಕಾರವಾರ ಟ್ರಿಪ್ನಲ್ಲಿ ಚಾಲಕನಿಗೆ ಭೇಟಿಯಾಗಿ ಸ್ನೇಹ ಬೆಳೆಸಿದ್ದಳು. ಬೆಂಗಳೂರು ಹಾಗೂ ಮೈಸೂರು ನೋಡಲು ಬಾಡಿಗೆಗೆ ಕಾರು ಬೇಕೆಂದು ಹೇಳಿ ಮೇನಕಾ, ಚಾಲಕ ಅನಂತಕುಮಾರ್ ನಂಬಿಕೆ ಗೆದ್ದು ಲಾಡ್ಜ್ನಲ್ಲಿ ರೂಮ್ ಬುಕ್ ಮಾಡಿಸಿಕೊಂಡಿದ್ದಳು.
ಇದನ್ನೂ ಓದಿ: ಚಿಕ್ಕಮಗಳೂರು: ಮತ್ತೆ ಹಸುವಿನ ಕೆಚ್ಚಲು ಕತ್ತರಿಸಿದ ಕ್ರೂರಿಗಳು!
ಭಾನುವಾರ 8ನೇ ಮೈಲಿ ಸಿಗ್ನಲ್ ಬಳಿ ಚಾಲಕರಿಗೆ ಕರೆ ಮಾಡಿದ ಮೇನಕಾ, ತಾತ್ಕಾಲಿಕವಾಗಿ ಪ್ರೆಶಫ್ ಆಗಲು ಹೇಳಿ ಹೆಸರಘಟ್ಟ ಮುಖ್ಯ ರಸ್ತೆಯ ಸಿಡೇದಳ್ಳಿ ಪಿ.ವಿ. ರೆಸಿಡೆನ್ಸಿಯಲ್ಲಿ ರೂಮ್ ಬುಕ್ ಮಾಡಿಸಿದ್ದಳು. ಬಳಿಕ ಚಾಲಕ ಬಾತ್ರೂಮಿಗೆ ಹೋಗುತ್ತಿದ್ದಂತೆ ಬಾಗಿಲು ಲಾಕ್ ಮಾಡಿ, ಬೇರೊಬ್ಬರನ್ನ ಕರೆಸಿ ( ಕೆಎ-04-ಎಬಿ-0257) ನಂಬರ್ನ ಹುಂಡೈ ಎಕ್ಸೆಂಟ್, ಚಾಲಕನ ಕಾರು ಹಾಗೂ ಮೊಬೈಲ್ ಜತೆಗೆ ಪರಾರಿಯಾಗಿದ್ದಾಳೆ. ಚಾಲಕ ಲಾಡ್ಜ್ ರೂಮ್ ಬಾಯ್ ಸಹಾಯದಿಂದ ಹೊರಬಂದು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಬಾಗಲಗುಂಟೆ ಪೊಲೀಸರು ವಂಚಕಿ ಮಹಿಳೆಯ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ