
ಮಂಡ್ಯ (ಮಾ.12): ಬಹುಕೋಟಿ ವೆಚ್ಚದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ಮೋದಿ ಭಾನುವಾರ ಮಂಡ್ಯದ ಗೆಜ್ಜಲಗೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಿದ್ದರು. ಆದರೆ ಲೋಕಾರ್ಪಣೆಗೊಂಡ ಕೆಲವೇ ಹೊತ್ತಿನಲ್ಲಿ ಎಕ್ಸ್ಪ್ರೆಸ್ವೇನಲ್ಲಿ ಕಾರು ಅಪಘಾತಕ್ಕೆ ಈಡಾಗಿದೆ. ಬೆಂಗಳೂರು ಮೈಸೂರು ಹೆದ್ದಾರಿಯ ಫ್ಲೈ ಓವರ್ ನಲ್ಲಿ ಕಾರು ಪಲ್ಟಿಯಾಗಿ ಆತಂಕ ಸೃಷ್ಟಿಸಿತ್ತು. ಮಂಡ್ಯ ಜಿಲ್ಲೆ ಮದ್ದೂರು ಬಳಿಕ ಫ್ಲೈಓವರ್ನಲ್ಲಿ ಕಾರು ಪಲ್ಟಿಯಾಯಿತು. ಬೆಂಗಳೂರಿನಿಂದ ಮೈಸೂರಿಗೆ ಕಾರು ಹೋಗುತ್ತಿದ್ದಾಗ ಫ್ಲೈಓವರ್ ಬಳಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರ ಪಲ್ಟಿಯಾಗಿತ್ತು. ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಎಕ್ಸ್ಪ್ರೆಸ್ ವೇನಲ್ಲಿ ಸುರಕ್ಷಥಾ ತಡೆಗೋಡೆಗಳನ್ನು ನಿರ್ಮಾಣ ಮಾಡಿದ್ದರಿಂದ ಅಪಘಾತ ಗಂಭೀರ ಪ್ರಮಾಣಕ್ಕೆ ತಿರುಗಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.
Photos: ಸಕ್ಕರೆ ನಾಡಿನಲ್ಲಿ ಮೋದಿ ಮೇಲೆ ಕೇಸರಿ ಹೂವಿನ ಮಳೆ, ರೋಡ್ಶೋನಲ್ಲಿ ವ್ಯಕ್ತವಾದ ಮಂಡ್ಯ ಪ್ರೀತಿ!
ಮೋದಿ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಹೆದ್ದಾರಿಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆ ಮೂಲಕ ಬೆಂಗಳೂರು-ಮೈಸೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಪುನರಾರಂಭ ಮಾಡಲಾಗಿತ್ತು. ಮೋದಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಡಳಿತ ಸಂಚಾರಕ್ಕೆ ನಿರ್ಬಂಧ ವಿಧಿಸಿತ್ತು. ಆದರೆ, ಲೋಕಾರ್ಪಣೆಯಾದ ಕೆಲವೇ ಹೊತ್ತಿನಲ್ಲಿ ಈ ಘಟನೆ ಸಂಭವಿಸಿದೆ.
PM Modi In Karnataka: ಮೈಸೂರಿನ ಒಡೆಯರು, ಸರ್ಎಂವಿ ಅವರನ್ನು ನೆನೆದ ಪ್ರಧಾನಿ ಮೋದಿ!
ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಚಾರಕ್ಕೆ ನಿರ್ಬಂಧಿಸಿ ಆದೇಶಿಸಲಾಗಿತ್ತು. ಆದರೆ, ಕಾರ್ಯಕ್ರಮ ಮುಗಿಸಿ ಮೋದಿ ಮಂಡ್ಯದಿಂದ ಹೊರಡುತ್ತಿದ್ದಂತೆ ನಿರ್ಬಂಧ ತೆರವು ಮಾಡಲಾಗಿತ್ತು. ಸಂಚಾರಕ್ಕೆ ಮುಕ್ತ ಅವಕಾಶ ನೀಡಿರುವ ಬಗ್ಗೆ ವಾರ್ತಾ ಇಲಾಖೆ ಮೂಲಕ ಮಾಹಿತಿ ನೀಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ