
ಬೆಂಗಳೂರು (ಮಾ.29): ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ ಆರೋಪಿಗಳಾದ ಅಬ್ದುಲ್ ಮತೀನ್ ಅಹಮದ್ ತಾಹ ಹಾಗೂ ಆತನ ಸಹಚರ ಮುಸಾವಿರ್ ಹುಸ್ಸೇನ್ ಅವರ ಫೋಟೋವನ್ನು ಎನ್ಐಎ ಬಿಡುಗಡೆ ಮಾಡಿದೆ. ಆರೋಪಿಗಳ ಸುಳಿವು ನೀಡುವವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾರ್ಚ್ 1 ರಂದು ನಡೆದಿದ್ದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಹುಡುಕಾಟ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಆರೋಪಿಗಳ ಫೋಟೋವನ್ನು ಹಂಚಿಕೊಂಡಿದೆ. ಅಬ್ದುಲ್ ಮತೀನ್ ಅಹಮದ್ ತಾಹ ಹಾಗೂ ಆತನ ಸಹಚರ ಮುಸಾವಿರ್ ಹುಸ್ಸೇನ್ ಎಂಬ ಆರೋಪಿಗಳ ಫೋಟೋವನ್ನು ಹಂಚಿಕೊಂಡಿದ್ದು, ಈ ಆರೋಪಿಗಳ ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್ಐಎ ಘೋಷಣೆ ಮಾಡಿದೆ.
ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಬಾಂಬ್ ತಯಾರಿಸಿದ್ದ ಮುಜಾಮಿಲ್ ಶರೀಫ್ 7 ದಿನ ಎನ್ಐಎ ವಶಕ್ಕೆ
ಶಂಕಿತರ ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರದ ಆರೋಪಿಗಳ ಪೋಟೋ ಬಿಡುಗಡೆ ಮಾಡಿದ್ದು, ಇಬ್ಬರೂ ಶಂಕಿತರ ಬಗ್ಗೆ ಸುಳಿವು ಕೊಟ್ಟವರಿಗೆ ತಲಾ 10 ಲಕ್ಷ ರೂ. ಘೋಷಣೆ ಮಾಡಲಾಗಿದೆ. ಅಬ್ದುಲ್ ಮತೀನ್ ಅಹಮದ್ ತಾಹಾ ಹಾಗೂ ಮುಸಾವಿರ್ ಹುಸ್ಸೇನ್ ಶಾಜಿಬ್ ಇಬ್ಬರ ಪೋಟೋ ಬಿಡುಗಡೆ ಮಾಡಲಾಗಿದೆ. ಇಬ್ಬರು ಶಂಕಿತರ ತಲಾ 3 ಮಾದರಿಯ ಪೋಟೋ ಬಿಡುಗಡೆ ಮಾಡಿದೆ. ಶಂಕಿತರು ಹೇಗೆ ಇರಬಹುದು ಎಂಬುದರ ಮಾಹಿತಿಯನ್ನು ಎನ್ಐಎ ನೀಡಿದೆ.
ಬಾಂಬ್ ಹಾಕಿದವನು ಹಿಂದೂ ಹೆಸರಿಟ್ಟುಕೊಂಡು ಓಡಾಟ:
ಎನ್ ಐ ಎ ಬಿಡುಗಡೆ ಮಾಡಿದ ವಾಂಟೆಡ್ ಲಿಸ್ಟ್ ನಲ್ಲಿ ಸ್ಪೋಟಕ ವಿಚಾರ ಬಯಲಿಗೆ ಬಂದಿದೆ. ಅಬ್ದುಲ್ ಮತೀನ್ ಅಹಮದ್ ತಾಹಾ ಹಿಂದೂ ಯುವಕನ ರೀತಿಯಲ್ಲಿರೋದು ಪತ್ತೆಯಾಗಿದೆ. ಬಾಂಬ್ ಬ್ಲಾಸ್ಟ್ ಮಾಡಿದ ಆರೋಪಿ ಅಬ್ದುಲ್ ಮತೀನ್ ತಾಹ ತಾನು ಹಿಂದೂ ಹೆಸರು ಹೇಳಿಕೊಂಡು ದೇಶದ ವಿವಿಧ ನಗರಗಳಲ್ಲಿ ಸಂಚಾರ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ. ಈತ ತಲೆ ಮರೆಸಿಕೊಳ್ಳಲು ವಿಘ್ನೇಶ್ ಹಾಗೂ ಸುಮಿತ ಎಂಬ ಹೆಸರನ್ನು ಇಟ್ಟುಕೊಂಡು ಓಡಾಡುತ್ತಿದ್ದಾನೆ. ಜೊತೆಗೆ, ವಿಘ್ನೇಶ್ ಎಂಬ ಹೆಸರಿನಲ್ಲಿ ಆಧಾರ್ ಕಾರ್ಡ್ ಕೂಡ ಮಾಡಿಸಿಕೊಂಡಿದ್ದಾನೆ.
Crime Review: ಹೆಣ್ಮಕ್ಕಳಿಗೆ ಕರ್ನಾಟಕ ಸೇಫಾ? ಪ್ರತಿ ಎರಡು ದಿನಕ್ಕೆ ರಾಜ್ಯದಲ್ಲಿ ಮೂರು ರೇಪ್!
ಬೇರೊಬ್ಬರ ಹೆಸರಲ್ಲಿ ಡ್ರೈವಿಂಗ್ ಲೈಸೆನ್ಸ್: ಇನ್ನು ಬಾಂಬ್ ಹಾಕಿದ ಆರೋಪಿ ಅಬ್ದುಲ್ ಮತೀನ್ ತಾಹನ ಸಹಚರ ಮುಸಾವೀರ್ ಹುಸ್ಸೇನ್ ಶಾಜಿಬ್ ಕೂಡ ತಲೆ ಮರೆಸಿಕೊಂಡಿದ್ದಾರೆ. ಈತನು ಕೂಡ ಹೇಗಿರಬಹುದು ಎಂಬ 3 ಮಾದರಿಯ ಫೋಟೋ ಹಂಚಿಕೊಳ್ಳಲಾಗಿದೆ. ಇನ್ನು ಮುಸಾವೀರ್ ಹುಸ್ಸೇನ್ ಶಾಜಿಬ್ ಕೂಡ ತನ್ನ ಹೆಸರನ್ನು ಬದಲಿಸಿಕೊಂಡು ದೇಶದ ವಿವಿಧ ನಗರಗಳಲ್ಲಿ ವಾಸಿಸುತ್ತಿದ್ದಾನೆ. ಈತ ಮಹಮ್ಮದ್ ಜುನೇದ್ ಸೈಯದ್ ಎಂಬ ಹೆಸರಿನಲ್ಲಿ ನಕಲಿ ಡ್ರೈವಿಂಗ್ ಲೈಸೆನ್ಸ್ ಹೊಂದಿದ್ದಾನೆ. ಶಂಕಿತರಿಬ್ಬರು ತಮ್ಮ ಐಡೆಂಟಿಟಿ ಮರೆಮಾಚಲು ವಿಗ್ ಹಾಗೂ ನಕಲಿ ಗಡ್ಡ ಮೀಸೆ ಗಳನ್ನ ಬಳಸುತ್ತಿದ್ದಾರೆ ಎಂದು ಎನ್ಐಎ ಮಾಹಿತಿ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ