
ಬೆಂಗಳೂರು(ಏ.28): ತರಕಾರಿ ತರಲೆಂದು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸ್ಥಳೀಯರು ಥಳಿಸಿ, ಪೊಲೀಸರಿಗೆ ಒಪ್ಪಿರುವ ಘಟನೆ ಕಾಟನ್ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
20 ವರ್ಷದ ಸಂತ್ರಸ್ತ ವಿದ್ಯಾರ್ಥಿನಿ ಕೊಟ್ಟದೂರಿನ ಮೇರೆಗೆ ಕಾಟನ್ಪೇಟೆಯ ಸಿದ್ಧಾರ್ಥ ನಗರ ನಿವಾಸಿ ಮೊಹಮ್ಮದ್ ಫಯಾಜ್ (21) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಲೂಡೋ ಗೇಮ್ನಲ್ಲಿ ಸೋಲಿಸಿದ ಹೆಂಡತಿ ಬೆನ್ನುಮೂಳೆ ಮುರಿದ ಗಂಡ!
ಏ.25ರಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಯುವತಿ ಅಕ್ಕಿಪೇಟೆ ಮುಖ್ಯರಸ್ತೆಯಲ್ಲಿರುವ ಚಿಕ್ಕ ಮಾರ್ಕೆಟ್ನಲ್ಲಿ ತರಕಾರಿ ತರಲೆಂದು ಓಬಯ್ಯ ಲೇನ್ನ 1ನೇ ಕ್ರಾಸ್ನ ಕಿರಿದಾದ ರಸ್ತೆಯಲ್ಲಿ ಹೋಗುತ್ತಿದ್ದಳು. ರಸ್ತೆಯಲ್ಲಿ ಜನರಾರಯರು ಇರಲಿಲ್ಲ. ಈ ವೇಳೆ ಎದುರಿಗೆ ಬಂದ ಆರೋಪಿ ಯುವತಿಯ ಗುಪ್ತಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ಯುವತಿ ಕೂಡಲೇ ಪ್ರತಿರೋಧವೊಡ್ಡಿ ಚೀರಾಡಿದ್ದು, ಆರೋಪಿಯನ್ನು ಮುಖ್ಯರಸ್ತೆಗೆ ಎಳೆದುಕೊಂಡು ಬಂದಿದ್ದಾಳೆ. ಈ ವೇಳೆ ಆರೋಪಿಯು, ಯುವತಿಯ ಎಡಗೈ ಮುಷ್ಠಿಯನ್ನು ಕಚ್ಚಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಕೂಡಲೇ ಸ್ಥಳೀಯರು ಆರೋಪಿಯನ್ನು ಬೆನ್ನಟ್ಟಿಗೂಸಾ ನೀಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ.
ಮದುವೆಯಾಗುವುದಾಗಿ ನಂಬಿಸಿ ದ್ರೋಹ: ಪ್ರಿಯಕರನಿಂದಲೇ ಹತ್ಯೆ ಯತ್ನ!
ಆರೋಪಿ ಮೊಹಮ್ಮದ್ ಫಯಾಜ್ ಪ್ಲಂಬರ್ ಕೆಲಸ ಮಾಡುತ್ತಿದ್ದ. ಈತ ಕಾಟನ್ಪೇಟೆ ಠಾಣಾ ವ್ಯಾಪ್ತಿಯಲ್ಲಿ ಸರ ಕಳವು ಮಾಡಿ ಬಾಲಪರಾಧಿಯಾಗಿ ಜೈಲು ಸೇರಿದ್ದ. ಈತನ ಮೇಲೆ ಕೆಂಗೇರಿ ಸೇರಿದಂತೆ ಕೆಲ ಠಾಣೆಯಲ್ಲಿ ಅಪರಾಧ ಪ್ರಕರಣಗಳಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ