
ಬೆಂಗಳೂರು(ಜು.31): ಸಾರ್ವಜನಿಕ ಸ್ಥಳಗಳು ಹಾಗೂ ಮನೆ ಮುಂದೆ ನಿಲ್ಲಿಸುತ್ತಿದ್ದ ಬೈಕ್ಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಖದೀಮನೊಬ್ಬ ಸಿಸಿಬಿ ಬಲೆಗೆ ಬಿದ್ದಿದ್ದಾನೆ.
ಶಿವಾಜಿನಗರದ ಸಯ್ಯದ್ ತಬ್ರೇಜ್ ಪಾಷಾ ಅಲಿಯಾಸ್ ಸಿತಾರಾ ಬಂಧಿತನಾಗಿದ್ದು, ಆರೋಪಿಯಿಂದ 7 ಬೈಕ್ ಜಪ್ತಿ ಮಾಡಲಾಗಿದೆ. ತಪ್ಪಿಸಿಕೊಂಡಿರುವ ಮತ್ತಿಬ್ಬರು ಆರೋಪಿಗಳಾದ ವೀಲರ್ ಷರೀಫ್ ಮತ್ತು ಕುಲ್ಮಿ ಮೌಲಾ ಪತ್ತೆಗೆ ತನಿಖೆ ನಡೆದಿದೆ. ಕೆಲ ದಿನಗಳ ಹಿಂದೆ ನಗರದಲ್ಲಿ ವಿವಿಧೆಡೆ ಬೈಕ್ ಕಳ್ಳತನಗಳಾಗಿದ್ದವು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನು ಸೆರೆ ಹಿಡಿದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ನಾಯಿ ಮರಿ ಮಾರಾಟದ ನೆಪದಲ್ಲಿ ವಂಚನೆ: ವ್ಯಕ್ತಿಗೆ ಟೋಪಿ ಹಾಕಿದ ಕಳ್ಳರು..!
ದಶಕದಿಂದ ತಬ್ರೇಜ್ ವೃತ್ತಿಪರ ಬೈಕ್ ಕಳ್ಳನಾಗಿದ್ದು, ಪಾರ್ಕಿಂಗ್ ಸ್ಥಳ, ಮನೆ ಹಾಗೂ ಕಚೇರಿಗಳ ಮುಂದೆ ನಿಲ್ಲಿಸುತ್ತಿದ್ದ ಬೈಕ್ಗಳ ಲಾಕ್ ಬ್ರೇಕ್ ಮಾಡಿ ಕಳವು ಮಾಡುತ್ತಿದ್ದ. ಬಳಿಕ ಈ ಕಳವು ಬೈಕ್ಗಳ ನೋಂದಣಿ ಸಂಖ್ಯೆ, ಎಂಜಿನ್ ಮತ್ತು ಚಾಸಿ ನಂಬರ್ ಬದಲಾಯಿಸಿ, ನಕಲಿ ಆರ್ಸಿ ಬುಕ್ ಸಿದ್ಧಪಡಿಸಿ .5-10 ಸಾವಿರಗಳಿಗೆ ಜನರಿಗೆ ಮಾರಾಟ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ