
ಬೆಂಗಳೂರು (ನ.25): ಅಕ್ರಮ ಸಂಬಂಧದ ಹಿನ್ನಲೆಯಲ್ಲಿ ಯುವಕನೊಬ್ಬನಿಗೆ ನಡುರಸ್ತೆಯಲ್ಲಿ ಮನಬಂದಂತೆ ಥಳಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ಘಟನೆ ನಡೆದಿದ್ದು, ಅಕ್ರಮ ಸಂಬಂಧದಲ್ಲಿ ಭಾಗಿಯಾಗಿದ್ದು ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಹಿನ್ನಲೆಯಲ್ಲಿ ಥಳಿಸಿ ಕೊಲೆ ಮಾಡಿದ್ದಾರೆ. ಕಳೆದ ಶನಿವಾರ ಈ ಘಟನೆ ನಡೆದಿದೆ.
32 ವರ್ಷದ ನರಸಿಂಹರಾಜು ಕೊಲೆಯಾದ ಯುವಕ ಎನ್ನಲಾಗಿದೆ. ನರಸಿಂಹರಾಜುಗೆ ಮದುವೆಯಾಗಿದ್ದ ಮಹಿಳೆಯ ಜೊತೆ ಅಕ್ರಮ ಸಂಬಂಧ ಇತ್ತ. ಆ ಮಹಿಳೆಯೂ ಆಗಾಗ ನರಸಿಂಹರಾಜು ಮನೆಗೆ ಬರುತ್ತಿದ್ದರು. ಶನಿವಾರ ಆ ಮಹಿಳೆ ನರಸಿಂಹರಾಜು ಮನೆ ಬಳಿ ಬಂದಿದ್ದರು. ಇದನ್ನು ತಿಳಿದ ಮಹಿಳೆ ಮನೆಯವರು ನರಸಿಂಹರಾಜು ಮನೆಗೆ ಬಂದಿದ್ದಾರೆ.
ಮನೆಯಲ್ಲಿದ್ದ ನರಸಿಂಹರಾಜುನನ್ನು ಮನೆಯಿಂದ ಹೊರಗಡೆ ಎಳೆದುಕೊಂಡು ಬಂದಿದ್ದು, ರಸ್ತೆಯಲ್ಲಿ ನಾಲ್ಕೈದು ಜನರಿಂದ ಮನಸೋ ಇಚ್ಚೆ ಹಲ್ಲೆ ಮಾಡಲಾಗಿದೆ. ರಸ್ತೆಯುದ್ದಕ್ಕೂ ಮನಬಂದಂತೆ ಮಹಿಳೆಯ ಮನೆಯವರು ಹಲ್ಲೆ ಮಾಡಿದ್ದಾರೆ. ಈ ವೇಳೆ ಬಿಡಿಸಲು ಬಂದ ನರಸಿಂಹರಾಜು ತಾಯಿಯ ಮೇಲೂ ಹಲ್ಲೆ ಮಾಡಲಾಗಿದೆ.
ಹಲ್ಲೆಯಿಂದಾಗಿ ನರಸಿಂಹರಾಜು ತೀವ್ರವಾಗಿ ಅಸ್ವಸ್ಥನಾಗಿದ್ದ. ಕೂಡಲೇ ನರಸಿಂಹರಾಜುನ ಕೆ.ಸಿ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆಗೆ ಸಾವನ್ನಪ್ಪಿರೋದಾಗಿ ವೈದ್ಯರು ತಿಳಿಸಿದ್ದರು. ತನ್ನ ಸಾವಿಗೆ ಮಹಿಳೆ ಹಾಗೂ ಕುಟುಂಬಸ್ಥರು ಕಾರಣ ಅಂತ ದೂರು ನೀಡಲಾಗಿದೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ದಾಖಲಾಗಿದ್ದರೂ ಆರೋಪಿಗಳನ್ನು ಬಂಧಿಸಿಲ್ಲ ಅಂತ ಕುಟುಂಬಸ್ಥರ ಆರೋಪ ಮಾಡಿದ್ದಾರೆ.
ಹಲ್ಲೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನರಸಿಂಹರಾಜುನ ಕಳೆಗೆ ಬೀಳಿಸಿ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಮನೆಯಿಂದ ಕರೆದೊಯ್ಯುವ ಹಾಗೂ ಹಲ್ಲೆ ಮಾಡೋ ಸಿಸಿಟಿವಿ ದೃಶ್ಯಗಳು ಲಭ್ಯವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ