Bengaluru horror: ಬೇರೆಯವರ ಹೆಸರಲ್ಲಿ ರೂಂ ಬುಕ್, ಎಂಟ್ರಿ ಇಲ್ಲದೇ ಲಾಡ್ಜ್‌ಗೆ ಬಂದವನು ನಿಗೂಢ ಸಾವು! ಜೊತೆಗಿದ್ದವನು ಎಸ್ಕೇಪ್!

Published : May 21, 2026, 10:42 AM IST
Bengaluru: Tamil Nadu Man Found Dead in Madiwala Lodge

ಸಾರಾಂಶ

ಬೆಂಗಳೂರಿನ ಮಡಿವಾಳದ ಲಾಡ್ಜ್‌ನಲ್ಲಿ ತಮಿಳುನಾಡು ಮೂಲದ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಬೇರೆಯವರ ಹೆಸರಲ್ಲಿ ಬುಕ್ ಆಗಿದ್ದ ರೂಂನಲ್ಲಿದ್ದ ಈತನ ಜೊತೆಗಿದ್ದ ವ್ಯಕ್ತಿ ಪರಾರಿಯಾಗಿದ್ದು, ಬಾಯಲ್ಲಿ ರಕ್ತ ಕಂಡುಬಂದಿರುವುದು ಸಾವಿನ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. 

ಬೆಂಗಳೂರು (ಮೇ.21): ನಗರದ ಮಡಿವಾಳದ ಮಾರುತಿ ನಗರದಲ್ಲಿರುವ ಖಾಸಗಿ ಲಾಡ್ಜ್ ಒಂದರಲ್ಲಿ ತಮಿಳುನಾಡು ಮೂಲದ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತನನ್ನು ತಮಿಳುನಾಡಿನ ಪುಳಿಯಂಪಟ್ಟಿ ನಿವಾಸಿ ಮುರಳಿ ಅಲಿಯಾಸ್ ಮಧು (38) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಲಾಡ್ಜ್‌ನ ರೂಂ ಒಂದರಲ್ಲಿ ಹಾಸಿಗೆಯ ಮೇಲೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿದ್ದಾತ ಬಳಿಕ ಮೃತಪಟ್ಟಿದ್ದಾನೆ.

ಪೊಲೀಸರ ತನಿಖೆಯಲ್ಲಿ ಬೆಚ್ಚಿಬಿಳಿಸುವ ಮಾಹಿತಿ!

ಪೊಲೀಸರ ತನಿಖೆಯಲ್ಲಿ ಇನ್ನೂ ಕುತೂಹಲಕಾರಿ ಮಾಹಿತಿ ಹೊರಬಂದಿದೆ. ಲಾಡ್ಜ್‌ನಲ್ಲಿ ರೂಂ ಅನ್ನು ಬೇರೆ ವ್ಯಕ್ತಿಯ ಹೆಸರಲ್ಲಿ ಬುಕ್ ಮಾಡಲಾಗಿತ್ತು. ಆದರೆ, ಎಂಟ್ರಿ ದಾಖಲೆ ಇಲ್ಲದೇ ಮುರಳಿಯೂ ಅದೇ ರೂಂಗೆ ಬಂದಿದ್ದ ಎನ್ನಲಾಗಿದೆ. ಇನ್ನಷ್ಟು ಶಾಕ್ ಕೊಟ್ಟ ಸಂಗತಿ ಏನೆಂದರೆ, ಮುರಳಿ ಸಾವಿನ ಬಳಿಕ ಅವನ ಜೊತೆಯಲ್ಲಿದ್ದ ವ್ಯಕ್ತಿ ಅಲ್ಲಿಂದಲೇ ಎಸ್ಕೇಪ್ ಆಗಿದ್ದಾನೆ. ಇದರಿಂದ ಪ್ರಕರಣ ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ.

ಬಾಯಲ್ಲಿ ರಕ್ತ ಡ್ರಗ್ಸ್‌ನಿಂದ ಸಾವಾಯಿತೇ? ಕೊಲೆಯೇ?

ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಮುರಳಿಯ ಬಾಯಲ್ಲಿ ರಕ್ತ ಕಂಡುಬಂದಿದೆ. ಡ್ರಗ್ಸ್ ಸೇವನೆಯಿಂದ ಸಾವಾಯಿತೇ? ಅಥವಾ ಆರೋಗ್ಯ ಸಮಸ್ಯೆಯಿಂದ ಪ್ರಾಣ ಕಳೆದುಕೊಂಡನೇ? ಎಂಬ ಹಲವು ಅನುಮಾನಗಳು ಮೂಡಿವೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತನ ಪೋಷಕರಿಗೂ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ವ್ಯಕ್ತಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪಕ್ಕದ ಮನೆಯವರ ಬಳಿ ಮೊಬೈಲ್​ ಕೇಳಿದ್ದಕ್ಕೆ ಬೈದ ಅಮ್ಮ: ಡೆತ್​ನೋಟ್​ ಬರೆದಿಟ್ಟು ಮಂಡ್ಯದ ಬಾಲೆಯರು ಕಣ್ಮರೆ
ಕಣ್ಣೀರಿನ ನಡುವೆ ಮತ್ತೊಂದು ದುರಂತ: ಮಸಣದಿಂದ ಮರಳುತ್ತಿದ್ದ ಇಬ್ಬರು ಅಪಘಾತದಲ್ಲಿ ಸಾವು