ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ:  ₹47 ಲಕ್ಷ ಮೌಲ್ಯದ ಗಾಂಜಾ ಜಪ್ತಿ

Published : Oct 12, 2023, 07:27 PM IST
ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ:  ₹47 ಲಕ್ಷ ಮೌಲ್ಯದ ಗಾಂಜಾ ಜಪ್ತಿ

ಸಾರಾಂಶ

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಧನ್ನೂರಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 47 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಿದರು.

ವರದಿ- ಲಿಂಗೇಶ್ ಮರಕಲೆ ಏಷ್ಯಾನೆಟ್ ಸುವರ್ಣ ಬೀದರ್,

ಬೀದರ್ (ಅ.12) :  ಬೀದರ್- ನಾಂದೇಡ್ ರಾಷ್ಟ್ರೀಯ ಹೆದ್ದಾರಿ 50ರ ಹಾಲಹಿಪ್ಪರಗಾ ಕ್ರಾಸ್ ಬಳಿ ಆಂಧ್ರಪ್ರದೇಶದಿಂದ  ಮಹಾರಾಷ್ಟ್ರದ ಸೋಲಾಪುರಕ್ಕೆ ಇಂಡಿಕಾ ವಿಸ್ಟಾ ಕಾರ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವೇಳೆ‌ ಖಚಿತ ಮಾಹಿತಿ ಮೇರೆಗೆ ಭಾಲ್ಕಿ ಗ್ರಾಮೀಣ ಠಾಣೆ ಸಿಪಿಐ, ಧನ್ನೂರಾ ಪೊಲೀಸರು ದಾಳಿ ನಡೆಸಿದರು.

ಈ ವೇಳೆ ಕಾರಿನಲ್ಲಿ 25.65 ಲಕ್ಷ ರೂ. ಮೌಲ್ಯದ 25.65 ಕೆ.ಜಿ ಗಾಂಜಾ ಸಿಕ್ಕಿದೆ. ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳ ಬಂಧಿಸಿ ವಿಚಾರಣೆ ನಡೆಸಿದಾಗ ಬೀದರ್ ನಗರದ ಹೊರವಲಯದ ಗುನ್ನಳಿ ರಸ್ತೆ ರಿಕ್ಷಾ ಕಾಲೂನಿ ಮನೆಯೊಂದರಲ್ಲಿ ಗಾಂಜಾ ಶೇಖರಣೆ ಮಾಡಿಟ್ಟಿರುವ ಬಗ್ಗೆ ಆರೋಪಿಗಳು ಮಾಹಿತಿ ಬಿಚ್ಚಿಟ್ಟಿರುವ ಮಾಹಿತಿ ಸಿಕ್ಕಿದೆ. ಕೂಡಲೇ ಆರೋಪಿ ಹೇಳಿದ ವಿಳಾಸದ ಮೇಲೂ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದಾಗ ಅಲ್ಲಿನ ರೂಮ್ ನಲ್ಲಿ 21.44 ಕೆ.ಜಿ ಗಾಂಜಾ ಜಪ್ತಿ ಮಾಡಿರುವ ಪೊಲೀಸರು.

ಅನ್ಯ ಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ಮಗಳ ಕೊಂದ ತಂದೆ..!

ಮನೆ ಕಾಯುತ್ತಿದ್ದ ಇನ್ನೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದರು. ಪೊಲೀಸರ ಕಾರ್ಯಾಚರಣೆಯಲ್ಲಿ ಒಟ್ಟು 41.09ಕೆ.ಜಿ ಗಾಂಜಾ ಜಪ್ತಿ ಮಾಡಲಾಗಿದೆ. ಗಾಂಜಾದ ಅಂದಾಜಿ‌ ಮೌಲ್ಯ 47 ಲಕ್ಷ 5 ಸಾವಿರ ಆದರೆ 3 ಲಕ್ಷ ಮೌಲ್ಯದ ವಿಸ್ಟಾ ಕಾರು ಸೇರಿ ಒಟ್ಟು 55 ಲಕ್ಷದ 5 ಸಾವಿರ ಮೌಲ್ಯದ ಸ್ವತ್ತು ಪೊಲೀಸರು ಜಪ್ತಿ ಮಾಡಿಕೊಳ್ಳಲಾಗಿದೆ ಎಸ್ಪಿ ಚನ್ನಬಸವಣ್ಣ ಲಂಗೋಟಿ ತಿಳಿಸಿದರು.

ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದ್ದು, ಇನ್ನು ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಎಸ್ಪಿ ಹೇಳಿದಾರೆ.

ಮಲಗಿದ್ದಲ್ಲೇ ಹೆಣವಾದ ಅಣ್ಣ-ತಂಗಿ: ಸೂಸೈಡ್ ಅಂದ ಗಂಡ.. ಕೊಲೆ ಎಂದ ಮಗ..!

 

ಕಾರ್ಯಾಚರಣೆ ನಡೆಸಿದ ಭಾಲ್ಕಿ ಗ್ರಾಮೀಣ ಸಿಪಿಐ ಗುರುಪಾದ ಬಿರಾದರ, ಧನ್ನೂರಾ ಪಿಎಸ್ಐ ವಿಶ್ವರಾಧ್ಯ ಸೇರಿದಂತೆ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಪ್ರಶಂಸನೀಯ ಪತ್ರ ನೀಡಿ, ಬಹುಮಾನದ ಪತ್ರ ನೀಡಿ ಎಸ್ಪಿ ಚನ್ನಬಸವಣ್ಣ ಲಂಗೋಟಿ ಗೌರವಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!