ಸಂಬಂಧಿಕರ ಮದುವೆ ಮುಗಿಸಿ ವಾಪಸ್ ಬರುವಾಗ ಬೈಕ್ ಅಪಘಾತ; ಪೊಲೀಸ್ ಪೇದೆ ಸೇರಿ ಇಬ್ಬರ ಸಾವು!

Published : Nov 30, 2023, 11:53 AM ISTUpdated : Nov 30, 2023, 11:57 AM IST
ಸಂಬಂಧಿಕರ ಮದುವೆ ಮುಗಿಸಿ ವಾಪಸ್ ಬರುವಾಗ ಬೈಕ್ ಅಪಘಾತ; ಪೊಲೀಸ್ ಪೇದೆ ಸೇರಿ ಇಬ್ಬರ ಸಾವು!

ಸಾರಾಂಶ

ಸಂಬಂಧಿಗಳ ಮದುವೆ ಮುಗಿಸಿ ವಾಪಸ್ ತೆರಳುತ್ತಿದ್ದಾಗ ಬೈಕ್ ಅಪಘಾತವಾಗಿ ಪೊಲಿಸ್ ಪೇದೆ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಸಿದ್ದರಬೆಟ್ಟ ಬಳಿ ನಡೆದಿದೆ.

ತುಮಕೂರು (ನ.30): ಸಂಬಂಧಿಗಳ ಮದುವೆ ಮುಗಿಸಿ ವಾಪಸ್ ತೆರಳುತ್ತಿದ್ದಾಗ ಬೈಕ್ ಅಪಘಾತವಾಗಿ ಪೊಲಿಸ್ ಪೇದೆ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಸಿದ್ದರಬೆಟ್ಟ ಬಳಿ ನಡೆದಿದೆ.

ಮಹೇಶ್,ಚಂದ್ರಯ್ಯ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿಗಳು. ಮೃತ ಮಹೇಶ್,ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದರು. ನಿನ್ನೆ ಮೂವರು ತಡರಾತ್ರಿ ಒಂದೇ ಬೈಕ್‌ನಲ್ಲಿ ಸಂಬಂಧಿಗಳ ಮದುವೆಗೆ ಬಂದಿದ್ದರು.  

ಮದುವೆ ಮುಗಿಸಿ ವಾಪಸ್ ಊರಿನತ್ತ ತೆರಳುತ್ತಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ವೇಗದಲ್ಲಿದ್ದಾಗಲೇ ರಸ್ತೆ ಮೇಲೆ ಬಿದ್ದು ನಡೆದಿರುವ ಅಪಘಾತ. ಬೈಕ್‌ನಲ್ಲಿದ್ದ ಇನ್ನೊಬ್ಬ ತೀವ್ರ ಗಾಯಗೊಂಡಿದ್ದ ಭರತ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

ತುಮಕೂರು: ಬೆಂಗಳೂರು ಕಂಬಳ‌ ನೋಡಿ ವಾಪಸ್‌ ಬರೋವಾಗ ಭೀಕರ ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು

ಕಾರು ಡಿಕ್ಕಿ;ಬೈಕ್ ಸವಾರ ಸಾವು::

ಚನ್ನಪಟ್ಟಣ: ಕಾರು ಮತ್ತು ಬೈಕ್‌ ನಡುವಿನ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟಿರುವ ಘಟನೆ ತಾಲೂಕಿನ ತಿಟ್ಟಮಾರನಹಳ್ಳಿ ರಾಮಮ್ಮನಕೆರೆ ರೈಲ್ವೆ ಬ್ರಿಡ್ಜ್ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ. ಮೃತ ದುರ್ದೈವಿ ತಿಟ್ಟಮಾರನಹಳ್ಳಿಯ ಶಿವರಾಮು ಗ್ರಾಪಂ ಸದಸ್ಯೆ ರೇಖಾ ಅವರ ಪತಿ. ನಗರದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಶಿವರಾಮು ಅವರಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ಚಿಕ್ಕಬಳ್ಳಾಪುರ: ಗೌರಿಬಿದನೂರಿನ ಕಲ್ಲೂಡಿ ಬಳಿ ಭೀಕರ ಅಪಘಾತ, 7 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ತಿಟ್ಟಮಾರನಹಳ್ಳಿಯಿಂದ ನಗರಕ್ಕೆ ಹೋಗುತ್ತಿದ್ದ ಕಾರು ಮುಂದೆ ಹೋಗುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ, ದ್ವಿಚಕ್ರ ವಾಹನಕ್ಕೆ ಗುದ್ದಿದೆ. ಘಟನೆಯಲ್ಲಿ ತಲೆಗೆ ಗಂಭೀರ ಗಾಯವಾಗಿ ಶಿವರಾಮು ಅವರಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ