ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರನ್ನು ಆಂಧ್ರದಲ್ಲಿ ಕೊಲೆಗೈದ ರೆಡ್ಡಿ ಗ್ಯಾಂಗ್ ಅರೆಸ್ಟ್!

Published : Aug 06, 2025, 01:36 PM ISTUpdated : Aug 06, 2025, 01:38 PM IST
Bengaluru Double Murder

ಸಾರಾಂಶ

ರಿಯಲ್ ಎಸ್ಟೇಟ್ ಉದ್ಯಮಿ ವೀರಸ್ವಾಮಿ ರೆಡ್ಡಿ ಮತ್ತು ಅವರ ಪುತ್ರ ಪ್ರಶಾಂತ್ ರೆಡ್ಡಿ ಹತ್ಯೆ ಪ್ರಕರಣದಲ್ಲಿ 6 ಜನರ ಬಂಧನ. 14 ಕೋಟಿ ರೂ. ಆಸ್ತಿ ವಿವಾದವೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಮಾಜಿ ಉದ್ಯಮ ಪಾಲುದಾರನೇ ಹತ್ಯೆಗೆ ಸೂತ್ರಧಾರ.

ಬೆಂಗಳೂರು / ಮಹದೇವಪುರ (ಆ.06): ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ರಿಯಲ್ ಎಸ್ಟೇಟ್ ಉದ್ಯಮಿ ವೀರಸ್ವಾಮಿ ರೆಡ್ಡಿ (Bengaluru real estate Businessman Veeraswamy Reddy) ಮತ್ತು ಅವರ ಪುತ್ರ ಪ್ರಶಾಂತ್ ರೆಡ್ಡಿ ಅವರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿ ಸೇರಿ 6 ಮಂದಿಯ ಗ್ಯಾಂಗನ್ನು ನರ್ಸಮ್‌ಪೇಟೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬರೋಬ್ಬರಿ 14 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಿವಾದವೇ ಈ ಭೀಕರ ಕೃತ್ಯಕ್ಕೆ ಕಾರಣ ಎಂದು ತನಿಖೆಯಿಂದ ತಿಳಿದುಬಂದಿದೆ.

ಪ್ರಕರಣದ ಪ್ರಮುಖ ಆರೋಪಿ, ಕೊಲೆಯಾದ ವೀರಸ್ವಾಮಿ ರೆಡ್ಡಿ ಅವರ ಮಾಜಿ ಉದ್ಯಮ ಪಾಲುದಾರ (Business Partner) ಮಾಧವರೆಡ್ಡಿ, ಅನಿಲ್ ರೆಡ್ಡಿ, ನಾಗಿರೆಡ್ಡಿ, ಚಿನ್ನಾರೆಡ್ಡಿ ಅಲಿಯಾಸ್ ಇಂದ್ರಸೇನಾ ರೆಡ್ಡಿ, ಗೋಪಿ ರೆಡ್ಡಿ ಮತ್ತು ರಘುರಾಮ್ ರೆಡ್ಡಿ ಬಂಧಿತ ಆರೋಪಿಗಳಾಗಿದ್ದಾರೆ.

ಕೊಲೆಗೆ ಕಾರಣವಾದ ಹಣದ ವೈಷಮ್ಯ

ಮಾಧವರೆಡ್ಡಿ ಹಾಗೂ ವೀರಸ್ವಾಮಿ ರೆಡ್ಡಿ ಇಬ್ಬರೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಪಾಲುದಾರರಾಗಿದ್ದರು. ಆದರೆ 14 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಿಚಾರದಲ್ಲಿ ಇಬ್ಬರ ನಡುವೆ ತೀವ್ರ ವೈಷಮ್ಯ ಬೆಳೆದಿತ್ತು. ವೀರಸ್ವಾಮಿ ತನಗೆ ಹಣಕಾಸಿನ ವಿಚಾರದಲ್ಲಿ ವಂಚನೆ ಮಾಡಿದ್ದಾನೆ ಎಂಬುದು ಮಾಧವರೆಡ್ಡಿಯ ಪ್ರಬಲ ಆರೋಪವಾಗಿತ್ತು. ಇದೇ ದ್ವೇಷದ ಹಿನ್ನೆಲೆಯಲ್ಲಿ, ತನ್ನ ಮಾಜಿ ಪಾಲುದಾರನನ್ನೇ ಮುಗಿಸಲು ಮಾಧವರೆಡ್ಡಿ ವ್ಯವಸ್ಥಿತವಾಗಿ ಸಂಚು ರೂಪಿಸಿದ್ದನು. ಅದಕ್ಕೆ ತಕ್ಕಂತೆ ರೌಡಿಗಳ ಗ್ಯಾಂಗ್ ಕಟ್ಟಿಕೊಂಡು ಕೊಲೆ ಮಾಡುವುದಕ್ಕೆ ಎಲ್ಲವನ್ನೂ ಯೋಜನೆ ಮಾಡಿದ್ದನು.

ಪಕ್ಕಾ ಪ್ಲಾನ್ ಮಾಡಿ ನಡೆದ ಹತ್ಯೆ

ಮಾಧವರೆಡ್ಡಿ ಮತ್ತು ಆತನ ಗ್ಯಾಂಗ್, ತಂದೆ-ಮಗನನ್ನು ಹತ್ಯೆ ಮಾಡಲು ವ್ಯವಸ್ಥಿತ ಸಂಚು ರೂಪಿಸಿತ್ತು. ಮೊದಲಿಗೆ, ವೀರಸ್ವಾಮಿ ರೆಡ್ಡಿ ಮೇಲೆ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿ, ಅವರನ್ನು ನ್ಯಾಯಾಲಯದ ವಿಚಾರಣೆಗೆ ಬರುವಂತೆ ಮಾಡಿದ್ದರು. ನಂತರ, ಕೊಲೆಯಾದ ಪ್ರಶಾಂತ್ ರೆಡ್ಡಿ ಬಳಿ ರಾಜಿ ಸಂಧಾನ ಮಾಡಿಸುವುದಾಗಿ ನಂಬಿಸಿ, ತಂದೆ-ಮಗ ಇಬ್ಬರನ್ನೂ ನರ್ಸಮ್‌ಪೇಟೆ ಬಳಿಗೆ ಬರುವಂತೆ ಮಾಡಿದ್ದರು.

ಯೋಜನೆಯ ಪ್ರಕಾರ ಅಲ್ಲಿಗೆ ಬಂದ ವೀರಸ್ವಾಮಿ ರೆಡ್ಡಿ ಮತ್ತು ಪ್ರಶಾಂತ್ ರೆಡ್ಡಿ ಅವರನ್ನು ಅಪಹರಿಸಿ, ಮಾಧವರೆಡ್ಡಿ ಮತ್ತು ಆತನ ಸಹಚರರು ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಈ ವೇಳೆ, ಮಾಧವರೆಡ್ಡಿ ತನ್ನಲ್ಲಿದ್ದ ದ್ವೇಷ ತೀರಿಸಿಕೊಳ್ಳಲು ವೀರಸ್ವಾಮಿಯ ಮುಖವನ್ನು ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನರ್ಸಮ್‌ಪೇಟೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಕಿಂಗ್: ರಾತ್ರಿಯಾದ್ರೆ ಬೆಡ್‌ರೂಂ ಬಳಿ ಬರ್ತಾನೆ ಸೈಕೋ! ಅಪರಿಚಿತನ ಕಾಟಕ್ಕೆ ಬೇಸತ್ತ ವೈದ್ಯೆ!
ಮಾಟ ಮಂತ್ರ ಪರಿಹಾರದ ನಾಟಕ: ಮಲ್ಲೇಶ್ವರಂನಲ್ಲಿ ಚಿನ್ನಾಭರಣ ದೋಚಿದ ನಕಲಿ ಸ್ವಾಮಿಗಳು!