ಸ್ತ್ರೀಯರ ಮೇಲೆ ಆ್ಯಸಿಡ್‌ ದಾಳಿ: ಬೆಂಗ್ಳೂರು ನಂ.1!; ಎನ್‌ಸಿಆರ್‌ಬಿ ವರದಿಯಲ್ಲಿ ಆಘಾತಕಾರಿ ಅಂಶ ಬೆಳಕಿಗೆ

Published : Dec 11, 2023, 08:49 AM IST
ಸ್ತ್ರೀಯರ ಮೇಲೆ ಆ್ಯಸಿಡ್‌ ದಾಳಿ: ಬೆಂಗ್ಳೂರು ನಂ.1!; ಎನ್‌ಸಿಆರ್‌ಬಿ ವರದಿಯಲ್ಲಿ ಆಘಾತಕಾರಿ ಅಂಶ ಬೆಳಕಿಗೆ

ಸಾರಾಂಶ

7 ಆ್ಯಸಿಡ್‌ ದಾಳಿ ಪ್ರಕರಣಗಳನ್ನು ದಾಖಲಿಸಿರುವ ರಾಜಧಾನಿ ದೆಹಲಿ ನಂ.2 ಮತ್ತು 5 ಪ್ರಕರಣಗಳೊಂದಿಗೆ ಗುಜರಾತ್‌ನ ಅಹಮದಾಬಾದ್‌ 3ನೇ ಸ್ಥಾನದಲ್ಲಿವೆ. ಇದಲ್ಲದೆ ದೆಹಲಿಯಲ್ಲಿ 7, ಬೆಂಗಳೂರಿನಲ್ಲಿ 3, ಅಹಮದಾಬಾದ್‌ ಮತ್ತು ಹೈದರಾಬಾದ್‌ಗಳಲ್ಲಿ ತಲಾ 2 ಆ್ಯಸಿಡ್‌ ದಾಳಿ ಯತ್ನ ಪ್ರಕರಣ ದಾಖಲಾಗಿವೆ.

ನವದೆಹಲಿ (ಡಿಸೆಂಬರ್ 11, 2023): 2022ರಲ್ಲಿ ದೇಶದಲ್ಲಿ ಮಹಿಳೆಯರ ಮೇಲೆ ನಡೆದ ಅತಿ ಹೆಚ್ಚು ಆ್ಯಸಿಡ್‌ ದಾಳಿ ನಡೆದ ನಗರಗಳ ಪೈಕಿ ಕರ್ನಾಟಕದ ರಾಜಧಾನಿ ಬೆಂಗಳೂರು ಮೊದಲನೇ ಸ್ಥಾನದಲ್ಲಿದೆ ಎಂಬ ಆತಂಕಕಾರಿ ಅಂಶವನ್ನು ರಾಷ್ಟ್ರೀಯ ಅಪರಾಧಗಳ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ವರದಿ ತಿಳಿಸಿದೆ. ಎನ್‌ಸಿಆರ್‌ಬಿ ಬಿಡುಗಡೆ ಮಾಡಿದ ವರದಿ ಅನ್ವಯ ದೇಶದ 19 ಮಹಾನಗರಗಳ ಪೈಕಿ 2022ರಲ್ಲಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ 8 ಆ್ಯಸಿಡ್‌ ದಾಳಿ ಪ್ರಕರಣಗಳು ದಾಖಲಾಗಿವೆ. ಇದು ಆ ವರ್ಷದಲ್ಲಿ ದೇಶದಲ್ಲಿ ಅತಿ ಹೆಚ್ಚು.

ಉಳಿದಂತೆ 7 ಆ್ಯಸಿಡ್‌ ದಾಳಿ ಪ್ರಕರಣಗಳನ್ನು ದಾಖಲಿಸಿರುವ ರಾಜಧಾನಿ ದೆಹಲಿ ನಂ.2 ಮತ್ತು 5 ಪ್ರಕರಣಗಳೊಂದಿಗೆ ಗುಜರಾತ್‌ನ ಅಹಮದಾಬಾದ್‌ 3ನೇ ಸ್ಥಾನದಲ್ಲಿವೆ. ಇದಲ್ಲದೆ ದೆಹಲಿಯಲ್ಲಿ 7, ಬೆಂಗಳೂರಿನಲ್ಲಿ 3, ಅಹಮದಾಬಾದ್‌ ಮತ್ತು ಹೈದರಾಬಾದ್‌ಗಳಲ್ಲಿ ತಲಾ 2 ಆ್ಯಸಿಡ್‌ ದಾಳಿ ಯತ್ನ ಪ್ರಕರಣ ದಾಖಲಾಗಿವೆ.

ಇದನ್ನು ಓದಿ: ಆ್ಯಸಿಡ್‌ ದಾಳಿ ಸಂತ್ರಸ್ತೆಗೆ ತಮ್ಮದೇ ಕಚೇರಿಯಲ್ಲಿ ನೌಕರಿ ಕೊಟ್ಟ ಸಿಎಂ ಸಿದ್ದರಾಮಯ್ಯ

ತನ್ನನ್ನು ಮದುವೆಯಾಗಲು ನಿರಾಕರಿಸಿದಳು ಎಂಬ ಕಾರಣಕ್ಕೆ ಕಳೆದ ವರ್ಷ ಏಪ್ರಿಲ್‌ 28ರಂದು ಬೆಂಗಳೂರಿನಲ್ಲಿ 24 ವರ್ಷದ ಯುವತಿಯ ಮೇಲೆ ವ್ಯಕ್ತಿಯೊಬ್ಬ ಆ್ಯಸಿಡ್‌ ಎರಚಿದ ಪ್ರಕರಣ ದೇಶದಲ್ಲಿ ಭಾರೀ ಸದ್ದು ಮಾಡಿತ್ತು. ಸಂತ್ರಸ್ತೆಗೆ ಕೆಲಸ ನೀಡೋದಾಗಿ ಸರ್ಕಾರ ಭರವಸೆ ನೀಡಿತ್ತು. ಈ ವರ್ಷ ಜುಲೈನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2022 ರಲ್ಲಿ ದಾಳಿಗೊಳಗಾದ ಆ್ಯಸಿಡ್‌ ದಾಳಿಯಿಂದ ಬದುಕುಳಿದವರಿಗೆ ತಮ್ಮ ಸಚಿವಾಲಯದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.

ಇದನ್ನು ಓದಿ: ಬೆಂಗಳೂರಿಗರೇ ಎಚ್ಚರ, ಮಕ್ಕಳ ಕಿಡ್ನಾಪ್‌ ಕೇಸ್‌ಗಳಲ್ಲಿ ದೇಶದಲ್ಲಿಯೇ 3ನೇ ಸ್ಥಾನದಲ್ಲಿದೆ ಉದ್ಯಾನನಗರಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!