
ಬೆಂಗಳೂರು(ಮೇ 21) ಅಪಾರ್ಟ್ ಮೆಂಟ್ ನಿಂದ ಹಾರಿ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಬೆನ್ನಿಗಾನಹಳ್ಳಿ ಟೆಕ್ಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಉತ್ತಮ್ ಹೆಗಡೆ (30) ಸಾವನ್ನಪ್ಪಿದ ಟೆಕ್ಕಿ. ಮೃತ ಟೆಕ್ಕಿ ತನ್ನ ಕುಟುಂಬದೊಂದಿಗೆ ಅಪಾರ್ಟ್ಮೆಂಟ್ನ ಫ್ಲ್ಯಾಟ್ವೊಂದರಲ್ಲಿ ವಾಸಮಾಡುತ್ತಿದ್ದ. ನಗರದ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಉತ್ತಮ್ ಹೆಗಡೆ ಬುಧವಾರ ರಾತ್ರಿ ಎಂದಿನಂತೆ ಎಲ್ಲರೊಂದಿಗೆ ಬೆರೆತು ಊಟ ಮಾಡಿ ಮಲಗಿದ್ದ.
ಹೆಂಡತಿ ವರ್ತನೆಗೆ ಬೇಸತ್ತ ಗಂಡ ಆತ್ಮಹತ್ಯೆಗೆ ಶರಣು
ಆದರೆ ಗುರುವಾರ ನಸುಕಿವ ಜಾವ 3 ಗಂಟೆ ಸಮಯದಲ್ಲಿ ಅಪಾರ್ಟ್ಮೆಂಟ್ ನಿಂದ ಹಾರಿ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಸಿವಿ ರಾಮನ್ ನಗರ ಆಸ್ಪತ್ರೆಗೆ ಕಳುಹಿಸಲಾಗಿದೆ. ಮದುವೆ ವಿಚಾರಕ್ಕೆ ಸಂಬಂಧಿಸಿದ ಕಾರಣದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ