ಆನೇಕಲ್: ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ರೋಡ್ ರೇಜ್; ಸೈಡ್ ಕೊಡದ್ದಕ್ಕೆ ನಡುರಸ್ತೆಯಲ್ಲೇ ಚಾಲಕನ ಮೇಲೆ ಹಲ್ಲೆ

Published : Nov 14, 2025, 05:58 PM IST
Bengaluru road rage incident

ಸಾರಾಂಶ

Bengaluru road rage incident: ಬೆಂಗಳೂರಿನ ಬೊಮ್ಮಸಂದ್ರದ ಬಳಿ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬೈಕ್ ಸವಾರನೊಬ್ಬ ಬೊಲೆರೋ ಪಿಕಪ್ ಚಾಲಕನ ಮೇಲೆ ನಡುರಸ್ತೆಯಲ್ಲೇ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಈ ಘಟನೆಯ ದೃಶ್ಯಗಳು ವೈರಲ್ ಆಗಿವೆ.

ಬೆಂಗಳೂರು, (ನ.14): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೋಡ್ ರೇಂಜ್ ಪ್ರಕರಣಗಳು ದಿನೇದಿನೆ ಹೆಚ್ಚುತ್ತಲೇ ಇವೆ. ಇತ್ತೀಚೆಗೆ ಹಾರ್ನ್ ಮಾಡಿದ್ದಕ್ಕೆ ಟೆಕ್ಕಿಯೊಬ್ಬ ವಾಹನ ಸವಾರರಿಗೆ ಉದ್ದೇಶಪೂರ್ವಕ ಕಾರು ಡಿಕ್ಕಿ ಹೊಡೆದು ಅಮಾಯಕರ ಜೀವ ಬಲಿ ಪಡೆದಿದ್ದ ಘಟನೆ ಬೆನ್ನಲ್ಲೇ ಇದೀಗ ಆನೇಕಲ್‌ನ ಬೊಮ್ಮಸಂದ್ರ ಮೆಟ್ರೊ ಸ್ಟೇಷನ್ ಸಮೀಪದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ.

ಬೊಲೆರೋ ಪಿಕಪ್ ವಾಹನ ಚಾಲಕನ ಮೇಲೆ ಹಲ್ಲೆ:

ಬೈಕ್‌ಗೆ ಸೈಡ್ ಕೊಡಲಿಲ್ಲವೆನ್ನುವ ಕಾರಣಕ್ಕೆ ನಡುರಸ್ತೆಯಲ್ಲಿ ಬೊಲೆರೋ ಪಿಕಪ್ ವಾಹನ ಚಾಲಕನ ಮೇಲೆ ಬೈಕ್ ಸವಾರ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಈ ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಘಟನೆಯ ವಿವರಗಳ ಪ್ರಕಾರ, ಬೊಮ್ಮಸಂದ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೊಲೆರೋ ಪಿಕಪ್ ವಾಹನವೊಂದು ಸಾಮಾನ್ಯ ಸ್ಪೀಡ್‌ನಲ್ಲಿ ಸಾಗುತ್ತಿತ್ತು. ಈ ವೇಳೆಯೇ ಹಿಂದಿನಿಂದ ಬಂದ ಬೈಕ್ ಸವಾರನಿಗೆ ಸೈಡ್ ಕೊಡಲಿಲ್ಲ ಎಂಬ ಕಾರಣವೇ ಮಾತಿಗೆ ಮಾತು ಬೆಳೆದು ವಾಹನ ಸವಾರ ಕೋಪಗೊಂಡಿದ್ದಾನೆ. ನಡುರಸ್ತೆಯಲ್ಲೇ ಬೊಲೆರೋ ವಾಹನವನ್ನು ಅಡ್ಡಗಟ್ಟಿ ನಿಲ್ಲಿಸಿ ಕಿರಿಕ್ ಮಾಡಿದ್ದಾನೆ. ಪಿಕಪ್ ವಾಹನದ ಡೋರ್ ತೆಗೆದುಹಾಕಿ ಚಾಲಕನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾನೆ.

ಕಾನೂನು ಕ್ರಮ ಯಾವಾಗ?

ನಗರದಲ್ಲಿ ದಿನೇದಿನೆ ರೋಡ್ ರೇಜ್‌ಗಳ ಹೆಚ್ಚಳಕ್ಕೆ ಆತಂಕ ಸೃಷ್ಟಿಸಿದೆ. ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ಮುಂದಾಗುವ ಘಟನೆಗಳು ಸಾಮಾನ್ಯ ಎಂಬಂತಾಗಿವೆ. ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿ, ಗೂಂಡಾವರ್ತನೆ ತೋರಿದ ಬೈಕ್ ಸವಾರನ ಮೇಲೆ ಕಾನೂನು ಕ್ರಮ ಜರುಗಿಸುವ ಮೂಲಕ ಇಂಥ ಘಟನೆಗಳು ಮರುಕಳಿಸದಂತೆ ಕಡಿವಾಣ ಹಾಕಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮ೧ಹತ್ಯೆ; ನೇರಳೆ ಮಾರ್ಗದಲ್ಲಿ ರೈಲು ಸಂಚಾರಕ್ಕೆ ವ್ಯತ್ಯಯ!
ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್, ದರ್ಶನ್‌ಗೆ ಜೈಲಲ್ಲೊಂದು ಶಾಕ್, ಕೋರ್ಟ್‌ನಲ್ಲೊಂದು ಆಘಾತ!