ಫಾಜಿಲ್ ಹತ್ಯೆಗೆ ಸ್ಫೋಟಕ ಟ್ವಿಸ್ಟ್, ಯಾರನ್ನೋ ಟಾರ್ಗೆಟ್ ‌ಮಾಡಿ‌ ಮತ್ತಿನ್ಯಾರನ್ನೋ ಕೊಂದ ಹಂತಕರು

Published : Jul 30, 2022, 04:56 PM IST
ಫಾಜಿಲ್ ಹತ್ಯೆಗೆ ಸ್ಫೋಟಕ ಟ್ವಿಸ್ಟ್, ಯಾರನ್ನೋ ಟಾರ್ಗೆಟ್ ‌ಮಾಡಿ‌ ಮತ್ತಿನ್ಯಾರನ್ನೋ ಕೊಂದ ಹಂತಕರು

ಸಾರಾಂಶ

ಫಾಜಿಲ್ ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ 21 ಶಂಕಿತರನ್ನ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

ದಕ್ಷಿಣ ಕನ್ನಡ, (ಜುಲೈ, 30): ಸುರತ್ಕಲ್ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಯಾರನ್ನೋ ಟಾರ್ಗೆಟ್ ‌ಮಾಡಿ‌ದ್ದ  ಹಂತಕರು ಮತ್ತಿನ್ಯಾರನ್ನೋ ಹತ್ಯೆ ಮಾಡಿದ್ದಾರೆ.

ಹೌದು..... ಎಸ್‌ಡಿಪಿಐ ಮುಖಂಡನ ಕೊಲೆಗೆ ಸ್ಕೆಚ್‌ ಹಾಕಿದ್ದ ಹಂತಕರು, ಆತ ಮಿಸ್ ಆಗಿದ್ದಕ್ಕೆ ಫಾಜಿಲ್ ನನ್ನು ಕೊಂದಿದ್ದಾರೆ ಎನ್ನುವ ಸ್ಫೋಟ ಅಂಶವನ್ನು ಪೊಲೀಸ್ ತನಿಖೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಫಾಜಿಲ್‌ ಹತ್ಯೆ ಹಂತಕರು ಎಸ್‌ಡಿಪಿಐ ಮುಖಂಡನ ಕೊಲೆಗೆ ಸ್ಕೆಚ್ ಹಾಕಿದ್ದರು.

ಫಾಝಿಲ್ ಹತ್ಯೆ: ತನಿಖೆಯಲ್ಲಿ ಲವ್ ಅಫೇರ್ ಅಂಶ ಕಂಡು ಬಂದಿಲ್ಲ: ಮಂಗಳೂರು ಕಮಿಷನರ್ ಶಶಿಕುಮಾರ್ ಸ್ಪಷ್ಟನೆ

ಆ ಎಸ್‌ಡಿಪಿಐ ಮುಖಂಡ  ಪ್ರತಿದಿನ ಅದೇ ಶಾಂಪಿಂಗ್‌ ಮಾಲ್‌ಗಳಿಗೆ ಬರುತ್ತಿದ್ದ. ಅಂದು ಎಸ್‌ಡಿಪಿಐ ಮುಖಂಡ ಬರುತ್ತಿರುವ ಮಾಹಿತಿ ಕಲೆಹಾಕಿದ್ದ ಗ್ಯಾಂಗ್, ಆತನ  ಆಗಮನಕ್ಕಾಗಿ ಕಾಯುತ್ತಿದ್ದರು.  ಆದ್ರೆ ಎಸ್‌ಡಿಪಿಐ ಮುಖಂಡ ಅಲ್ಲಿಗೆ ಬರಲಿಲ್ಲ. ಹೀಗಾಗಿ ಅಲ್ಲೇ ಇದ್ದ ಮೊಬೈಲ್‌ ಅಂಗಡಿ ಮಾಲೀಕನ ಕೊಲೆ ಮಾಡಲು ಸಜ್ಜಾಗಿದ್ದರು. ಮೊಬೈಲ್ ಅಂಗಡಿ ಮಾಲೀಕ ಕೈಗೆ ಸಿಗದ ಕಾರಣ ಪಕ್ಕದಲ್ಲೇ ಇದ್ದ ಫಾಜಿಲ್ ಹತ್ಯೆ ಮಾಡಿದ್ದಾರೆ.

ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಈಗ ದೇಶಾದ್ಯಂತ ಭಾರೀ ಸದ್ದು ಮಾಡಿದೆ.ಈ ನಡುವೆ ಜುಲೈ 28ರಂದು ಫಾಜಿಲ್ ಎನ್ನುವ ಯುವಕನನ್ನು ದುಷ್ಕರ್ಮಿಗಳ ತಂಡ ಚಾಕು ಇರಿದು ಕೊಂದಿದ್ದರು. ಪ್ರವೀಣ ಹತ್ಯೆಗೆ ಬೆಚ್ಚಿ ಬಿದ್ದಿದ್ದ ಕರಾವಳಿಯಲ್ಲಿ ಈಗ ಮತ್ತೆ ನೆತ್ತರು ಹರಿದಿತ್ತು. ಇನ್ನು ಫಾಜಿಲ್ ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ 21 ಶಂಕಿತರನ್ನ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ 21 ಶಂಕಿತರ ವಿಚಾರಣೆ ನಡೆದಿದ್ದು, ಇನ್ನುಷ್ಟು ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.

ಒಟ್ಟಿನಲ್ಲಿ ಇನ್ಯಾರೋ ಮೇಲಿನ ಸಿಟ್ಟಿಗೆ ಫಾಜಿಲ್ ಬಲಿಯಾಗಿರುವುದು ವಿಪರ್ಯಾಸವೇ ಸರಿ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು