Bengaluru: ಕನ್ನಡ ಹಾಡು ಹಾಕದ್ದಕ್ಕೇ ಯುವಕನ ಕೊಲೆ!

Published : Nov 11, 2023, 12:32 PM ISTUpdated : Nov 11, 2023, 12:33 PM IST
Bengaluru: ಕನ್ನಡ  ಹಾಡು ಹಾಕದ್ದಕ್ಕೇ ಯುವಕನ ಕೊಲೆ!

ಸಾರಾಂಶ

ಬಾಣಸವಾಡಿಯಲ್ಲಿ ನಡೆದ ಪ್ರವೀಣ್ ಕೊಲೆಗೆ ಬಿಗ್‌ ಟ್ವಿಸ್ಟ್ ಸಿಕ್ಕಿದೆ. ಕನ್ನಡ ಸಾಂಗ್ ಹಾಕದಿದ್ದುದ್ದಕ್ಕೇ  ಪ್ರವೀಣ್ ಕೊಲೆ ನಡೆದಿದೆ ಎಂದು ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಹೇಳಿಕೆ ನೀಡಿದ್ದಾರೆ.  

ಬೆಂಗಳೂರು (ನ.11): ಬಾಣಸವಾಡಿಯಲ್ಲಿ ನಡೆದ ಪ್ರವೀಣ್ ಕೊಲೆಗೆ ಬಿಗ್‌ ಟ್ವಿಸ್ಟ್ ಸಿಕ್ಕಿದೆ. ಕನ್ನಡ ಸಾಂಗ್ ಹಾಕದಿದ್ದುದ್ದಕ್ಕೇ  ಪ್ರವೀಣ್ ಕೊಲೆ ನಡೆದಿದೆ ಎಂದು ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಹೇಳಿಕೆ ನೀಡಿದ್ದಾರೆ.  

ಲಿಂಗರಾಜಪುರದ ಜಾತ್ರೆ ಹಬ್ಬ ಹಿನ್ನೆಲೆ ಡಿಜೆ ಸಾಂಗ್ ಹಾಕಿಸಲಾಗಿತ್ತು. ಕೆಜೆ ಹಳ್ಳಿ ಠಾಣಾ ವ್ಯಾಪ್ತಿಯ ಹಳೆಬಾಗಲೂರಿನ ನಾಲ್ಕು ಹುಡುಗರು ಬಂದಿದ್ದರು. ತಮಿಳು ಹಾಗೂ ಕನ್ನಡ ಸಾಂಗ್ ಹಾಕುವ ವಿಚಾರವಾಗಿ ಅವರಲ್ಲೇ ಜಗಳ ಆಗಿತ್ತು. ಈ ಜಗಳದಲ್ಲಿ ಪ್ರವೀಣ್ ಎಂಬಾತ ಮೂವರಲ್ಲಿ ಓರ್ವರಿಗೆ ಹೆಲ್ಮೆಟ್ ನಿಂದ ಹೊಡೆದಿದ್ದಾನೆ. ಬಳಿಕ ಅದೇ ಹೆಲ್ಮೆಟ್ ಕಸಿದುಕೊಂಡು ಹಲ್ಲೆ ಆತನ ಮೇಲೆ ಮೂವರು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಈ ಸಂಬಂಧ ಮೂವರ ಅರೆಸ್ಟ್ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇವರೆಲ್ಲರೂ ಕೂಡ ಸ್ನೇಹಿತರಾಗಿದ್ದಾರೆ.

ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯ ಆತ್ಮಹತ್ಯೆ ಪ್ರಕರಣ, 15 ವರ್ಷಗಳ ಬಳಿಕ ಆರೋಪಿಗೆ ಶಿಕ್ಷೆ

ಮೃತ ವ್ಯಕ್ತಿ ಡೆಲಿವರಿ ಬಾಯ್ ಆಗಿದ್ದ ಮೃತನಿಗೆ ಸಣ್ಣ ಸಣ್ಣ ವಿಚಾರಕ್ಕೂ ಕೋಪ ಮಾಡಿಕೊಳ್ಳುವ ಸ್ವಭಾವ ಇತ್ತು. ಈ ಹಿಂದೆ ಗೆಳೆಯರ ಜೊತೆ ಗಲಾಟೆ ಮಾಡಿಕೊಂಡಿದ್ದಾನೆ ಮಾತ್ರವಲ್ಲ ಈ ಹಿಂದೆ ಪೊಲೀಸ್ ಸಿಬ್ಬಂದಿ ಜೊತೆ ಕೂಡ ಗಲಾಟೆ ಮಾಡಿಕೊಂಡಿದ್ದ. 2021ರಲ್ಲಿ ಟ್ರಾಫಿಕ್ ಪೊಲೀಸ್ ಮೇಲೆ ಗಲಾಟೆ ಮಾಡಿಕೊಂಡಿದ್ದ. ಆ ಸಂಬಂಧ ಎಫ್ ಐಆರ್ ಸಹ ದಾಖಲಾಗಿತ್ತು. ಮೊನ್ನೆ ಸಹ ಇದೇ ರೀತಿ ಸಾಂಗ್ ವಿಚಾರವಾಗಿ ಗಲಾಟೆ ನಡೆದು ಕೊಲೆ ಆಗಿದೆ ಎಂದು ಡಿಸಿಪಿ ದೇವರಾಜ್  ಹೇಳಿದ್ದಾರೆ.

Bengaluru ಟೀ ಕುಡಿಯಲು ಬಂದಿದ್ದ ರೌಡಿಶೀಟರ್‌ ಬರ್ಬರ ಹತ್ಯೆ, 8 ಮಂದಿ ಅರೆಸ್ಟ್

ಕೊಲೆ ಸಂಬಂಧ ಮೃತ ಪ್ರವೀಣ್ ಸ್ನೇಹಿತರಾದ ಸುಂದರ್ (27), ಪ್ರಭು (25) ಮತ್ತು ಆರುಮುಗಂ (27) ಎಂಬುವವರನ್ನು ಬಂಧಿಸಲಾಗಿದೆ. ಮಂಗಳವಾರ ತಡರಾತ್ರಿ 12.30ರ ಸುಮಾರಿಗೆ ಲಿಂಗರಾಜಪುರದ ಆಯಿಲ್‌ ಮಿಲ್‌ ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಪ್ರವೀಣ್ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಈ ವೇಳೆ ಆರೋಪಿಗಳು ಪ್ರವೀಣ್‌ನನ್ನು ಎಚ್ಚರಿಸಲು ಪ್ರಯತ್ನಿಸಿದ್ದಾರೆ. ಆಗ ಪ್ರವೀಣ್‌ ಮೃತ ಪಟ್ಟಿರುವುದು ಖಚಿತವಾದ ಹಿನ್ನೆಲೆಯಲ್ಲಿ ಆರೋಪಿಗಳು ಪರಾರಿಯಾಗಿದ್ದರು. ಬಳಿಕ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!