12 ವರ್ಷಗಳ ಹಿಂದೆ ಯುವಕನಿಗೆ ಲೈಂಗಿಕ ಕಿರುಕುಳ; ಮಲಯಾಳಂ ನಿರ್ದೇಶಕ ರಂಜಿತ್ ವಿರುದ್ಧ ಬೆಂಗಳೂರಲ್ಲಿ ಎಫ್‌ಐಆರ್

Published : Oct 29, 2024, 07:07 AM ISTUpdated : Oct 29, 2024, 07:09 AM IST
12 ವರ್ಷಗಳ ಹಿಂದೆ ಯುವಕನಿಗೆ ಲೈಂಗಿಕ ಕಿರುಕುಳ; ಮಲಯಾಳಂ ನಿರ್ದೇಶಕ ರಂಜಿತ್ ವಿರುದ್ಧ ಬೆಂಗಳೂರಲ್ಲಿ ಎಫ್‌ಐಆರ್

ಸಾರಾಂಶ

ಬರೋಬ್ಬರಿ ಹನ್ನೆರಡು ವರ್ಷಗಳ ಹಿಂದೆ ಮಲಯಾಳಂ ಚಿತ್ರರಂಗದ ನಟನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಮಲಯಾಳಂ ಚಿತ್ರರಂಗ ನಿರ್ದೇಶಕರೊಬ್ಬರ ವಿರುದ್ಧ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಬಿಐಎಎಲ್‌) ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

Malayalam director Ranjith case : ಬರೋಬ್ಬರಿ ಹನ್ನೆರಡು ವರ್ಷಗಳ ಹಿಂದೆ ಮಲಯಾಳಂ ಚಿತ್ರರಂಗದ ನಟನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಮಲಯಾಳಂ ಚಿತ್ರರಂಗ ನಿರ್ದೇಶಕರೊಬ್ಬರ ವಿರುದ್ಧ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಬಿಐಎಎಲ್‌) ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕೇರಳ ಮೂಲದ 31 ವರ್ಷದ ಸಂತ್ರಸ್ತ ನೀಡಿದ ದೂರಿನ ಮೇರೆಗೆ ಕೇರಳ ಕಾಝೀಕೋಡ್‌ ಮೂಲದ ನಿರ್ದೇಶಕ ರಂಜಿತ್‌ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಅನೈಸರ್ಗಿಕ ದೈಹಿಕ ಸಂಭೋಗ ಆರೋಪದಡಿ ಎಫ್‌ಐಆರ್‌ ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು: ಸೈಟ್ ತೋರಿಸುವುದಾಗಿ ಹೇಳಿ ಮಹಿಳೆಗೆ ಲೈಂಗಿಕ ಕಿರುಕುಳ

ಏನಿದು ದೂರು?: ಸಂತ್ರಸ್ತ 2012ರಲ್ಲಿ ಮಲಯಾಳಂ ಚಿತ್ರರಂಗದ ಖ್ಯಾತನಟ ಮಮ್ಮೂಟಿ ಅವರ ಶೂಟಿಂಗ್‌ ನೋಡಲು ಕೇರಳದ ಈಸ್ಟ್‌ ಹಿಲ್‌ ಸ್ಥಳಕ್ಕೆ ತೆರಳಿದ್ದಾಗ, ನಿರ್ದೇಶಕ ರಂಜಿತ್‌ ಅವರ ಪರಿಚಯವಾಗಿದೆ. ಈ ವೇಳೆ ರಂಜಿತ್‌, ಸಂತ್ರಸ್ತನ ಮೊಬೈಲ್‌ ಸಂಖ್ಯೆ ಪಡೆದುಕೊಂಡಿದ್ದಾರೆ. 2012ರ ಡಿಸೆಂಬರ್‌ನಲ್ಲಿ ಸಂತ್ರನಿಗೆ ಕರೆ ಮಾಡಿರುವ ರಂಜಿತ್‌, ತಾನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ಐಷಾರಾಮಿ ಹೋಟೆಲ್‌ವೊಂದರಲ್ಲಿ ಇರುವುದಾಗಿ ಹೇಳಿ, ರೂಮ್‌ಗೆ ಬರುವಂತೆ ಆಹ್ವಾನಿಸಿದ್ದಾರೆ. ಅದರಂತೆ ಸಂತ್ರಸ್ತ ರೂಮ್‌ಗೆ ಬಂದಾಗ, ಕುಡಿಯಲು ಮದ್ಯ ನೀಡಿರುವ ರಂಜಿತ್‌, ಬಳಿಕ ಬಟ್ಟೆ ಬಿಚ್ಚುವಂತೆ ಸಂತ್ರಸ್ತನಿಗೆ ಹೇಳಿದ್ದಾರೆ.

ನಟಿಗೆ ಬಾಲಕನ ಬೆತ್ತಲೆ ಫೋಟೋ ರವಾನೆ: ಬಳಿಕ ಸಂತ್ರಸ್ತನನ್ನು ವಿವಸ್ತ್ರಗೊಳಿಸಿ ದೇಹದ ಅಂಗಾಂಗ ವರ್ಣಿಸಿರುವ ರಂಜಿತ್‌, ಸಂತ್ರಸ್ತನ ಖಾಸಗಿ ಭಾಗಗಳಿಗೆ ಮುತ್ತಿಟ್ಟಿದ್ದಾರೆ. ನಂತರ ಮತ್ತಷ್ಟು ಮದ್ಯ ಕುಡಿಸಿ ಬಲವಂತವಾಗಿ ಸಂಭೋಗಕ್ಕೆ ಒತ್ತಾಯಿಸಿದ್ದಾರೆ. ಸಂತ್ರಸ್ತನ ನಗ್ನ ಫೋಟೋಗಳನ್ನು ಕ್ಲಿಕ್ಕಿಸಿ ಮಲಯಾಳಂ ನಟಿಯೊಬ್ಬರಿಗೆ ಕಳುಹಿಸಿದ್ದಾರೆ. ಆ ದಿನ ಇಡೀ ರಾತ್ರಿ ಸಂತ್ರಸ್ತನನ್ನು ದೈಹಿಕವಾಗಿ ಬಳಸಿಕೊಂಡು ಶೋಷಣೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

10 ವರ್ಷದಿಂದ ಬೆಂಗಳೂರಲ್ಲಿ ನೆಲೆಸಿದ್ದ ಬಾಂಗ್ಲಾ ಗುಜರಿ ವ್ಯಾಪಾರಿ ಬಂಧನ

ಕೇರಳದಿಂದ ಪ್ರಕರಣ ವರ್ಗಾವಣೆ: ಈ ಸಂಬಂಧ ಸಂತ್ರಸ್ತ ಕೇರಳ ಕಸಬಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಆದರೆ, ಕೃತ್ಯ ನಡೆದ ಸ್ಥಳದ ಆಧಾರದ ಮೇಲೆ ಕೇರಳ ಪೊಲೀಸರು ಈ ಪ್ರಕರಣವನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್‌ ಠಾಣೆಗೆ ವರ್ಗಾಯಿಸಿದ್ದಾರೆ. ಅದರಂತೆ ಆರೋಪಿ ನಿರ್ದೇಶಕ ರಂಜಿತ್‌ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಆಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!