
ಬೆಂಗಳೂರು (ಜ.08): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ವಾಸವಿದ್ದ ಕುಟುಂಬದಲ್ಲಿ ಪತ್ನಿಯ ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಹೋಮ್ಗಾರ್ಡ್ ಗಂಡ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ತಾಯಿ ಹಾಗೂ ಇಬ್ಬರು ಮಕ್ಕಳನ್ನು ಕುಟುಂಬದ ಮಾಲೀಕನೇ ಕೊಲೆ ಮಾಡಿದ್ದಾನೆ. ಹೆಂಡತಿ ಭಾಗ್ಯಮ್ಮ, ಮಗಳು ನವ್ಯ (19) ಹಾಗೂ ಆತನ ಮನೆಯಲ್ಲಿಯೇ ಉಳಿದುಕೊಂಡಿದ್ದ ಅಕ್ಕನ ಮಗಳು ಹೇಮಾವತಿ (22) ಸೇರಿ ಮೂವರನ್ನು ಕೊಲೆ ಮಾಡಿದ್ದಾನೆ. ಇಲ್ಲಿ ಹೆಂಡತಿಯ ಶೀಲದ ಬಗ್ಗೆ ಅನುಮಾನ ಪಡುತ್ತಿದ್ದ ಗಂಗರಾಜು ಇಂದು ಬೆಳಗ್ಗೆ ಎಲ್ಲರನ್ನೂ ಕೊಲೆ ಮಾಡಿ ಬೀಸಾಡಿದ್ದಾನೆ. ಇನ್ನು ಕೊಲೆ ಮಾಡಿದ ನಂತರ ತಾನೇ ಸ್ವತಃ ಪೊಲೀಸ್ ಠಾಣೆಗೆ ತೆರಳಿ, ಹೆಂಡತಿ ಶೀಲದ ಮೇಲೆ ಅನುಮಾನ ಇತ್ತು. ಹೀಗಾಗಿ, ಮಚ್ಚಿನಿಂದ ಕೊಲೆ ಮಾಡಿದ್ದೇನೆ ಎಂದು ಮಚ್ಚಿನ ಸಮೇತವಾಗಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.
ಕೊಲೆ ಆರೋಪಿ ಗಂಗರಾಜು ಹೆಬ್ಬಗೋಡಿ ಪೊಲೀಸ್ ಠಾಣೆ ಹೋಂ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದನು. ಹೋಮ್ಗಾರ್ಡ್ ವಿಭಾಗದಲ್ಲಿ ಈತನಿಗೆ ಟ್ರಾಫಿಕ್ ಡ್ಯೂಟಿಗೆ ಹಾಕುತ್ತಿದ್ದರು. ಕೆಲಸದ ನಿಮಿತ್ತ ಗಂಗರಾಜು ಡ್ಯೂಟಿಗೆ ಹೋದಾಗ ಪತ್ನಿ ಭಾಗ್ಯಮ್ಮ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಡನೆ ಸೇರುತ್ತಿದ್ದಳು. ಈ ವಿಚಾರ ಮಗಳು ಹಾಗೂ ಮನೆಯಲ್ಲಿದ್ದ ಅಕ್ಕನ ಮಗಳಿಗೆ ಗೊತ್ತಿದ್ದರೂ ತನಗೆ ತಿಳಿಸಿಲ್ಲವೆಂದು ಕೋಪಗೊಂಡು ಕೊಲೆ ಮಾಡಿದ್ದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಪೀಣ್ಯಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಆಗಮಿಸಿ ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ. ಇನ್ನು ಕೊಲೆ ಬಗ್ಗೆ ಪೊಲೀಸರು ಇನ್ನಷ್ಟೇ ವಿಚಾರಣೆ ಮಾಡಿ ಮಾಹಿತಿ ಘಟನೆಗೆ ಇನ್ನಷ್ಟು ಮಾಹಿತಿಯನ್ನು ನೀಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ