ಅಮೃತಧಾರೆ ನಟಿ ಛಾಯಾಸಿಂಗ್‌ಗೆ 66 ಗ್ರಾಂ ಗೋಲ್ಡ್, 159 ಗ್ರಾಂ ಬೆಳ್ಳಿ ಕೊಟ್ಟ ಬೆಂಗಳೂರು ಪೊಲೀಸ್ ಕಮಿಷನರ್

Published : May 14, 2024, 01:28 PM IST
ಅಮೃತಧಾರೆ ನಟಿ ಛಾಯಾಸಿಂಗ್‌ಗೆ 66 ಗ್ರಾಂ ಗೋಲ್ಡ್, 159 ಗ್ರಾಂ ಬೆಳ್ಳಿ ಕೊಟ್ಟ ಬೆಂಗಳೂರು ಪೊಲೀಸ್ ಕಮಿಷನರ್

ಸಾರಾಂಶ

ಸ್ಯಾಂಡಲ್‌ವುಡ್ ನಟಿ ಛಾಯಾಸಿಂಗ್ ಅವರಿಗೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು 66 ಗ್ರಾಂ ಚಿನ್ನ ಹಾಗೂ 150 ಗ್ರಾಂ ಬೆಳ್ಳಿ ಆಭರಣಗಳನ್ನು ಹಸ್ತಾಂತರ ಮಾಡಿದ್ದಾರೆ.

ಬೆಂಗಳೂರು (ಮೇ 14): ಸ್ಯಾಂಡಲ್‌ವುಡ್ ನಟಿ ಛಾಯಾಸಿಂಗ್ ಅವರ ತಾಯಿಯ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆಯೇ ಮನೆಯಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ಮಾಡಿದ್ದರು. ಈ ಪ್ರಕರಣ ಗಂಭೀರವಾಗಿ ಪರಿಗಣಿಸಿಡ ಬೆಂಗಳೂರು ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿ ಅವರಿಂದ ಚಿನ್ನಾಭರಣಗಳನ್ನು ವಾಪಸ್ ಕೊಡಿಸಿದ್ದಾರೆ.

ಕನ್ನಡ ಸಿನಿಮಾಗಳಲ್ಲಿ ಒಂದು ಅವಧಿಯಲ್ಲಿ ಬೇಡಿಕೆ ನಟಿಯಾಗಿದ್ದ ಛಾಯಾ ಸಿಂಗ್ ಇತ್ತೀಚೆಗೆ ಕಿರುತೆರೆಗೆ ಕಾಲಿಟ್ಟಿದ್ದು, ಅಮೃತಧಾರೆ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಆದರೆ, ಅವರ ತಂದೆ ತಾಯಿ ಎಲ್ಲರೂ ಬೆಂಗಳೂರಿನಲ್ಲಿಯೇ ವಾಸವಾಗಿದ್ದಾರೆ. ಆದರೆ, ಕಳೆದ ಕೆಲವು ದಿನಗಳ ಹಿಂದೆ ನಟಿ ಛಾಯಾ ಸಿಂಗ್ ತಾಯಿ ತಾಯಿ‌ ಚಮನಲತಾ ಮನೆಯಲ್ಲಿ ಕಳ್ಳತನವಾಗಿತ್ತು. ಆದರೆ, ಯಾರು ಕಳ್ಳತನ ಮಾಡಿದ್ದರು ಎಂಬ ಸುಳಿವಿರಲಿಲ್ಲ. ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದಾಗ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ. ಪೊಲೀಸರು ಪ್ರತಿಬಾರಿ ಮನೆಗೆ ಬಂದಾಗಲೂ ಮನೆ ಕೆಲಸದಾಕೆಯ ನಡೆ ಮಾತ್ರ ಅನುಮಾನ ಹುಟ್ಟಿಸುವಂತಿತ್ತು.

ನಾರ್ಮಲ್ ಡೆಲಿವರಿಗಾಗಿ ಇಪ್ಪತ್ತೊಂದು ಗಂಟೆ ಹೆರಿಗೆ ನೋವು ತಿಂದ ನಟಿ

ಇನ್ನು ಮನೆಯಲ್ಲಿ ಕಳ್ಳತನ ಆಗಿದ್ದು, ಮನೆಯವರೆಲ್ಲರೂ ಆಭರಣಗಳನ್ನು ಹುಡುತ್ತಿದ್ದರೆ ಅದನ್ನು ಕದ್ದ ಕಳ್ಳಿ ಮಾತ್ರ ತನಗೆ ಏನೂ ಗೊತ್ತಿಲ್ಲವೆಂಬಂತೆ ನಾಟಕ ಮಾಡುತ್ತಿದ್ದಳು. ಇದನ್ನು ಸೂಕ್ಷ್ಮವಾಗಿ ಗಮನಿಸಿದ ಪೊಲೀಸರು ಮನೆ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ತಾನೇ ಆಭರಣಗಳನ್ನು ಮಾತ್ರ ಕಳ್ಳತನ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ. ಜೊತೆಗೆ, 66 ಗ್ರಾಂ ಗೋಲ್ಡ್ ಸೇರಿ 150 ಗ್ರಾಂ ಬೆಳ್ಳಿ ಆಭರಣ ಆಭರಣಗಳನ್ನು ಯಾರಿಗೂ ಮಾರಾಟ ಮಾಡದೇ ತನ್ನ ಬಳಿಯೇ ಇಟ್ಟುಕೊಂಡಿರುವುದಾಗಿ ಬಾಯಿ ಬಿಟ್ಟಿದ್ದಾಳೆ.

ಗುಲಾಬಿ ನೀಡಲು ಅಲ್ಲಿ ಗೌತಮ್​ ಪ್ರಾಕ್ಟೀಸ್​ ಮಾಡ್ತಿದ್ರೆ ಇಲ್ಲಿ ಇವರೊಟ್ಟಿಗೆ ರೊಮ್ಯಾನ್ಸ್​ ಮಾಡೋದಾ? ನಟಿಯ ಕಾಲೆಳೆದ ಫ್ಯಾನ್ಸ್​

ಮನೆಯಲ್ಲಿ ಕಳ್ಳತನ ನಡೆದ ಬಗ್ಗೆ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮನೆ ಕೆಲಸದಾಕೆ ಉಷಾ ಎನ್ನುವ ಮಹಿಳೆಯೇ ಕಳ್ಳತನ ಮಾಡರುವುದು ತಿಳಿದ ನಂತರ ಆಭರಣವನ್ನು ವಶಕ್ಕೆ ಒಪ್ಪಿಸುವಂತೆ ಸೂಚಿಸಲಾಗಿ. ನಂತರ, ಛಾಯಾಸಿಂಗ್ ತಾಯಿ ಚಮನಲತಾ ಮನೆಯಿಂದ ಕದ್ದಿದ್ದ ಎಲ್ಲ ಆಭರಣಗಳನ್ನು ಕಳ್ಳಿ ಉಷಾ ಪೊಲೀಸರಿಗೆ ಒಪ್ಪಿಸಿದ್ದಾಳೆ. ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಜೊತೆಗೆ, ಕಳ್ಳಿ ಉಷಾಳ ಬಳಿಯಿದ್ದ ಎಲ್ಲ ಆಭರಣಗಳನ್ನು ವಶಕದ್ಕೆ ಪಡೆದ ಪೊಲೀಸಟು ನಟಿ ಛಾಯಾಸಿಂಗ್ ಅವರಿಗೆ ಒಪ್ಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!