
ತುಮಕೂರು (ಅ.13): ಬೆಂಗಳೂರಿನಿಂದ ತುಮಕೂರಿಗೆ ಪ್ರಯಾಣಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ (ಕೆಎ 06 ಎಫ್ 1235) 25 ವರ್ಷದ ಯುವಕ ಜೀವನ್ ರಾಜ್ ಎಂಬಾತನಿಂದ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳವಾದ ಘಟನೆ ನಡೆದಿದೆ.
ತುಮಕೂರು ನಗರ ನಿವಾಸಿಯಾದ ಜೀವನ್ ರಾಜ್, ಬಸ್ನಲ್ಲಿ ಸೀಟ್ ನಂಬರ್ 14ರಲ್ಲಿ ಕುಳಿತಿದ್ದ ಯುವತಿಯ ಪಕ್ಕದಲ್ಲಿ ನಿಂತು ಅನುಚಿತ ವರ್ತನೆ ತೋರಿದ್ದಾನೆ. ನೆಲಮಂಗಲದ ನವಯುಗ ಟೋಲ್ ಬಳಿ ಬಸ್ ಬರುತ್ತಿದ್ದಾಗ ಆರೋಪಿ ಯುವತಿಯ ಹೆಗಲ ಮೇಲೆ ಕೈಯಿಟ್ಟು, ಬಳಿಕ ಪ್ಯಾಂಟ್ನ ಜೀಪ್ ತೆಗೆದು ಹಸ್ತಮೈಥುನ ಮಾಡಿಕೊಂಡಿದ್ದಾನೆ. ಈ ವೇಳೆ ಯುವತಿಯ ಬಟ್ಟೆ ಮೇಲೆ ವೀರ್ಯ ಚೆಲ್ಲಿದೆ. ಇದರಿಂದ ಕೋಪಗೊಂಡ ಯುವತಿ ಜೀವನ್ ರಾಜ್ ವಿರುದ್ಧ ಗಲಾಟೆ ಆರಂಭಿಸಿದ್ದಾಳೆ. ಬಸ್ನಲ್ಲಿದ್ದ 60ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ ಕೆಲವರು ಆರೋಪಿಯನ್ನು ಥಳಿಸಿದ್ದಾರೆ. ಯುವತಿ ತಕ್ಷಣ ತನ್ನ ತಂದೆಗೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾಳೆ. ತಂದೆ 112ಕ್ಕೆ ಕರೆ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ಆರೋಪಿ ಬಂಧನ:
ಈ ವೇಳೆಗೆ ಬಸ್ ತುಮಕೂರು ಸಮೀಪದ ಕ್ಯಾತಸಂದ್ರ ಟೋಲ್ಗೆ ಬಂದಿತ್ತು. ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ಜೀವನ್ ರಾಜ್ನನ್ನು ವಶಕ್ಕೆ ಪಡೆದಿದ್ದಾರೆ. ಸಂತ್ರಸ್ತ ಯುವತಿ ತುಮಕೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿ ವಿರುದ್ಧ ಬಿಎನ್ಎಸ್ ಕಲಂ 64 ಮತ್ತು 79 ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಈ ಘಟನೆಯಿಂದ ಬಸ್ನಲ್ಲಿದ್ದ ಇತರ ಪ್ರಯಾಣಿಕರಲ್ಲಿ ಆತಂಕ ಮೂಡಿದ್ದು, ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಮತ್ತೆ ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ