
ವರದಿ: ಕಿರಣ್ಎಲ್ ತೊಡರನಾಳ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿತ್ರದುರ್ಗ (ಜು.16) ಚಿತ್ರದುರ್ಗದ ಪ್ರಸಿದ್ದ ಮಠಗಳಲ್ಲಿ ಒಂದಾಗಿರುವ ಭೋವಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀ ಸೇರಿದಂತೆ ಜಿಲ್ಲೆಯ ಇಬ್ಬರು ಶಾಸಕರಿಗೆ ಕೊಲೆ ಬೆದರಿಕೆ ಬಂದಿರುವ ವಿಷಯ ಬೆಳಕಿಗೆ ಬಂದಿದೆ. ಬೋವಿ ಸಮುದಾಯದ ಇಬ್ಬರು ಶಾಸಕರಾದ ಹೊಸದುರ್ಗದ ಕ್ಷೇತ್ರದ ಗೂಳಿಹಟ್ಟಿ ಡಿ ಶೇಖರ್, ಹಾಗೂ ಹೊಳಲ್ಕೆರೆಯ ಎಂ.ಚಂದ್ರಪ್ಪ ಸೇರಿದಂತೆ ಮೂವರಿಗೆ ಕೊಲೆ ಬೆದರಿಕೆ ಬಂದಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ KSP ಆಪ್ ಮೂಲಕ ಜಿಲ್ಲಾ ಪೊಲೀಸ್ (Police) ಕಚೇರಿಗೆ ಈ ಸಂದೇಶ ಬಂದಿದೆ. ಶಾಸಕರು ಮತ್ತು ಇಮ್ಮಡಿ ಶ್ರೀಗಳ ಕೊಲೆಗೆ ಸಂಚು ರೂಪಿಸಲಾಗಿದೆ ಎಂದು ಅನಾಮಧೇಯ ವ್ಯಕ್ತಿಯಿಂದ ಸಂದೇಶವನ್ನು ರವಾನಿಸಲಾಗಿದೆ. ಕೂಡಲೇ ಅದನ್ನು ಪರಿಶೀಲಿಸಿದ ಎಸ್ಪಿ ಕೆ ಪರಶುರಾಮ (K Parashuram) ಈ ಕೇಸ್ ನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಈ ಪ್ರಕರಣ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗಳ ಪತ್ತೆ ಮಾಡಿ ಸೂಕ್ತ ಕ್ರಮ ಕೈಗೊಳ್ತೀವಿ ಎಂದು ಎಸ್ಪಿ ಭರವಸೆ ಕೊಟ್ಟಿದ್ದಾರೆ.
ಇದನ್ನೂ ಓದಿ: ಅಮ್ಮನ ಹುಟ್ಟುಹಬ್ಬದಂದು ಸೂಸೈಡ್ ಮಾಡಿಕೊಂಡ ಮಗ, ವಿಶ್ವದ ಬೆಸ್ಟ್ ಗಿಫ್ಟ್ ಎಂದು ಡೆತ್ನೋಟ್!
ಇನ್ನೂ ಈ ಬೆದರಿಕೆ ವಿಚಾರದ ಕುರಿತು ಎಸ್ಪಿ ಅವರಿಗೆ ಭೋವಿ ಗುರುಪೀಠದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಯವರು ಪತ್ರ ಬರೆದಿದ್ದಾರೆ. ಪತ್ರದ ಸಂಪೂರ್ಣ ಸಾರಾಂಶ ಇಂತಿದೆ;
ಮಾನ್ಯರೇ,
ವಿಷಯ: ಭೋವಿ ಗುರುಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರಿಗೆ ಮತ್ತು ಮಠದ ಆಸ್ತಿಗಳಿಗೆ ರಕ್ಷಣೆ ಒದಗಿಸುವ ಬಗ್ಗೆ.
ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಭೋವಿಗುರುಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರಿಗೆ ಮತ್ತು ಮಠದ ಆಸ್ತಿಗಳಿಗೆ ಕೆಲವು ದುಷ್ಕರ್ಮಿಗಳಿಂದ ಅಪಾಯವಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿರುತ್ತದೆ.
ಇದನ್ನೂ ಓದಿ: ವೃದ್ಧರಿಗೆ ಮಸಾಜ್ ಆಸೆ ತೋರಿಸಿ ಚಿನ್ನ ದೋಚುತ್ತಿದ್ದ ಮಹಿಳೆ ಅಂದರ್
ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ನಿರಂತರವಾಗಿ ಸಮಾಜವನ್ನು ಸಂಘಟಿಸಲು ರಾಜ್ಯದ ನಾನಾ ಭಾಗಗಳಿಗೆ ಸಂಚರಿಸುತ್ತಿರುತ್ತಾರೆ. ಜುಲೈ-18 ರಂದು ಭೋವಿ ಜನೋತ್ಸವ ಸರಳವಾಗಿ ಬೋವಿ ಗುರುಪೀಠದಲ್ಲಿ ನಡೆಯುತ್ತದೆ. ಆಗಸ್ಟ್-1 ರಂದು ದಾವಣಗೆರೆಯಲ್ಲಿ ಶ್ರೀ ಸಿದ್ಧರಾಮೇಶ್ವರರ 60ನೇ ರಥೋತ್ಸವ ಬೃಹತ್ತಾಗಿ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಜನರನ್ನು ಸಂಘಟಿಸುವ ಉದ್ದೇಶಕ್ಕೆ ಹಳ್ಳಿಗಳಿಗೆ ಶ್ರೀಗಳು ಸಂಚರಿಸುತ್ತಿದ್ದಾರೆ. ಮಾಧ್ಯಮಗಳಲ್ಲಿ ಬಂದಿರುವ ಸುದ್ದಿಗಳನ್ನು ನೋಡಿದಾಗ ಮಠದ ಆಸ್ತಿಗೆ ಮತ್ತು ಶ್ರೀಗಳಿಗೆ ದುಷ್ಕರ್ಮಿಗಳಿಂದ ಹಲ್ಲೆ ಅಥವಾ ಇತರೆ ಚಟುವಟಿಕೆಗಳಿಂದ ಯಾವುದೇ ತೊಂದರೆಯಾಗದಂತೆ ರಕ್ಷಣೆಯನ್ನು ಒದಗಿಸಬೇಕಾಗಿ ತಮ್ಮಲ್ಲಿ ಕೋರಿಕೊಳ್ಳುತ್ತೇವೆ.
ಈ ರೀತಿ ಸವಿವರವಾಗಿ ಪೊಲೀಸರಲ್ಲಿ ಶ್ರೀಗಳು ಮನವಿ ಮಾಡಿಕೊಂಡಿದ್ದಾರೆ. ಪೊಲೀಸರು ಸೂಕ್ತ ತನಿಖೆ ನಡೆಸಿ ಅನಾಮಧೇಯ ವ್ಯಕ್ತಿಯಿಂದ ಬಂದಿರೋ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿ, ಶೀಘ್ರವೇ ಆರೋಪಿಗಳಿಗೆ ಎಡೆಮುರಿಕಟ್ಟಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ