
ಬೀದರ್, (ಜ.24): ಬೈಕ್ ಹಾಗೂ ಸರ್ಕಾರಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಆರ್.ಎಸ್.ಎಸ್. ಹಿರಿಯ ಮುಖಂಡ ಸುಧಾಕರ ದೇಶಪಾಂಡೆ ಸಾವನ್ನಪ್ಪಿದ್ದಾರೆ.
ಬೀದರ್ ಜಿಲ್ಲೆ, ಭಾಲ್ಕಿ ತಾಲೂಕಿನ ಭಾತಂಬ್ರಾ ರಸ್ತೆಯಲ್ಲಿ ಇಂದು (ಭಾನುವಾರ) ಈ ದುರ್ಘಟನೆ ಸಂಭವಿಸಿದೆ. ಬೈಕ್ ಹಾಗೂ ಸರ್ಕಾರಿ ಬಸ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಸುಧಾಕರ ದೇಶಪಾಂಡೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಧಾರವಾಡ ಬಳಿ ಮಿನಿ ಬಸ್- ಟಿಪ್ಪರ್ ಡಿಕ್ಕಿ ಪ್ರಕರಣ: ಗಾಯಗೊಂಡಿದ್ದ ಮಾಜಿ ಶಾಸಕನ ಸೊಸೆ ಸಾವು...
ಘಟನೆಯಲ್ಲಿ ಇವರ ಜತೆಗಿದ್ದ ಇನ್ನೋರ್ವ ವ್ಯಕ್ತಿಗೆ ಸಹ ಗಾಯಗಳಾಗಿದ್ದು, ಅವರನ್ನ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಮೃತ ಸುಧಾಕರ್ ದೇಶಪಾಂಡೆ ಅವರು ಹಿಂದೂ ಜಾಗರಣ ವೇದಿಕೆ, ವಿಶ್ವ ಹಿಂದೂ ಪರಿಷತ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರಿಯವಾಗಿದ್ದರು.
ಘಟನೆ ಸಂಬಂಧ ಭಾಲ್ಕಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ