ಯುಗಾದಿ ಹಬ್ಬಕ್ಕೆ ಸಿಕ್ತು ಭರ್ಜರಿ ಬೇಟೆ; ಮಟನ್ ಚೀಟಿ ಹಣದೊಂದಿಗೆ ಎಸ್ಕೇಪ್ ಆಗಿದ್ದ ಪುಟ್ಟಸ್ವಾಮಿಗೌಡ ಲಾಕ್

Published : Apr 03, 2024, 07:01 PM ISTUpdated : Apr 05, 2024, 11:52 AM IST
ಯುಗಾದಿ ಹಬ್ಬಕ್ಕೆ ಸಿಕ್ತು ಭರ್ಜರಿ ಬೇಟೆ; ಮಟನ್ ಚೀಟಿ ಹಣದೊಂದಿಗೆ ಎಸ್ಕೇಪ್ ಆಗಿದ್ದ ಪುಟ್ಟಸ್ವಾಮಿಗೌಡ ಲಾಕ್

ಸಾರಾಂಶ

ಬೆಂಗಳೂರಿನಲ್ಲಿ ಯುಗಾದಿ ಹಬ್ಬದ ಹೊಸತೊಡಕಿಗೆ 5,000 ಜನರಿಗೆ ಮಟನ್ ಕೊಡುವುದಾಗಿ ಚೀಟಿ ಕಟ್ಟಿಸಿಕೊಂಡು ಎಸ್ಕೇಪ್ ಆಗಿದ್ದ ಪುಟ್ಟಸ್ವಾಮಿಗೌಡ ಪೊಲೀಸರಿಗೆ ಲಾಕ್ ಆಗಿದ್ದಾನೆ. 

ಬೆಂಗಳೂರು (ಏ.03): ಬೆಂಗಳೂರಿನ ಬ್ಯಾಟರಾಯನಪುರ, ಗಿರಿನಗರ ಸೇರಿ ವಿವಿಧ ಏರಿಯಾಗಳಲ್ಲಿ ಯುಗಾದಿ ಹಬ್ಬದ ಹೊಸತೊಡಕಿಗೆ 5,000 ಜನರಿಗೆ ಮಟನ್ ಕೊಡುವುದಾಗಿ 4,800 ರೂ. ಮೊತ್ತದ ಚೀಟಿ ಕಟ್ಟಿಸಿಕೊಂಡು ಎಸ್ಕೇಪ್ ಆಗಿದ್ದ ಪುಟ್ಟಸ್ವಾಮಿಗೌಡ ಯುಗಾದಿ ಹಬ್ಬಕ್ಕೂ ಮುನ್ನವೇ ಪೊಲೀಸರಿಗೆ ಲಾಕ್ ಆಗಿದ್ದಾನೆ. 

ಹೌದು, ಬೆಂಗಳೂರಿನ ಗಿರಿನಗರದಲ್ಲಿ ವಾಸವಾಗಿದ್ದ ಪುಟ್ಟಸ್ವಾಮಿ ಗೌಡ ಎನ್ನುವವರು ಕಳೆದ 3 ವರ್ಷಗಳಿಂದ ಯುಗಾದಿ ಹಬ್ಬಕ್ಕೆ ಮಟನ್ ಸರಬರಾಜು ಮಾಡುವುದಾಗಿ ಹೇಳಿ ಜನರಿಂದ ಚೀಟಿ ಕಟ್ಟಿಸಿಕೊಳ್ಳುತ್ತಿದ್ದನು. ಮೊದಲ ವರ್ಷ ಕಡಿಮೆ ಇದ್ದ ಮಟನ್ ಚೀಟಿ ಕಟ್ಟುವವರ ಸಂಖ್ಯೆ ದಿಢೀರನೆ ದುಪ್ಪಟ್ಟಾಯ್ತು. ಇನ್ನು ಚೀಟಿ ಕಟ್ಟಿದವರಿಗೆ ಸರಿಯಾಗಿ ಮಟನ್ ಕೊಟ್ಟು ನಂಬಿಕೆ ಗಿಟ್ಟಿಸಿಕೊಂಡ ಪುಟ್ಟಸ್ವಾಮಿಗೌಡ ಒಂದು ಸ್ಲಿಪ್‌ ಸಿದ್ಧಪಡಿಸಿ ಚೀಟಿ ಹಾಕಿಸಿಕೊಳ್ಳುವುದಕ್ಕೆ ಪ್ರತಿಯೊಂದು ಏರಿಯಾಗೆ ಹೋಗಿ ಪ್ರಚಾರ ಮಾಡುತ್ತಿದ್ದನು. ಈತ ಹೆಚ್ಚಾಗಿ ಮಹಿಳೆಯರೊಂದಿಗೆ ವ್ಯವಹಾರ ಮಾಡುತ್ತಿದ್ದದ್ದನು.

ಬೆಂಗಳೂರು ಬಿಎಂಟಿಸಿ ಬಸ್‌ ಕೆಳಗೆ ನುಗ್ಗಿದ ಚಿರತೆ ಮರಿ; ನೀರು ಕುಡಿಸಲು ಮುಂದಾದ ಡ್ರೈವರ್ ಮೇಲೆ ಅಟ್ಯಾಕ್!

ಪುಟ್ಟಸ್ವಾಮಿಗೌಡ ಇತ್ತೀಚೆಗೆ ಬ್ಯಾಟರಾಯನಪುರ, ಗಿರಿನಗರ, ಕವಿಕಾ ಲೇಔಟ್ ಸೇರಿ ವಿವಿಧ ಏರಿಯಾಗಳಲ್ಲಿ ಸುಮಾರು 5 ಸಾವಿರ ಜನರಿಗೆ ಯುಗಾದಿ ಹಬ್ಬಕ್ಕೆ ಮಟನ್ ಕೊಡುವುದಾಗಿ ಹೇಳಿ ಚೀಟಿ ಕಟ್ಟಿಸಿಕೊಳ್ಳುತ್ತಿದ್ದನು. ತಿಂಗಳಿಗೆ 400 ರೂ.ನಂತೆ ವರ್ಷಕ್ಕೆ 4,800 ರೂ. ಹಣವನ್ನು ಮಟನ್ ಚೀಟಿ ರೀತಿ ಕಟ್ಟಿಸಿಕೊಳ್ಳುತ್ತಿದ್ದನು. ಆದರೆ, ಯುಗಾದಿ ಹಬ್ಬ ಒಂದು ತಿಂಗಳು ಬಾಕಿ ಇದೆ ಎನ್ನುವಷ್ಟರಲ್ಲಿ ಪುಟ್ಟಸ್ವಾಮಿಗೌಡ ನಾಪತ್ತೆ ಆಗಿದ್ದನು. ಇನ್ನು ಚೀಟಿ ಕಟ್ಟಿದವರು ಆತನ ಮನೆಗೆ ಹೋಗಿದ್ದಾಗ ಆತ ಮನೆಗೆ ಬೀಗ ಜಡಿದು ಎಸ್ಕೇಪ್ ಆಗಿರುವುದು ಪತ್ತೆಯಾಗಿದೆ. ಒಂದು ವಾರ ಕಾದರೂ ಬಾರದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿತ್ತು.

ಮಟನ್ ಚೀಟಿ ಕಟ್ಟಿ ಮೋಸ ಹೋದವರು ಸೇರಿಕೊಂಡು ಬ್ಯಾಟರಾಯನಪುರದಲ್ಲಿ ಪುಟ್ಟಸ್ವಾಮಿಗೌಡನ ವಿರುದ್ಧ ದೂರು ನೀಡಿದ್ದರು. ಕೇಸ್ ದಾಖಲಿಸಿಕೊಂಡು ಪೊಲೀಸರು ವಂಚಕನಿಗೆ ಬಲೆ ಬೀಸುತ್ತಾರೆ. ಯಾರ ಸಂಪರ್ಕಕ್ಕೂ ಸಿಗದೇ ಚೀಟಿಯಲ್ಲಿದ್ದ ಫೋನ್ ನಂಬರ್ ಸ್ವಿಚ್ಡ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದನು. ಆರೋಪಿಗಾಗಿ ಪೊಲೀಸರು ನಿರಂತರವಾಗಿ ಹುಡುಕಾಟ ಮಾಡುತ್ತಲೇ ಇದ್ದರು. ಆದರೆ, ಇಂದು ಪುಟ್ಟಸ್ವಾಮಿಗೌಡನ ನಸೀಬು ಕೆಟ್ಟಿತ್ತು ಎನಿಸುತ್ತದೆ. ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಬ್ಯಾಟರಾಯನಪುರ ಪೊಲೀಸರು ಸದ್ಯ ಪುಟ್ಟಸ್ವಾಮಿಗೌಡನನ್ನ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು ರಂಜಾನ್ ಕಿಟ್ ವಂಚನೆ: ದಂಪತಿಯಿಂದ 21 ಗ್ರಾಂ ಚಿನ್ನ, 9 ಸಾವಿರ ಕಿತ್ತುಕೊಂಡು ಪರಾರಿಯಾದ ಅಬ್ದುಲ್ಲಾ

ಇನ್ನು ಚೀಟಿ ಕಟ್ಟಿದವರಿಗೆ ಪುಟ್ಟಸ್ವಾಮಿಗೌಡ ಹಣವನ್ನು ವಾಪಸ್ ಕೊಡುತ್ತಾನೋ ಅಥವಾ ಯುಗಾದಿ ಹಬ್ಬದ ಹೊಸತೊಡಕಿಗೆ ಮಟನ್ ಮಾಂಸ ಸರಬರಾಜು ಮಾಡುತ್ತಾನೋ ಕಾದು ನೋಡಬೇಕಿದೆ. ಲಕ್ಷಾಂತರ ರೂ. ಹಣವನ್ನು ಒಟ್ಟುಗೂಡಿಸಿಕೊಂಡು ವಂಚನೆ ಮಾಡಲು ಮುಂದಾದ ಈತನಿಗೆ ಪೊಲೀಸರು ತಕ್ಕ ಶಿಕ್ಷೆಯನ್ನೂ ನೀಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಮತ್ತೆ, ಕೆಲವರು ನಮ್ಮ ಹಣವನ್ನು ನಮಗೆ ವಾಪಸ್ ಕೊಡಿಸಿ, ನೀವು ಆತನಿಗೆ ಯಾವ ಶಿಕ್ಷೆಯನ್ನಾದರೂ ಕೊಡಿ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!