ಬೆಂಗಳೂರು ಬಿಜೆಪಿ ಮುಖಂಡ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್, ಡೆತ್​ನೋಟ್​ನಲ್ಲಿ ಹೆಣ್ಣಿನ ರಹಸ್ಯ ಬಯಲು

Published : May 16, 2022, 04:08 PM ISTUpdated : May 16, 2022, 07:32 PM IST
ಬೆಂಗಳೂರು ಬಿಜೆಪಿ ಮುಖಂಡ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್, ಡೆತ್​ನೋಟ್​ನಲ್ಲಿ ಹೆಣ್ಣಿನ ರಹಸ್ಯ ಬಯಲು

ಸಾರಾಂಶ

* ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ * ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಲ್ಲ * ಬದಲಾಗಿ ಹನಿಟ್ರ್ಯಾಪ್​ಗೆ ಬಿಜೆಪಿ ಮುಖಂಡ ಬಲಿ

ಬೆಂಗಳೂರು, (ಮೇ.16): ನಾಲ್ಕು ದಿನದ ಹಿಂದೆ ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಮುಖಂಡ ಅನಂತರಾಜು ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಅನಾರೋಗ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಲ್ಲ, ಬದಲಾಗಿ ಹನಿಟ್ರ್ಯಾಪ್​ಗೆ ಬಿಜೆಪಿ ಮುಖಂಡ ಬಲಿಯಾಗಿದ್ದಾರೆ. ಅವರೇ  ಹನಿಟ್ರ್ಯಾಪ್‌ ಬಲೆಗೆ ಬಿದ್ದಿರುವ ಬಗ್ಗೆ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಹೇರೋಹಳ್ಳಿ ವಾರ್ಡ್​ನ ನಿವಾಸಿ, ಬಿಜೆಪಿ ಮುಖಂಡ ಅನಂತರಾಜು ಮೇ 12ರ ರಾತ್ರಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಬ್ಯಾಡರಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೇಲ್ನೋಟಕ್ಕೆ ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ ಎನ್ನಲಾಗಿತ್ತಾದರೂ ಇದೀಗ ಸ್ಫೋಟಕ ತಿರುವು ಪಡೆದಿದೆ. 

"

ಡೆತ್‌ನೋಟ್‌ನಲ್ಲಿ ಏನಿದೆ?
 'ಪ್ರಿಯ ಸುಮಾ, ನನ್ನನ್ನು ಕ್ಷಮಿಸಿಬಿಡು, ನಿನಗೆ ಮೋಸ ಮಾಡಿದ್ದೇನೆ. ನಿನ್ನಿಂದ ಕ್ಷಮೆ ಕೇಳಲು ಅರ್ಹನಲ್ಲ, ಹೆಣ್ಣಿನ ಸಹವಾಸ ಮಾಡಿ ಅವಳಿಂದ ಫೋಟೋ-ವಿಡಿಯೋಗಳ ಟ್ರ್ಯಾಪ್​ಗೆ ಸಿಲುಕಿ ಬ್ಲ್ಯಾಕ್​ಮೇಲ್​ ಮಾಡಿಸಿಕೊಂಡು ನಿನಗೆ ಮುಖ ತೋರಿಸಲು ಸಾಧ್ಯವಾಗುತ್ತಿಲ್ಲ. ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊ' ಎಂದು ಸಾವಿಗೂ ಮುನ್ನ ಅನಂತರಾಜು ಡೆತ್​ನೋಟ್ ಬರೆದಿಟ್ಟಿದ್ದಾರೆ.

ಬೆಂಗಳೂರು: ಅನಾರೋಗ್ಯದಿಂದ ಮನನೊಂದು ಬಿಜೆಪಿ ಮುಖಂಡ ಆತ್ಮಹತ್ಯೆ

ಅನಂತರಾಜು ಪತ್ನಿ ಕೊಟ್ಟ ದೂರಿನ ಮೇರೆಗೆ ಎಫ್​ಐಆರ್​ ದಾಖಲಾಗಿದೆ. ಕೆ.ಆರ್.ಪುರಂನ ನಿವಾಸಿ ರೇಖಾ ಮತ್ತು ಈಕೆಯ ಪತಿ ವಿನೋದ್ ಹಾಗೂ ಸ್ನೇಹಿತೆ ಸ್ಪಂದನ ಎಂಬುವವರು ಅಶ್ಲೀಲ ಫೋಟೋಗಳನ್ನ ಇಟ್ಟುಕೊಂಡು ಬ್ಲಾಕ್​ಮೇಲ್ ಮಾಡುತ್ತಿದ್ದರು. ಫೇಸ್​ಬುಕ್​ ಮೂಲಕ ರೇಖಾಳ ಪರಿಚಯ ಅನಂತರಾಜು ಆಗಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ರೇಖಾ ಮತ್ತು ಈಕೆಯ ಗಂಡ ವಿನೋದ್​, ಸ್ಪಂದನಾ ಮೂವರು ಸಂಚು ರೂಪಿಸಿ ಅನಂತರಾಜು ಅವರ ಖಾಸಗಿ ಫೋಟೋ ವಿಡಿಯೋ ಇಟ್ಟುಕೊಂಡು ಹಣಕ್ಕಾಗಿ ಹಿಂಸಿಸಿದ್ದಾರೆ. ಇವರ ಕಾಟ ಸಹಿಸಲಾಗದೆ ಈ ಹಿಂದೆಯೂ ಆತ್ಮಹತ್ಯೆಗೆ ಅನಂತರಾಜು ಯತ್ನಿಸಿದ್ದರು.

ಇಷ್ಟಕ್ಕೆ ಸುಮ್ಮನಾಗದ ರೇಖಾ, ಪದೆಪದೇ ಕಾಲ್​ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಳು. ಈ ಬಗ್ಗೆ ಅನಂತರಾಜು ಅವರ ಪತ್ನಿಗೆ ಗೊತ್ತಾಗಿ, ಹೆದರಬೇಡಿ ಎಂದು ಗಂಡನಿಗೆ ಧೈರ್ಯ ತುಂಬಿದ್ದರು. ಆದರೂ ಆ ಗ್ಯಾಂಗ್​ ಬ್ಲ್ಯಾಕ್​ಮೇಲ್​ ಮಾಡುತ್ತಲೇ ಇತ್ತು. ಇದರಿಂದ ಬೇಸತ್ತ ಅನಂತರಾಜು ನೇಣಿಗೆ ಶರಣಾಗಿದ್ದಾರೆ ಎಂದು ಡೆತ್​ನೋಟ್ ಸಮೇತ ದೂರು ನೀಡಿದ್ದಾರೆ. ಇದೀಗ ಆರೋಪಿಗಳಿಗಾಗಿ ಬ್ಯಾಡರಹಳ್ಳಿ ಪೊಲೀಸರು ಬಲೆ ಬೀಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!
ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ