
ಈ ಘಟನೆಯಿಂದಾಗಿ ಸ್ಥಳದಲ್ಲಿ ಭಕ್ತರು ಮತ್ತು ಅಪರಿಚಿತರ ನಡುವೆ ತೀವ್ರ ಮಾತಿನ ಚಕಮಕಿ ನಡೆದು ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಮಠದ ಆವರಣದಲ್ಲಿ ಪೂಜೆ ಸಿದ್ಧತೆ ನಡೆಯುತ್ತಿರುವಾಗಲೇ ಡೆಮಾಲಿಷನ್ ಮಾಡಲು ಬಂದ ಅಪರಿಚಿತರು, 'ಇದು ನಮ್ಮ ಆಸ್ತಿ, ನಾವಿದನ್ನು ಒಡೆಯುತ್ತೇವೆ ಎಂದು ಮುಂದಾಗಿದ್ದಾರೆ. ಈ ವೇಳೆ ಮಠದ ಭಕ್ತರು ವಿರೋಧಿಸಿ 'ಕೋರ್ಟ್ ಆದೇಶ ಇಲ್ಲದೆ ಒಡೆಯಲು ಸಾಧ್ಯವಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿ ಪಡೆದ ಹಲಸೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಮಧ್ಯಪ್ರವೇಶಿಸಿದರು. ಪರಿಶೀಲನೆಯಲ್ಲಿ ಮಠದ ಪ್ರಾಪರ್ಟಿ ವಿಚಾರದಲ್ಲಿ ಕೋರ್ಟ್ನಲ್ಲಿ ಕೇಸ್ ನಡೆಯುತ್ತಿರುವುದು ತಿಳಿದುಬಂದಿದೆ. ಕೋರ್ಟ್ ಆದೇಶ ತೋರಿಸಿ, ನಾವೇ ಪ್ರೊಟೆಕ್ಷನ್ ನೀಡುತ್ತೇವೆ ಎಂದು ಪೊಲೀಸರು ಅಪರಿಚಿತರಿಗೆ ಎಚ್ಚರಿಕೆ ನೀಡಿದರು. ಆದೇಶವಿಲ್ಲದಿದ್ದರಿಂದ ಅಪರಿಚಿತರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಸದ್ಯ ಮಠದ ಭಕ್ತರು ಅಪರಿಚಿತರ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾರೆ. ಈ ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕ ಮೂಡಿಸಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ